AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳ ಮೆಲುಕು ಹಾಕಿದ ಸಂಜಿತ್ ಹೆಗಡೆ

ಶೀಘ್ರವೇ ಒಂದು ಆಲ್ಬಮ್ ಸಾಂಗ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುವವನಿದ್ದೇನೆ. ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಖುಷಿ ಇದೆ ಎಂದು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳ ಮೆಲುಕು ಹಾಕಿದ ಸಂಜಿತ್ ಹೆಗಡೆ
ಸಂಜಿತ್ ಹೆಗಡೆ
TV9 Web
| Updated By: ganapathi bhat|

Updated on:Jan 05, 2022 | 9:42 PM

Share

ಬೆಂಗಳೂರು: ಟಿವಿ9 ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಕರೆದಾಗ ತುಂಬಾ ಸಂತೋಷದಿಂದ ಬರೋಕೆ ಒಪ್ಪಿಕೊಂಡೆ. ತುಂಬಾ ಖುಷಿ ಆಗ್ತಿದೆ. ನಾನು ತುಂಬಾ ಸಣ್ಣ ಕಲಾವಿದ. ನವನಕ್ಷತ್ರ ಅವಾರ್ಡ್​ಗೆ ನನ್ನನ್ನು ಆಯ್ಕೆ ಮಾಡಿಕೊಂಡಿರುವದಕ್ಕೆ ಟಿವಿ9 ಕನ್ನಡ ವಾಹಿನಿಗೆ ನಾನು ತುಂಬಾ ಆಭಾರಿ ಆಗಿದ್ದೇನೆ ಎಂದು ‘ನವನಕ್ಷತ್ರ’ ಸನ್ಮಾನ ಕಾರ್ಯಕ್ರಮದಲ್ಲಿ ಪುರಸ್ಕಾರ ಪಡೆದುಕೊಂಡ ಗಾಯಕ ಸಂಜಿತ್ ಹೆಗಡೆ ತಿಳಿಸಿದ್ದಾರೆ. ತಮ್ಮ ಬಾಲ್ಯದ ನೆನಪುಗಳು, ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.

ನಾನು ಸಂಗೀತವನ್ನು ಎಷ್ಟು ಪ್ರೀತಿಸುತ್ತೇನೆ ಅಂತಾ ತೋರಿಸಿಕೊಟ್ಟವ್ರು ಅಜ್ಜಿ,. ಅಜ್ಜಿಗೆ ಹಾಡು ಹೇಳಿ ಮಲಗಿಸ್ತಿದ್ದೆ. ಸಂಗೀತದ ಮೊದಲ ಪಾಠ ಕಲಿತದ್ದೆಲ್ಲಾ ಫ್ಯಾಮಿಲಿಯಿಂದ. ಸಂಗೀತದ ಜ್ಞಾನ ಕಲಿಯುವುದಕ್ಕಿಂತ ಸಂಗೀತವನ್ನು ಪ್ರಾಮಾಣಿಕವಾಗಿ ಪ್ರೀತಿಸುವುದು ಹೇಗೆ ಎಂದು ತಂದೆ, ಅಜ್ಜಿಯಿಂದ ತಿಳಿದೆ. ಅದು ದೇವರ ಮುಂದೆ ಕುಳಿತು ಹಾಡುತ್ತಾ ಕಲಿತದ್ದು ಎಂದು ಸಂಜಿತ್ ಹೆಗಡೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

ಸದ್ಯ ಪ್ಲೇ ಬ್ಯಾಕ್ ಸಿಂಗಿಂಗ್ ಬಿಟ್ಟು ಆಲ್ಬಮ್ ಸಾಂಗ್ ಬರೆಯುವತ್ತ ಕೆಲಸ ಮಾಡ್ತಾ ಇದ್ದೇನೆ. ಅದರಲ್ಲಿ ಸುಮಾರು 10-11 ಹಾಡುಗಳು ಇರಲಿದೆ. ಶೀಘ್ರವೇ ಒಂದು ಆಲ್ಬಮ್ ಸಾಂಗ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುವವನಿದ್ದೇನೆ. ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಖುಷಿ ಇದೆ ಎಂದು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎಲೆಮರೆಯಲ್ಲಿ ಕೆಲಸ ಮಾಡುವ ರೈತನನ್ನು ಗುರುತಿಸಿರುವುದು ಸಂತಸ ತಂದಿದೆ: ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಬೋರೇಗೌಡ

ಇದನ್ನೂ ಓದಿ: ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ

Published On - 9:42 pm, Wed, 5 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ