AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plan B ಸಿದ್ಧ: ಪಾದಯಾತ್ರೆ ವಿಚಾರದಲ್ಲಿ ಜಗ್ಗದ ಕಾಂಗ್ರೆಸ್ ನಾಯಕರು, ಪ್ರತಿ 15 ಕಿಮೀ ಅಂತರದಲ್ಲಿ ಮಿನಿ ಕಿಚನ್ ಸಿದ್ದ

ಖಾಲಿ ಜಮೀನು, ಖಾಸಗಿ ಸ್ಥಳಗಳಲ್ಲಿ ಟೆಂಟ್‌ಗಳ ವ್ಯವಸ್ಥೆ ಮಾಡಿದ್ದು, ಕಲ್ಯಾಣ ಮಂಟಪಗಳಲ್ಲಿ ನಾಯಕರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. 5-6 ಸಾವಿರ ಹಾಸಿಗೆ ಬಾಡಿಗೆಗೆ ಪಡೆಯಲಿರುವ ಕಾಂಗ್ರೆಸ್, ಸ್ಥಳೀಯ ಕಾರ್ಯಕರ್ತರಿಗೆ ಊಟೋಪಚಾರದ ಹೊಣೆ ಹೊತ್ತಿದೆ.

Plan B ಸಿದ್ಧ: ಪಾದಯಾತ್ರೆ ವಿಚಾರದಲ್ಲಿ ಜಗ್ಗದ ಕಾಂಗ್ರೆಸ್ ನಾಯಕರು, ಪ್ರತಿ 15 ಕಿಮೀ ಅಂತರದಲ್ಲಿ ಮಿನಿ ಕಿಚನ್ ಸಿದ್ದ
ಕಾಂಗ್ರೆಸ್‌ನಿಂದ ಪಾದಯಾತ್ರೆ
TV9 Web
| Edited By: |

Updated on:Jan 07, 2022 | 10:24 AM

Share

ಬೆಂಗಳೂರು: ಮೇಕೆದಾಟು ವಿಚಾರವಾಗಿ ಕಾಂಗ್ರೆಸ್‌ (Congress) ಜನವರಿ 9 ರಿಂದ ಪಾದಯಾತ್ರೆಗೆ ಮುಂದಾಗಿದ್ದು, ಆ ಮೂಲಕ ಸರ್ಕಾರಕ್ಕೆ ಸವಾಲ್ ಹಾಕಲು ಸಿದ್ಧವಾಗಿದೆ. ಈ ನಡುವೆ ಕೊರೊನಾ ಹಿನ್ನೆಲೆ ರಾಜ್ಯ ಸರ್ಕಾರ (State Government) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದು (ಜನವರಿ 07) ಸಂಜೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ (Curfew) ಇರಲಿದೆ. ಆದರೆ ಇದಕ್ಕೆ ಜಗ್ಗದ ಕಾಂಗ್ರೆಸ್​ ಸರ್ಕಾರ ಹೋಟೆಲ್, ರೆಸಾರ್ಟ್‌ಗಳನ್ನು ಬಂದ್ ಮಾಡಿದರೆ ಪ್ಲ್ಯಾನ್ ಬಿ ಸಿದ್ಧ ಮಾಡಿಕೊಂಡಿದೆ.

ಖಾಲಿ ಜಮೀನು, ಖಾಸಗಿ ಸ್ಥಳಗಳಲ್ಲಿ ಟೆಂಟ್‌ಗಳ ವ್ಯವಸ್ಥೆ ಮಾಡಿದ್ದು, ಕಲ್ಯಾಣ ಮಂಟಪಗಳಲ್ಲಿ ನಾಯಕರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. 5-6 ಸಾವಿರ ಹಾಸಿಗೆ ಬಾಡಿಗೆಗೆ ಪಡೆಯಲಿರುವ ಕಾಂಗ್ರೆಸ್, ಸ್ಥಳೀಯ ಕಾರ್ಯಕರ್ತರಿಗೆ ಊಟೋಪಚಾರದ ಹೊಣೆ ಹೊತ್ತಿದೆ. ಈಗಾಗಲೇ ಸ್ಥಳೀಯ ಬಾಣಸಿಗರಿಂದ ಅಡುಗೆ ತಯಾರಿಗೆ ಯೋಜನೆ ಮಾಡಿಕೊಂಡಿದೆ. ಅಲ್ಲದೆ ಅಗತ್ಯಕ್ಕೆ ಅನುಗುಣವಾಗಿ ಮಿನಿ ಕಿಚನ್ ತೆರೆಯಲು ಯೋಜನೆ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ 15 ಕಿಲೋಮೀಟರ್ ಅಂತರದಲ್ಲಿ ಮಿನಿ ಕಿಚನ್, 25 ಸಾವಿರಕ್ಕೂ ಅಧಿಕ ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ, ವಾಹನ ಸಂಚಾರಕ್ಕೆ ಸರ್ಕಾರ ಅಡ್ಡಿಪಡಿಸಿದರೂ ಅದಕ್ಕೆ ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನೂ ಖಾಸಗಿ ವಾಹನದಲ್ಲೇ ಓಡಾಟಕ್ಕೆ ಕಾಂಗ್ರೆಸ್ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯರ ಬೈಕ್ ಮೂಲಕ ಸಂಚರಿಸಲು ಕೈ ನಾಯಕರು ನಿರ್ಧಾರ ಮಾಡಿದ್ದಾರೆ. ಪೊಲೀಸರು ತಡೆದರೂ ಮರುದಿನ ಅಲ್ಲಿಂದಲೇ ಪ್ರತಿಭಟನೆಗೆ ಮುಂದಾಗಲಿದ್ದಾರೆ. ಅಲ್ಲದೇ ಬಂಧಿಸಿದರೆ ಆ ಸ್ಥಳದಿಂದಲೇ ಪ್ರತಿಭಟನೆ ನಡೆಸಲಾಗುತ್ತದೆ. ರಸ್ತೆ ಬ್ಲಾಕ್ ಮಾಡಿದರೂ ಸ್ಥಳೀಯರೊಂದಿಗೆ ಪಾದಯಾತ್ರೆ ನಡೆಸಲಾಗುತ್ತದೆ. ಕೊವಿಡ್ ನಿಯಮ ಪಾಲನೆಗೆ ಅಗತ್ಯ ಪರಿಕರಗಳ ಸರಬರಾಜು ಮಾಡಲಾಗುತ್ತದೆ. ಮಾಸ್ಕ್, ಸ್ಯಾನಿಟೈಸರ್, ವೈದ್ಯರು, ಆ್ಯಂಬುಲೆನ್ಸ್ ಕೂಡ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಅಂತರ ಕಾಯ್ದುಕೊಂಡು ಱಲಿಯಲ್ಲಿ ಹೆಜ್ಜೆ ಹಾಕಲು ನಿರ್ಧಾರ ಮಾಡಲಾಗಿದೆ. ಸೆಕ್ಷನ್ 144 ಜಾರಿಯಾದರೂ ಕೇವಲ ಐವರಿಂದ ಪಾದಯಾತ್ರೆ ಮಾಲಾಗುತ್ತದೆ. ಪ್ರತ್ಯೇಕ ಗುಂಪು ಗುಂಪಾಗಿ ಅಂತರ ಕಾಯ್ದುಕೊಂಡು ನಡಿಗೆಗೆ ಕೂಡ ಯೋಜನೆ ಸಿದ್ಧ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜನವರಿ 9ರಿಂದ ಕಾಂಗ್ರೆಸ್ ಪಾದಯಾತ್ರೆ ಮೇಕೆದಾಟು ಯೋಜನೆ ಆರಂಭಿಸಲು ಒತ್ತಾಯಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದ್ದಾರೆ. ಈ ಹಿನ್ನೆಲೆ ರಾಮನಗರ ಜಿಲ್ಲೆಯ ಕನಕಪುರಕ್ಕೆ ಇಂದೇ ‘ಕೈ’ನಾಯಕರು ಆಗಮಿಸುತ್ತಿದ್ದಾರೆ. ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಇಂದೇ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ; ಮೇಕೆದಾಟು ಪಾದಯಾತ್ರೆ ಮೇಲೆ ನೇರ ಕರಿನೆರಳು: ನಾವಿಬ್ಬರೇ ಹೆಜ್ಜೆ ಹಾಕ್ತೀವಿ -ಸಿದ್ಧರಾಮಯ್ಯ

ಸತ್ತರೂ ಸರಿ, ಮೇಕೆದಾಟು ಪಾದಯಾತ್ರೆ ನಿಲ್ಲದು: ಡಿಕೆ ಶಿವಕುಮಾರ್

Published On - 9:28 am, Fri, 7 January 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ