AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್​ನಿಂದ ವಿನೂತನ ಅಭಿಯಾನಕ್ಕೆ ಪ್ಲ್ಯಾನ್​: ವಿಡಂಬನಾತ್ಮಕ ವಿಡಿಯೋ ಬಿಡುಗಡೆ

ನಾನು ಕರ್ನಾಟಕದ ಪ್ರತಿಯೊಬ್ಬ ನಾಗರೀಕರಿಂದ 40% ಕಮಿಷನ್ ತೆಗೆದುಕೊಳ್ಳುವ ಭರವಸೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪೋಟೋ ಮುದ್ರಣ ಮಾಡಲಾಗಿದೆ.

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್​ನಿಂದ ವಿನೂತನ ಅಭಿಯಾನಕ್ಕೆ ಪ್ಲ್ಯಾನ್​: ವಿಡಂಬನಾತ್ಮಕ ವಿಡಿಯೋ ಬಿಡುಗಡೆ
ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಂದ ಭ್ರಷ್ಟಾಚಾರ ಅಭಿಯಾನ
TV9 Web
| Edited By: |

Updated on:Sep 13, 2022 | 3:24 PM

Share

ಬೆಂಗಳೂರು: 40% ಸರ್ಕಾರ. ಬಿಜೆಪಿ ಅಂದ್ರೆ ಭ್ರಷ್ಟಾಚಾರ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್​ನಿಂದ ವಿಭಿನ್ನ ರೀತಿಯಾಗಿ ಭ್ರಷ್ಟಾಚಾರ ಅಭಿಯಾನಕ್ಕೆ ಪ್ಲ್ಯಾನ್​ ಮಾಡುತ್ತಿದೆ. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಜಂಟಿ ಪ್ರೆಸ್ ಮೀಟ್​ನಲ್ಲಿ ವಿಶೇಷ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ ನೀಡಿದ್ದು, ಭ್ರಷ್ಟಾಚಾರ ಭ್ರಷ್ಟಾಚಾರ ಕಮಿಷನ್ನೇ ಬಿಜೆಪಿಗೆ ಆಹಾರ ಸಾಂಗ್ ರಿಲೀಸ್ ಮಾಡಲಾಯಿತು. ಬ್ಯಾನರ್​ನಲ್ಲಿ 200 ರೂ. ನೋಟ್ ಪ್ರಿಂಟ್ ಮಾಡಿದ ಕಾಂಗ್ರೆಸ್, 200 ರೂ. ನೋಟಿನಲ್ಲಿ ಭ್ರಷ್ಟ ಜನತಾ ಪಕ್ಷ ಅಂದ್ರೆ ಭ್ರಷ್ಟಾಚಾರ, 40% ಕಮಿಷನ್ ಸರ್ಕಾರ, ಹೆಚ್ಚಿನ ಮಾಹಿತಿಗಾಗಿ 8447704040 ಈ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಂಖ್ಯೆ ಮುದ್ರಣ ಮಾಡಲಾಗಿದೆ. ನಾನು ಕರ್ನಾಟಕದ ಪ್ರತಿಯೊಬ್ಬ ನಾಗರೀಕರಿಂದ 40% ಕಮಿಷನ್ ತೆಗೆದುಕೊಳ್ಳುವ ಭರವಸೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪೋಟೋ ಮುದ್ರಣ ಮಾಡಲಾಗಿದೆ. ಕಮಿಷನ್​ನ್ನು ಕರೆನ್ಸಿ ಮಾಡಿದ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್​ ನಾಯಕರು ವಿಡಂಬನಾತ್ಮಕ ವಿಡಿಯೋ ಬಿಡುಗಡೆ:

ರಾಜ್ಯ ಬಿಜೆಪಿ ಸರ್ಕಾರ 40 ಪರ್ಸೆಂಟ್​ ಸರ್ಕಾರವೆಂದು ಕಾಂಗ್ರೆಸ್​ ನಾಯಕರು ವಿಡಂಬನಾತ್ಮಕ ವಿಡಿಯೋ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ 40 ಪರ್ಸೆಂಟ್ ಸರ್ಕಾರ, ಬಿಜೆಪಿ ಅಂದ್ರೆ ಭ್ರಷ್ಟಾಚಾರ ಎಂಬ ವಿಡಿಯೋ ರಿಲೀಸ್​ ಮಾಡಿದ್ದು, 1 ಲಕ್ಷದ 50 ಸಾವಿರ ಕೋಟಿ ಹಣ ದೋಚಿದೆ ಎಂದು ಮಾಹಿತಿ ನೀಡಲಾಗಿದೆ. ಕಮಿಷನ್​ನ್ನು ಕರೆನ್ಸಿ ಮಾಡಿದ ಬಿಜೆಪಿ ಸರ್ಕಾರವೆಂದು ಜಾನಪದ ಗೀತೆ ಶೈಲಿಯಲ್ಲಿ ಭ್ರಷ್ಟಾಚಾರ ಬಗ್ಗೆ ವಿಡಂಬನೆ ಮಾಡಲಾಗಿದೆ. 545 ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ, ಕೊರೊನಾ ಸಂದರ್ಭದಲ್ಲಿ ಜನರ ರಕ್ಷಣೆಗಿಂತ ಹಣ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ಈಗ ಕರಪ್ಶನ್ ಕ್ಯಾಪಿಟಲ್ ಆಫ್‌‌ ಇಂಡಿಯಾ ಆಗಿದೆ: ಡಿ.ಕೆ ಶಿವಕುಮಾರ್

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಕರ್ನಾಟಕ ಈಗ ಕರಪ್ಶನ್ ಕ್ಯಾಪಿಟಲ್ ಆಫ್‌‌ ಇಂಡಿಯಾ ಆಗಿದೆ. ಡಬಲ್‌ ಇಂಜಿನ್ ಸರ್ಕಾರ ಬಂದ ಮೇಲೆ ಬೊಮ್ಮಾಯಿ ಸರ್ಕಾರದ ರೇಟ್ ಕಾರ್ಡ್ ಹಾಕಿ ಯಾವು ಯಾವುದಕ್ಕೆ ಎಷ್ಟೆಷ್ಟು ರೇಟ್ ಅಂತ ಹಾಕಿದೆ. 30% ಟ್ಯಾಕ್ಸ್ ಕಟ್ಟುವುದು ಬೆಂಗಳೂರಿನಿಂದ. ಸಬ್ ಅರ್ಬನ್ ರೈಲಿನ ದೊಡ್ಡ ಘೋಷಣೆ ಮಾಡಿದಿರಿ ಈಗ ಅದು ಏನಾಗಿದೆ ಎಂದರು. ಬರೀ ಭೂಮಿ ಪೂಜೆಯಲ್ಲೇ ಉಳಿದುಕೊಂಡಿದೆ ಹೊರತು ಡಬಲ್ ಇಂಜಿನ್ ಸರ್ಕಾರಕ್ಕೆ ಕೆಲಸ ಮಾಡಕ್ಕಾಗ್ತಿಲ್ಲ.

ಯಾವುದಾದರೂ ರಾಷ್ಟ್ರೀಯ ಯೋಜನೆ ಮಾಡಿದ್ದೀರಾ? ನೀರಾವರಿ ಯೋಜನೆ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಎಲ್ಲದಕ್ಕೂ ಎಲ್ಲ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಆಗಿಬಿಟ್ಟಿದೆ. ಪ್ರತಿದಿನ ನಾವು ನಿಮಗೆ ಕೇಳ್ತಿದ್ದೇವೆ ಉತ್ತರ ಇದೆಯಾ ಅಂತ. ನಿಮ್ನ ಹತ್ರ ನುಡಿದಂತೆ ನಡೆಯೋದಕ್ಕೆ ಆಗ್ತಿಲ್ಲ. ನಮ್ಮ ಪ್ರಶ್ನೆಗಳಿಗೆ ಒಂದಕ್ಕೂ ನಿಮ್ಮತ್ರ ಉತ್ತರ ಕೊಡೋದಕ್ಕಾಗ್ತಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:17 pm, Tue, 13 September 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು