AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು
ಪಿಎಫ್ಐ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 20, 2022 | 11:44 AM

Share

ಬೆಂಗಳೂರು: ಅಯೋಧ್ಯೆ ರಾಮಮಂದಿರ (Ayodhya Ram Mandir) ಸ್ಫೋಟಿಸಲು ಪಿಎಫ್​ಐ (PFI) ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿದ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚಿನ ಬಗ್ಗೆ ತಿಳಿಸಿದ್ದಾರೆ.

ಪಿಎಫ್​ಐ ಸಂಚಿನ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿಎಫ್​ಐ ಸಂಚು ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನದ ವ್ಯಕ್ತಿ

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾಟ್ಸ್ಯಾಪ್​ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ಸಂಘಟಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಈ ವಾಟ್ಸ್ಯಾಪ್ ಗ್ರೂಪ್​ನಲ್ಲಿ ಅಫ್ಘಾನಿಸ್ತಾನ ಮತ್ತು ಅರಬ್ ದೇಶಗಳ 175ಕ್ಕೂ ಹೆಚ್ಚು ಸದಸ್ಯರಿದ್ದರು. ಕೆಲ ಸದಸ್ಯರು ವಿದೇಶದಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸಮಾಜ ವಿರೋಧಿ ಕೃತ್ಯಗಳಿಗೆ ಸಂಚು ನಡೆಸಿದ ಆರೋಪದ ಮೇಲೆ ಪಿಎಫ್​ಐ ಸಂಘಟನೆಯನ್ನು ಕೇಂದ್ರ ಸರ್ಕಾರವು ಕಳೆದ ಸೆ 22ರಂದು ಐದು ವರ್ಷಗಳ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿತು.

Published On - 11:44 am, Thu, 20 October 22

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ