AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್​ಗೆ ಪ್ಲ್ಯಾನ್; ವಿಧಾನಸೌಧದಲ್ಲಿಯೂ ಓಪನ್ ಆಗುತ್ತಾ ಇಂದಿರಾ ಕ್ಯಾಂಟೀನ್?

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕ್ಯಾಂಟೀನ್‌ಗಳಿಗೆ ಮತ್ತೆ ಮರುಜೀವ ಸಿಕ್ಕಿದ್ದು, ಈಗಾಗಲೇ ಬಿಬಿಎಂಪಿಯಿಂದ ಅಗತ್ಯ ಸಿದ್ಧತೆಗಳು ಆರಂಭವಾಗಿವೆ. ಇನ್ನು ಹೊಸ ಊಟದ ಮೆನುನೊಂದಿಗೆ ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದ್ದು, ಬಿಬಿಎಂಪಿಯಿಂದ ಸರ್ಕಾರಕ್ಕೆ ಬೆಲೆ ಏರಿಕೆ ಪ್ರಸ್ತಾವನೆ ನೀಡಿದೆ.

ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್​ಗೆ ಪ್ಲ್ಯಾನ್; ವಿಧಾನಸೌಧದಲ್ಲಿಯೂ ಓಪನ್ ಆಗುತ್ತಾ ಇಂದಿರಾ ಕ್ಯಾಂಟೀನ್?
ಇಂದಿರಾ ಕ್ಯಾಂಟೀನ್​
ಕಿರಣ್ ಹನುಮಂತ್​ ಮಾದಾರ್
|

Updated on:May 26, 2023 | 8:27 AM

Share

ಬೆಂಗಳೂರು: ಬಡವರಿಗೆ ಅತೀ ಕಡಿಮೆ ಬೆಲೆಯಲ್ಲಿ ಅನ್ನ ನೀಡುವ ರಾಜ್ಯದ ‘ಇಂದಿರಾ ಕ್ಯಾಂಟೀನ್​ಗೆ (Indira Canteen) ಕಾಂಗ್ರೆಸ್ ಸರ್ಕಾರ ಮರುಜೀವ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್​ ಅನ್ನು ಕಡೆಗಣಿಸಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕ್ಯಾಂಟೀನ್‌ಗಳಿಗೆ ಮತ್ತೆ ಮರುಜೀವ ಸಿಕ್ಕಿದ್ದು, ಈಗಾಗಲೇ ಬಿಬಿಎಂಪಿ(BBMP)ಯಿಂದ ಅಗತ್ಯ ಸಿದ್ಧತೆಗಳು ಆರಂಭವಾಗಿವೆ. ಇನ್ನು ಹೊಸ ಊಟದ ಮೆನುನೊಂದಿಗೆ ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಅವರಿಂದಲೇ ಮೆನು ರೆಡಿಯಾಗಲಿದೆ. ಈ ಮೂಲಕ ಬೆಂಗಳೂರಿನಲ್ಲಿ 250 ಇಂದೀರಾ ಕ್ಯಾಂಟೀನ್​ ತೆರೆಯಲು ಪ್ಲ್ಯಾನ್ ಮಾಡಲಾಗಿದೆ. ಇನ್ನು ಸರ್ಕಾರ ಬೇಡಿಕೆ ಇಟ್ರೆ, ವಿಧಾನಸೌಧದಲ್ಲಿಯೂ ಇಂದೀರಾ ಕ್ಯಾಂಟೀನ್ ಓಪನ್​ ಆಗಲಿದ್ದು, ಸಚಿವ ಶಾಸಕರಿಗೂ ಇಂದಿರಾ ಕ್ಯಾಂಟೀನ್ ಪುಡ್ ಹೋಗುತ್ತಾ ಎಂಬುದನ್ನ ಕಾದುನೋಡಬೇಕಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಬಡವರಿಗೆ ಸಿಗಲಿದೆ ವೆರೈಟಿ ತಿಂಡಿ ಊಟ

ಹೌದು ಬೆಳಗಿನ ತಿಂಡಿಗೆ ವಿಶೇಷ ತಿಂಡಿ ಖ್ಯಾದ್ಯ, ಮಧ್ಯಾಹ್ನಕ್ಕೆ ಭರ್ಜರಿ ಪುಲ್ ಮಿಲ್ಸ್ ರೆಡಿಯಾಗಲಿದೆ. ಸೋಮುವಾರದಿಂದಲೇ ಮೊಬೈಲ್ ಕ್ಯಾಂಟೀನ್ ಶುರುವಾಗಲಿದ್ದು, ಇಂದಿರಾ ಕ್ಯಾಂಟೀನ್ ಆಹಾರದ ರೂಪರೇಶವನ್ನ ಸಿಎಂ ಸಿದ್ದರಾಮಯ್ಯ ಅವರು ಸಿದ್ದಪಡಿಸಲು ಮುಂದಾಗಿದ್ದಾರೆ. ಇಂದಿರಾ ಕ್ಯಾಂಟೀನ್ ನ್ಯೂ ಮೆನು ಹೀಗಿದೆ.

ತಿಂಡಿ – 2 ಇಡ್ಲಿ 1 ವಡೆ, ಉಪ್ಪಿಟ್ಟು – ಕೇಸರಿಬಾತ್, ಬಿಸಿಬೇಳೆ ಬಾತ್, ಪೂಳಿಯೋಗೆರೆ, ಚಿತ್ರಾನ್ನ , ವಾಂಗಿಬಾತ್, ಟೋಮ್ಯಾಟೋ ಬಾತ್, ರೈಸ್ ಬಾತ್ ಇರಲಿದ್ದು,  ಮಧ್ಯಾಹ್ನ ಊಟಕ್ಕೆ – ಸಿಂಗಲ್ ಚಪಾತಿ, ಒಂದು ವೆಜ್ ಪಲ್ಯಾ, ಕಪ್ ವೈಟ್ ರೈಸ್, ಸಾಂಬಾರ್​ ಹಾಗೂ ರಸಂ ಮುದ್ದೆ, ವೆಜ್ ಪಲ್ಯಾ. ಇನ್ನು ವಾರದಲ್ಲಿ ಮೂರು ದಿನ ಮಧ್ಯಾಹ್ನ ಸ್ವೀಟ್ , ಹೋಳಿಗೆ, ಅಕ್ಕಿಪಾಯಸ, ಕೇಸರಿ ಬಾತ್ ಸೀಗಲಿದೆ. ಇನ್ನು ರಾತ್ರಿ ಅನ್ನ ಸಾಂಬಾರ್​, ರೈಸ್ ಬಾತ್ ಇರಲಿದೆ.

ಇದನ್ನೂ ಓದಿ:Indira Canteen: ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ರೋಟಿ-ಕರಿ ಭಾಗ್ಯ

ಬಿಬಿಎಂಪಿಯಿಂದ ಬೆಲೆ ಏರಿಕೆ ಪ್ರಸ್ತಾವನೆ

ಇನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್ ಗೆ ಹೊಸ ಸ್ವರೂಪ ನೀಡಿ, ಬಡವರ ಪಾಲಿನ ಅನ್ನಪೂರ್ಣೇಶ್ವರಿ ಅಂತ ಕರೆಸಿಕೊಳ್ಳುವ ಇಂದಿರಾ ಕ್ಯಾಂಟೀನ್​ನಲ್ಲಿ ದಿನಕ್ಕೊಂದು ರುಚಿಕರ ಗುಣ್ಣಮಟ್ಟದ ಆಹಾರ ಬಗೆಗಗಳನ್ನೂ ಹೆಚ್ಚಿಸುವ ನಿಟ್ಟಿನಲ್ಲಿ ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ನೀಡಿದ್ದು, ಉಪಹಾರ, ಮಧ್ಯಾಹ್ನ, ರಾತ್ರಿ ತಯಾರಿಸಿ ಬೆಲೆ ಏರಿಕೆಗೆ ಪ್ರಸ್ತಾವನೆ. ಈ ಮೊದಲು ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗ್ಗಿನ ತಿಂಡಿ 5 ರೂ, ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂ ಇತ್ತು. ಇದೀಗ ತಿಂಡಿಗೆ 10 ರೂ. ಹಾಗೂ ಊಟಕ್ಕೆ 20 ರೂ ಬೆಲೆ ನಿಗದಿಗೆ ಪ್ರಸ್ತಾವನೆ ನೀಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:26 am, Fri, 26 May 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ