AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ

ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಸಲ್ಲಕೆಯಾಗಿರುವ ಮನವಿಗೆ ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಅವರೂ ಮೆಟ್ರೋ ಎಂಡಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
ಕಿರಣ್​ ಸೂರ್ಯ
| Edited By: |

Updated on: Jun 10, 2024 | 10:14 AM

Share

ಬೆಂಗಳೂರು, ಜೂನ್ 10: ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ (Namma Metro) ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿಡಲು ಒತ್ತಡ ಹೆಚ್ಚಾಗಿದೆ. ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಈಗಾಗಲೇ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್​ಸಿಎಲ್ ಉತ್ತರ ನೀಡಿದೆ. ಈಗಾಗಲೇ ಈ ಮಾರ್ಗದ ಕಾಮಗಾರಿ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಪುನೀತ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಪುನೀತ್ ರಾಜ್​​ಕುಮಾರ್ ಹೆಸರಿಡುವಂತೆ ಪ್ರಧಾನಿ, ಸಿಎಂ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಮೆಟ್ರೋ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ನಮ್ಮ ಮೆಟ್ರೋ ಪಿಂಕ್ ಲೈನ್

ನಮ್ಮ ಮೆಟ್ರೋ ಪಿಂಕ್ ಲೈನ್ ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಎಂದೇ ಪರಿಗಣಿಸಲ್ಪಟ್ಟಿದೆ. ಇದರ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಮಾರ್ಗವು 21.26 ಕಿಮೀ ಇದ್ದು, 13.76 ಕಿಮೀ ಭೂಗತ ವಿಭಾಗವನ್ನು ಹೊಂದಿದೆ. 7.5 ಕಿಮೀ ಎತ್ತರದ ವಿಭಾಗವನ್ನು ಹೊಂದಿದೆ. ಇದು ಕಾಳೇನ ಅಗ್ರಹಾರ, ಬನ್ನೇರುಘಟ್ಟ ರಸ್ತೆ, ನಾಗವಾರವನ್ನ ಸಂಪರ್ಕಿಸುತ್ತದೆ. ಇದು 12 ಭೂಗತ ಸೇರಿದಂತೆ 18 ನಿಲ್ದಾಣಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ