Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ

ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಸಲ್ಲಕೆಯಾಗಿರುವ ಮನವಿಗೆ ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಅವರೂ ಮೆಟ್ರೋ ಎಂಡಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
Follow us
Kiran Surya
| Updated By: Ganapathi Sharma

Updated on: Jun 10, 2024 | 10:14 AM

ಬೆಂಗಳೂರು, ಜೂನ್ 10: ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ (Namma Metro) ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿಡಲು ಒತ್ತಡ ಹೆಚ್ಚಾಗಿದೆ. ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಈಗಾಗಲೇ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್​ಸಿಎಲ್ ಉತ್ತರ ನೀಡಿದೆ. ಈಗಾಗಲೇ ಈ ಮಾರ್ಗದ ಕಾಮಗಾರಿ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಪುನೀತ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಪುನೀತ್ ರಾಜ್​​ಕುಮಾರ್ ಹೆಸರಿಡುವಂತೆ ಪ್ರಧಾನಿ, ಸಿಎಂ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಮೆಟ್ರೋ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ನಮ್ಮ ಮೆಟ್ರೋ ಪಿಂಕ್ ಲೈನ್

ನಮ್ಮ ಮೆಟ್ರೋ ಪಿಂಕ್ ಲೈನ್ ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಎಂದೇ ಪರಿಗಣಿಸಲ್ಪಟ್ಟಿದೆ. ಇದರ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಮಾರ್ಗವು 21.26 ಕಿಮೀ ಇದ್ದು, 13.76 ಕಿಮೀ ಭೂಗತ ವಿಭಾಗವನ್ನು ಹೊಂದಿದೆ. 7.5 ಕಿಮೀ ಎತ್ತರದ ವಿಭಾಗವನ್ನು ಹೊಂದಿದೆ. ಇದು ಕಾಳೇನ ಅಗ್ರಹಾರ, ಬನ್ನೇರುಘಟ್ಟ ರಸ್ತೆ, ನಾಗವಾರವನ್ನ ಸಂಪರ್ಕಿಸುತ್ತದೆ. ಇದು 12 ಭೂಗತ ಸೇರಿದಂತೆ 18 ನಿಲ್ದಾಣಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ