AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು
ಪಿಎಫ್ಐ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 20, 2022 | 11:44 AM

Share

ಬೆಂಗಳೂರು: ಅಯೋಧ್ಯೆ ರಾಮಮಂದಿರ (Ayodhya Ram Mandir) ಸ್ಫೋಟಿಸಲು ಪಿಎಫ್​ಐ (PFI) ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿದ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚಿನ ಬಗ್ಗೆ ತಿಳಿಸಿದ್ದಾರೆ.

ಪಿಎಫ್​ಐ ಸಂಚಿನ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿಎಫ್​ಐ ಸಂಚು ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನದ ವ್ಯಕ್ತಿ

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾಟ್ಸ್ಯಾಪ್​ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ಸಂಘಟಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಈ ವಾಟ್ಸ್ಯಾಪ್ ಗ್ರೂಪ್​ನಲ್ಲಿ ಅಫ್ಘಾನಿಸ್ತಾನ ಮತ್ತು ಅರಬ್ ದೇಶಗಳ 175ಕ್ಕೂ ಹೆಚ್ಚು ಸದಸ್ಯರಿದ್ದರು. ಕೆಲ ಸದಸ್ಯರು ವಿದೇಶದಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸಮಾಜ ವಿರೋಧಿ ಕೃತ್ಯಗಳಿಗೆ ಸಂಚು ನಡೆಸಿದ ಆರೋಪದ ಮೇಲೆ ಪಿಎಫ್​ಐ ಸಂಘಟನೆಯನ್ನು ಕೇಂದ್ರ ಸರ್ಕಾರವು ಕಳೆದ ಸೆ 22ರಂದು ಐದು ವರ್ಷಗಳ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿತು.

Published On - 11:44 am, Thu, 20 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?