ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ

ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಸಲ್ಲಕೆಯಾಗಿರುವ ಮನವಿಗೆ ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಅವರೂ ಮೆಟ್ರೋ ಎಂಡಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
ಪಾಟರಿ ಟೌನ್ ಮೆಟ್ರೋ ಸ್ಟೇಷನ್​ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ: ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ
Follow us
Kiran Surya
| Updated By: Ganapathi Sharma

Updated on: Jun 10, 2024 | 10:14 AM

ಬೆಂಗಳೂರು, ಜೂನ್ 10: ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ (Namma Metro) ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್​ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿಡಲು ಒತ್ತಡ ಹೆಚ್ಚಾಗಿದೆ. ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಈಗಾಗಲೇ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್​ಸಿಎಲ್ ಉತ್ತರ ನೀಡಿದೆ. ಈಗಾಗಲೇ ಈ ಮಾರ್ಗದ ಕಾಮಗಾರಿ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಪುನೀತ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್​​ಗೆ ಪುನೀತ್ ರಾಜ್​​ಕುಮಾರ್ ಹೆಸರಿಡುವಂತೆ ಪ್ರಧಾನಿ, ಸಿಎಂ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಮೆಟ್ರೋ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ನಮ್ಮ ಮೆಟ್ರೋ ಪಿಂಕ್ ಲೈನ್

ನಮ್ಮ ಮೆಟ್ರೋ ಪಿಂಕ್ ಲೈನ್ ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಎಂದೇ ಪರಿಗಣಿಸಲ್ಪಟ್ಟಿದೆ. ಇದರ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಮಾರ್ಗವು 21.26 ಕಿಮೀ ಇದ್ದು, 13.76 ಕಿಮೀ ಭೂಗತ ವಿಭಾಗವನ್ನು ಹೊಂದಿದೆ. 7.5 ಕಿಮೀ ಎತ್ತರದ ವಿಭಾಗವನ್ನು ಹೊಂದಿದೆ. ಇದು ಕಾಳೇನ ಅಗ್ರಹಾರ, ಬನ್ನೇರುಘಟ್ಟ ರಸ್ತೆ, ನಾಗವಾರವನ್ನ ಸಂಪರ್ಕಿಸುತ್ತದೆ. ಇದು 12 ಭೂಗತ ಸೇರಿದಂತೆ 18 ನಿಲ್ದಾಣಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ