AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೋಕ್ ಕುಮಾರ್ ವಿರುದ್ಧ ಕದ್ದಾಲಿಕೆ ಪ್ರಕರಣ: ಬಿ ರಿಪೋರ್ಟ್ ತಿರಸ್ಕರಿಸಿದ ಸಿಬಿಐ

ಪ್ರಕರಣ ಸಂಬಂಧ ತನಿಖೆ ಮುಂದುವರಿಸಲು ಸೂಚಿಸಿರುವ ಕೋರ್ಟ್​ ಅಂತಿಮ ವರದಿ ಸಲ್ಲಿಸಲು ಸಿಬಿಐಗೆ ಆದೇಶಿಸಿದೆ.

ಅಲೋಕ್ ಕುಮಾರ್ ವಿರುದ್ಧ ಕದ್ದಾಲಿಕೆ ಪ್ರಕರಣ: ಬಿ ರಿಪೋರ್ಟ್ ತಿರಸ್ಕರಿಸಿದ ಸಿಬಿಐ
TV9 Web
| Edited By: |

Updated on:Oct 18, 2021 | 6:48 PM

Share

ಬೆಂಗಳೂರು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ವಿರುದ್ಧ ದಾಖಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಬಿ ರಿಪೋರ್ಟ್​ ಅನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿಸಲು ಸೂಚಿಸಿರುವ ಕೋರ್ಟ್​ ಅಂತಿಮ ವರದಿ ಸಲ್ಲಿಸಲು ಸಿಬಿಐಗೆ ಆದೇಶಿಸಿದೆ.

ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್​ಗೆ ಮತ್ತೋರ್ವ ಎಡಿಜಿಪಿ ಭಾಸ್ಕರ್ ರಾವ್ ತಕರಾರು ಸಲ್ಲಿಸಿದ್ದರು. ಸಿಬಿಐ ಸಲ್ಲಿಸಿರುವ ಬಿ ರಿಪೋರ್ಟ್​ ಅನ್ನೇ ದೋಷಾರೋಪ ಪಟ್ಟಿಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಭಾಸ್ಕರ್ ರಾವ್ ಕೋರಿದ್ದರು. ಈ ಅರ್ಜಿಯನ್ನೂ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ. 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಈ ಸಂಬಂಧ ಸಿಬಿಐನಿಂದಲೇ ಪ್ರಕರಣದ ಮರು ತನಿಖೆ ನಡೆಯಬೇಕು ಎಂದು ನ್ಯಾಯಾಲಯ ಸೂಚಿಸಿತು.

ಸಿಬಿಐ ಜೂನ್ 20ರಂದು ಸಲ್ಲಿಸಿದ್ದ ಬಿ ರಿಪೋರ್ಟ್​ಗೆ ಆಕ್ಷೇಪ ವ್ಯಕ್ತಪಡಿಸಿ ಎಡಿಜಿಪಿ ಭಾಸ್ಕರ್ ರಾವ್ ಸೆಪ್ಟೆಂಬರ್ 1ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಟಿವಿ ಪತ್ರಕರ್ತ ಕುಶಾಲಾ ಸತ್ಯನಾರಾಯಣ ಅವರಿಗೆ ಟಿಲಿಫೋನ್ ಸಂಭಾಷಣೆಯ ಆಡಿಯೊ ಫೈಲ್​ಗಳು ಹೇಗೆ ಸಿಕ್ಕಿತು ಎಂಬ ಬಗ್ಗೆ ಯಾವುದೇ ಆಧಾರಗಳು ಪತ್ತೆಯಾಗಿಲ್ಲ ಎಂದು ಸಿಬಿಐ ಹೇಳಿತ್ತು. ಭಾಸ್ಕರ್ ರಾವ್ ಮತ್ತು ಫಾರಾಜ್ ಅಹ್ಮದ್ ಬೆಂಗಳೂರು ಕಮಿಷನರ್ ಹುದ್ದೆಯ ಬಗ್ಗೆ ನಡೆಸಿದ್ದ ಖಾಸಗಿ ಸಂಭಾಷಣೆ ಈ ಆಡಿಯೊ ಫೈಲ್​ಗಳಲ್ಲಿದ್ದವು.

ಸಿಬಿಐ ವರದಿಯನ್ನು ಒಪ್ಪದ ಭಾಸ್ಕರ್​ ರಾವ್, ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಆಕ್ಷೇಪಿಸಿದ್ದರು. ತಾಂತ್ರಿಕ ಘಟಕದ (Technical Support Centre – TSC) ಹಸ್ತಕ್ಷೇಪ ಈ ಸೋರಿಕೆಯಲ್ಲಿದೆ. ಈ ಘಟಕವು ಅಂದಿನ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ಸುಪರ್ದಿಯಲ್ಲಿತ್ತು. ಹೀಗಾಗಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಭಾಸ್ಕರ್ ರಾವ್ ಆಗ್ರಹಿಸಿದ್ದರು.

ಹೈದರಾಬಾದ್​ನ ವಿಧಿ ವಿಜ್ಞಾನ ಕೇಂದ್ರದ ವರದಿ ಬರುವ ಮೊದಲೇ ಸಿಬಿಐ ಬಿ ರಿಪೋರ್ಟ್​ ಹಾಕಿದೆ ಎಂಬುದು ಭಾಸ್ಕರ್ ರಾವ್ ಅವರ ಮತ್ತೊಂದು ಆಕ್ಷೇಪವಾಗಿತ್ತು. ಅಲೋಕ್​ ಕುಮಾರ್ ಮತ್ತು ಇನ್ನೋರ್ವ ಪೊಲೀಸ್ ಅಧಿಕಾರಿ ಮೀರ್ಝಾ ಅಲಿ ರಾಜಾ ತಮ್ಮ ಫೋನ್​ಗಳನ್ನು ಸಂಭಾಷಣೆಯ ನಂತರ ಫಾರ್ಮ್ಯಾಟ್ ಮಾಡಿದ್ದರಿಂದ ವಿವರ ಹೆಕ್ಕಲು ಸಾಧ್ಯವಾಗಿಲ್ಲ ಎಂದು ಸಿಬಿಐ ವಾದಿಸಿತ್ತು. ಇದನ್ನು ತಮ್ಮ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದ ಭಾಸ್ಕರ್ ರಾವ್, ಸಿಬಿಐ ತಾನು ಪತ್ತೆ ಮಾಡಿರುವ ದಾಖಲೆಗಳನ್ನೂ ತನಿಖೆಗೆ ಪರಿಗಣಿಸುತ್ತಿಲ್ಲ ಎಂದು ಹೇಳಿದ್ದರು.

ಕಳೆದ ಆಗಸ್ಟ್​ 2, 2019ರಲ್ಲಿ ಅಂದಿನ ಬೆಂಗಳೂರು ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರನ್ನು ವರ್ಗಾಯಿಸಿ, ಅವರ ಜಾಗಕ್ಕೆ ಭಾಸ್ಕರ್ ರಾವ್ ಅವರನ್ನು ನಿಯೋಜಿಸಲಾಗಿತ್ತು. ಈ ಬೆಳವಣಿಗೆಯಾದ ಕೇವಲ ಆರು ದಿನಗಳಲ್ಲಿ, ಅಂದರೆ ಆಗಸ್ಟ್ 8, 2019ರಲ್ಲಿ ಟೆಲಿಫೋನ್ ಸಂಭಾಷಣೆಯಿಂದ ಸೋರಿಕೆಯಾದ ಆಡಿಯೊ ತುಣುಕುಗಳನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿತ್ತು. ನಂತರದ ದಿನಗಳಲ್ಲಿ ಇದು ವಿವಾದದ ಸ್ವರೂಪ ಪಡೆದುಕೊಂಡು, ಸಿಬಿಐ ತನಿಖೆ ಆರಂಭವಾಗಿತ್ತು.

ಇದನ್ನೂ ಓದಿ: ADGP ಅಲೋಕ್​ ಕುಮಾರ್ ಮಧುರ ಗಾಯನದ ವಿಡಿಯೋ ವೈರಲ್​.. ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ರಾಷ್ಟ್ರ ಆಳಲ್ಪಡುತ್ತಿರುವುದು ಕಾನೂನುಗಳಿಂದ ಹೊರತು ಶಾಸ್ತ್ರಗಳಿಂದಲ್ಲ: ಉತ್ತರಾಖಂಡ ಹೈಕೋರ್ಟ್​

Published On - 5:28 pm, Mon, 18 October 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ