AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೆಟ್ರೋಲ್ ಕಳ್ಳರ ಹಾವಳಿ: ಇವು ಪೊಲೀಸರಿಗೆ ಸಣ್ಣ ಕೇಸ್, ಜನರಿಗೆ ಮಾತ್ರ ದೊಡ್ಡ ತಲೆನೋವು

ನಗರದಲ್ಲಿ ದಿನೇ ದಿನೇ ಪೆಟ್ರೋಲ್-ಡೀಸೆಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಗಾಡಿ ಫುಲ್ ಟ್ಯಾಂಕ್ ಮಾಡಿಸಿ ರಾತ್ರಿ ಮನೆ ಮುಂದೆ ಬೈಕ್ ನಿಲ್ಸಿದ್ರೆ ಸಾಕು, ಬೆಳಕಾಗುಷ್ಟರಲ್ಲಿ ಟ್ಯಾಂಕ್ ಖಾಲಿ ಖಾಲಿಯಾಗಿರುತ್ತದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಕಳ್ಳರ ಹಾವಳಿ: ಇವು ಪೊಲೀಸರಿಗೆ ಸಣ್ಣ ಕೇಸ್, ಜನರಿಗೆ ಮಾತ್ರ ದೊಡ್ಡ ತಲೆನೋವು
ಪೆಟ್ರೋಲ್ ಕಳ್ಳತನ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 20, 2023 | 12:33 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 101 ರೂ ಇದ್ದು ಪ್ರತಿ ದಿನ ವಾಹನಕ್ಕೆ ಇಂಧನ ತುಂಬಿಸಿ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಇದರ ನಡುವೆ ಕೆಲ ದುಷ್ಕರ್ಮಿಗಳು ಮನೆಗಳ ಹೊರಗೆ ನಿಲ್ಲಿಸಿರುವ ವಾಹನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಕದಿಯುವ ಘಟನೆಗಳು ಹೆಚ್ಚಾಗಿವೆ(Petrol Diesel Theft). ಇಂಧನ ಕಳ್ಳರು ವಾಹನಗಳಿಂದ ಇಂಧನವನ್ನು ಕಳ್ಳತನ ಮಾಡುವ ಹಲವು ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಪೊಲೀಸರಿಗೆ ಇದು ಸಣ್ಣ ಕೇಸ್, ಆದ್ರೆ ಜನ್ರಿಗೆ ಮಾತ್ರ ದೊಡ್ಡ ತಲೆ ನೋವಾಗಿದೆ. ನಗರದಲ್ಲಿ ದಿನೇ ದಿನೇ ಪೆಟ್ರೋಲ್-ಡೀಸೆಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಗಾಡಿ ಫುಲ್ ಟ್ಯಾಂಕ್ ಮಾಡಿಸಿ ರಾತ್ರಿ ಮನೆ ಮುಂದೆ ಬೈಕ್ ನಿಲ್ಸಿದ್ರೆ ಸಾಕು, ಬೆಳಕಾಗುಷ್ಟರಲ್ಲಿ ಟ್ಯಾಂಕ್ ಖಾಲಿ ಖಾಲಿಯಾಗಿರುತ್ತದೆ. ಒಂದೊಂದು ಏರಿಯಾದಲ್ಲೂ ಐದರಿಂದ ಆರು ಘಟನೆಗಳು ಬೆಳಕಿಗೆ ಬಂದಿವೆ. ಪೆಟ್ರೋಲ್ ಕಳ್ಳತನ ಎಂದು ಪೊಲೀಸ್ ಸ್ಟೇಷನ್​ಗೆ ಹೋದ್ರೆ ಪೊಲೀಸರು ಇದೊಂದು ಕಾಮಾನ್ ಕೇಸ್ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಎಲ್ಲೂ ಕೇಸ್ ದಾಖಲಾಗುತ್ತಿಲ್ಲ. ಪೊಲೀಸರು ಈ ಬಗ್ಗೆ ತಲೆ ಕೆಡಿಸಿಕೊಳ್ತಿಲ್ಲ. ಹೀಗಾಗಿ ಇಂಧನ ಖದೀಮರು ಆಡಿದ್ದೇ ಆಟವಾಗಿ ಹೋಗಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಮಳೆ, ಹಲವಡೆ ಟ್ರಾಫಿಕ್ ಜಾಮ್ ಅಂಡರ್​ ಪಾಸ್​ ಬಂದ್

ಇನ್ನು ಖದೀಮರು ವಾಹನಗಳಿಂದ ಪೆಟ್ರೋಲ್ ಕಳ್ಳತನ‌ ಮಾಡಿ ಬ್ಲಾಕ್ ನಲ್ಲಿ ಮಾರುತ್ತಿರುವ ಶಂಕೆ ವ್ಯಕ್ತವಾಗಿದೆ. ಇದು ಒಂದು ರೀತಿ ದಂಧೆಯಾಗಿ ಪರಿವರ್ತನೆಯಾಗ್ತಿದ್ಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಇತ್ತ ಪೆಟ್ರೋಲ್ ಕಳ್ಳತನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕಂಪ್ಲೆಂಟ್ಸ್ ಹೆಚ್ಚಾಗುತ್ತಿದೆ. ದಿನೇ ದಿನೇ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್ ಕಳ್ಳತನದ ಬಗ್ಗೆ ಪೊಲೀಸ್ ಕಮಿಷನರ್​ಗೆ ಟ್ಯಾಗ್ ಮಾಡಿ ಜನರು ದೂರು ನೀಡುತ್ತಿದ್ದಾರೆ. ಸಾಲು ಸಾಲು ದೂರು ನೋಡಿ ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ ಗರಂ ಆಗಿದ್ದು ಕೂಡಲೇ ಈ ಬಗ್ಗೆ ಗಮನ ಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:24 pm, Tue, 20 June 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ