AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಗಲಭೆಗಳಿಗೆ RSS ಸಂಘಟನೆಯೇ ಕಾರಣ; ಇಫ್ತಾರ್, ನಮಾಜ್ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗ್ತಾರೆ -PFI ಸಂಘಟನೆ

ಆರ್ಎಸ್ಎಸ್ ಬೇಕು ಅಂತಲೇ ಮುಸಲ್ಮಾನರಿಗೆ ತೊಂದರೆ ಕೊಡ್ತಿದ್ದಾರೆ. ಮಸೀದಿಗಳ ಮುಂದೆ ಮೆರವಣಿಗೆ, ಜೈಕಾರ ಕೂಗುತ್ತಾರೆ. ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿ ವರ್ತನೆ ಮಾಡಿದ್ದಾರೆ. ಈ ವರ್ತನೆಗಳು ಸೂಕ್ತವಲ್ಲ, RSS ಕೂಡಲೇ ಅರಿತುಕೊಳ್ಳಬೇಕು. -PFI ಸಂಘಟನೆ

ಇಂದಿನ ಗಲಭೆಗಳಿಗೆ RSS ಸಂಘಟನೆಯೇ ಕಾರಣ; ಇಫ್ತಾರ್, ನಮಾಜ್ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗ್ತಾರೆ -PFI ಸಂಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 13, 2022 | 4:11 PM

Share

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಮುಸ್ಲಿಂ ಗಲಾಟೆಗೆ RSS ಸಂಘಟನೆಯೇ ಕಾರಣ ಎಂದು PFI ಸಂಘಟನೆ ಆರೋಪಿಸಿದೆ. ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ PFI ಸಂಘಟನೆಯ ರಾಜ್ಯ ಕಾರ್ಯದರ್ಶಿ ಎ.ಕೆ. ಅಷ್ರಫ್, ಇಂದಿನ ಗಲಭೆಗಳಿಗೆ RSS ಸಂಘಟನೆಯೇ ಕಾರಣ. ಹಿಂದು & ಮುಸ್ಲಿಂ ಸಮುದಾಯದ ನಡುವೆ ಗಲಭೆಗೆಯುಂಟು ಮಾಡ್ತಿದೆ. ಗಲಭೆ ಕಾವು ಹೆಚ್ಚಾಗಲಿಕ್ಕೆ ಪ್ರಚೋದನೆ ನೀಡುತ್ತಿದೆ. ರಂಜಾನ್ ಇಫ್ತಾರ್ ವೇಳೆ ಪ್ರಚೋದನಾಕಾರಿ ಘೋಷಣೆ ಕೂಗ್ತಾರೆ ಎಂದು ಆರೋಪಿಸಿದ್ದಾರೆ.

ಆರ್ಎಸ್ಎಸ್ ಬೇಕು ಅಂತಲೇ ಮುಸಲ್ಮಾನರಿಗೆ ತೊಂದರೆ ಕೊಡ್ತಿದ್ದಾರೆ. ಮಸೀದಿಗಳ ಮುಂದೆ ಮೆರವಣಿಗೆ, ಜೈಕಾರ ಕೂಗುತ್ತಾರೆ. ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿ ವರ್ತನೆ ಮಾಡಿದ್ದಾರೆ. ಈ ವರ್ತನೆಗಳು ಸೂಕ್ತವಲ್ಲ, RSS ಕೂಡಲೇ ಅರಿತುಕೊಳ್ಳಬೇಕು. ಇಂತಹ ಪ್ರಚೋದನಾಕಾರಿ ಕೆಲಸಗಳಿಂದ ಹಿಂದೆ ಸರಿಯಬೇಕು. ಮುಂದಿನ ದಿನಗಳಲ್ಲಿ RSS ಸಂಘಟನೆ ವಿರುದ್ಧ ಪ್ರತಿಭಟನೆ ಮಾಡ್ತೀವಿ. ಸರ್ಕಾರ ಈ ಎಲ್ಲಾ ಬೆಳವಣಿಗೆಗಳನ್ನ ಕಂಡೂ ಕಾಣದಂತಿದೆ. ಇಂದು ಎಲ್ಲ ವಿಚಾರದಲ್ಲೂ ಧರ್ಮ ಸಂಘರ್ಷ ಕಾಣುತ್ತಿದ್ದೇವೆ. ಇಂತಹ ಕೋಮು ಗಲಭೆಗಳಿಗೆ ಸರ್ಕಾರ ಅವಕಾಶ ಕೊಡಬಾರದು ಎಂದು PFI ಸಂಘಟನೆಯ ರಾಜ್ಯ ಕಾರ್ಯದರ್ಶಿ ಎ.ಕೆ. ಅಷ್ರಫ್ ತಿಳಿಸಿದ್ದಾರೆ.

ರಾಮನವಮಿ ವೇಳೆ ಬೇಕು ಅಂತಲೇ ಮಸೀದಿಗಳ ಮುಂದೆ ರ್ಯಾಲಿ ಮಾಡಿದ್ರು. ಪ್ರಚೋನೆ ನೀಡುವ ಕೆಲಸಗಳನ್ನ RSS ಮಾಡ್ತಿದೆ. ಇದು ಹಬ್ಬದಂದು ಮಾತ್ರ ನಡೆಯುವುದಿಲ್ಲ. ಹಬ್ಬ ಇವರಿಗೆ ಕೇವಲ ನೆಪವಷ್ಟೆ, ಅನೇಕ ಬಾರಿ ಈ ರೀತಿ ಮಾಡ್ತಾರೆ. ನಮಾಜ್ ವೇಳೆಯೇ ಹೀಗೆ ಮಾಡೋದು ಸರಿಯಲ್ಲ ಎಂದು ಅಷ್ರಫ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂತೋಷ ಸಾವಿನ ಪ್ರಕರಣ ಬಹಳ ಸೂಕ್ಷ್ಮವಾಗಿರುವುದರಿಂದ ತನಿಖೆ ಪೂರ್ತಿಗೊಳ್ಳದೆ ಏನನ್ನೂ ಹೇಳಲಾಗಲ್ಲ: ದೇವಜ್ಯೋತಿ ರೇ, ಐಜಿಪಿ

ಎಲ್ಲ ಮುಸ್ಲಿಮರು, ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌ ಜೊತೆ ಸೇರಲೇಬೇಕು -ಸಚಿವ ಕೆಎಸ್ ಈಶ್ವರಪ್ಪ

Published On - 4:10 pm, Wed, 13 April 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ