ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ

ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಸಲ್ಲಕೆಯಾಗಿರುವ ಮನವಿಗೆ ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಅವರೂ ಮೆಟ್ರೋ ಎಂಡಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
Follow us
| Updated By: ಗಣಪತಿ ಶರ್ಮ

Updated on: Jun 10, 2024 | 10:14 AM

ಬೆಂಗಳೂರು, ಜೂನ್ 10: ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ (Namma Metro) ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿಡಲು ಒತ್ತಡ ಹೆಚ್ಚಾಗಿದೆ. ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಈಗಾಗಲೇ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್​ಸಿಎಲ್ ಉತ್ತರ ನೀಡಿದೆ. ಈಗಾಗಲೇ ಈ ಮಾರ್ಗದ ಕಾಮಗಾರಿ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಪುನೀತ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಪುನೀತ್ ರಾಜ್​​ಕುಮಾರ್ ಹೆಸರಿಡುವಂತೆ ಪ್ರಧಾನಿ, ಸಿಎಂ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಮೆಟ್ರೋ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ನಮ್ಮ ಮೆಟ್ರೋ ಪಿಂಕ್ ಲೈನ್

ನಮ್ಮ ಮೆಟ್ರೋ ಪಿಂಕ್ ಲೈನ್ ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಎಂದೇ ಪರಿಗಣಿಸಲ್ಪಟ್ಟಿದೆ. ಇದರ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಮಾರ್ಗವು 21.26 ಕಿಮೀ ಇದ್ದು, 13.76 ಕಿಮೀ ಭೂಗತ ವಿಭಾಗವನ್ನು ಹೊಂದಿದೆ. 7.5 ಕಿಮೀ ಎತ್ತರದ ವಿಭಾಗವನ್ನು ಹೊಂದಿದೆ. ಇದು ಕಾಳೇನ ಅಗ್ರಹಾರ, ಬನ್ನೇರುಘಟ್ಟ ರಸ್ತೆ, ನಾಗವಾರವನ್ನ ಸಂಪರ್ಕಿಸುತ್ತದೆ. ಇದು 12 ಭೂಗತ ಸೇರಿದಂತೆ 18 ನಿಲ್ದಾಣಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್