AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol bunk Owners Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ತೈಲ ಖರೀದಿ ಕಂಪ್ಲೀಟ್ ಬಂದ್ ಆಗಲಿದೆ.

Petrol bunk Owners Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 30, 2022 | 10:07 AM

Share

ಬೆಂಗಳೂರು: ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್​ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್ ಡಿಸೇಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮುಂದಾಗಿದ್ದು, ತೈಲ ಖರೀದಿ ಕಂಪ್ಲೀಟ್ ಬಂದ್ ಆಗಲಿದೆ. ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ನಡೆಯಲಿದ್ದು, ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಆದರೆ ಈ ಮುಷ್ಕರದಿಂದ ವಾಹನ ‌ಸವಾರರಿಗೆ ಬಹುತೇಕ ಸಮಸ್ಯೆ ಆಗೋದಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಹೇಗಿರಲಿದೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ..ಬೇಡಿಕೆ ಏನು.?

ಪೆಟ್ರೋಲ್ ಬಂಕ್​ನಲ್ಲಿ ಸ್ಟಾಕ್ ಇರೋ ಪೆಟ್ರೋಲ್, ಡಿಸೇಲ್ ಮಾತ್ರ ಪೂರೈಕೆ ಮಾಡಲಾಗುತ್ತೆ. ಬಂಕ್​ಗಳಲ್ಲಿ ಸ್ಟಾಕ್ ಇಲ್ಲಾಂದ್ರೆ ಮಾತ್ರ ತೈಲ ಸಿಗೋದಿಲ್ಲ. ಪ್ರತಿ ಬಂಕ್​ನಲ್ಲಿ ಎರಡರಿಂದ ಮೂರು ದಿನಕ್ಕೆ ಆಗುವಷ್ಟು ತೈಲ ಸ್ಟಾಕ್ ಇರುತ್ತದೆ. ಹಾಗಾಗಿ ನಾಳಿನ ಒಂದು ದಿನದ ಮುಷ್ಕರದಿಂದ ಯಾವುದೇ ಸಮಸ್ಯೆ ಆಗೋದಿಲ್ಲ. ತೈಲ ಕಂಪನಿಗಳು ಮುಂಗಡ ಕಟ್ಟಿದ ಟ್ಯಾಕ್ಸ್ ಮರುಪಾವತಿ ಮಾಡಬೇಕು. ಈ ಹಿನ್ನಲೆ ತೈಲ ಖರೀದಿ ನಿಲ್ಲಿಸಿ ನಾಳೆ ಮುಷ್ಕರ ನಡೆಯಲಿದೆ. ಬೆಂಗಳೂರಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಿದ್ದು, ಶೆಲ್, ನಾಯರಾ ಖಾಸಗಿ ಪೆಟ್ರೋಲಿಯಂ ಕಂಪನಿಗಳೂ ಭಾಗಿಯಾಗಲಿವೆ. ಇದ್ದ ಸ್ಟಾಕ್ ಮಾತ್ರ ನಾಳೆ ಬಂಕ್ಗಳಲ್ಲಿ ದೊರೆಯಲಿದೆ. ತೈಲ ಕಂಪನಿಗಳಿಂದ ನಾಳೆ ಒಂದು ದಿನ ತೈಲ ಖರೀದಿಯನ್ನು ಬಂಕ್ ಮಾಲೀಕರು ನಿಲ್ಲಿಸಿದ್ದಾರೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​