AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು ರೂಪಿಸಿತ್ತು: ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು
ಪಿಎಫ್ಐ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 20, 2022 | 11:44 AM

Share

ಬೆಂಗಳೂರು: ಅಯೋಧ್ಯೆ ರಾಮಮಂದಿರ (Ayodhya Ram Mandir) ಸ್ಫೋಟಿಸಲು ಪಿಎಫ್​ಐ (PFI) ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ ಪಿಎಫ್​ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿದ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚಿನ ಬಗ್ಗೆ ತಿಳಿಸಿದ್ದಾರೆ.

ಪಿಎಫ್​ಐ ಸಂಚಿನ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿಎಫ್​ಐ ಸಂಚು ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನದ ವ್ಯಕ್ತಿ

ಪಿಎಫ್​ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾಟ್ಸ್ಯಾಪ್​ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ಸಂಘಟಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಈ ವಾಟ್ಸ್ಯಾಪ್ ಗ್ರೂಪ್​ನಲ್ಲಿ ಅಫ್ಘಾನಿಸ್ತಾನ ಮತ್ತು ಅರಬ್ ದೇಶಗಳ 175ಕ್ಕೂ ಹೆಚ್ಚು ಸದಸ್ಯರಿದ್ದರು. ಕೆಲ ಸದಸ್ಯರು ವಿದೇಶದಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸಮಾಜ ವಿರೋಧಿ ಕೃತ್ಯಗಳಿಗೆ ಸಂಚು ನಡೆಸಿದ ಆರೋಪದ ಮೇಲೆ ಪಿಎಫ್​ಐ ಸಂಘಟನೆಯನ್ನು ಕೇಂದ್ರ ಸರ್ಕಾರವು ಕಳೆದ ಸೆ 22ರಂದು ಐದು ವರ್ಷಗಳ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿತು.

Published On - 11:44 am, Thu, 20 October 22

Follow Us
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ