ಆರ್ಯಭಟ, ಭಾಸ್ಕರಾಚಾರ್ಯ, ಬ್ರಹ್ಮಗುಪ್ತ; ಪ್ರಧಾನಿ ಮೋದಿ ಭಾಷಣದಲ್ಲಿ ಇನ್ನೂ ಏನೇನು? ಇಲ್ಲಿದೆ ಹೈಲೈಟ್ಸ್
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಇಸ್ರೋಗೆ ಭೇಟಿ ನೀಡಿದರು. ಈ ವೇಳೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಇವರ ಭಾಷಣದ ಆಸಕ್ತಿದಾಯಕ ಅಂಶಗಳು ಇಲ್ಲಿವೆ.
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
Updated on:
Aug 26, 2023 | 9:55 AM
ಬೆಂಗಳೂರು: ಚಂದ್ರಯಾನ-3 (Chandrayaana-3) ಯಶಸ್ವಿ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಂ ಲ್ಯಾಂಡರ್ ಲ್ಯಾಂಡ್ ಆಗುವ ಮೂಲಕ ಇತಿಹಾಸ ಸೃಷ್ಠಿಸಿದೆ. ಈ ಮಹತ್ತರ ಕಾರ್ಯಕ್ಕೆ ಶ್ರಮಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧಾನ ಸಂಸ್ಥೆ (ISRO) ವಿಜ್ಞಾನಿಗಳನ್ನು ಜಗತ್ತೇ ಕೊಂಡಾಡುತ್ತಿದೆ. ಈ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು (ಆ.26) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ದಕ್ಷಿಣ ಆಫ್ರಿಕಾ, ಗ್ರೀಕ್ ಪ್ರವಾಸ ಮುಗಿಸಿಕೊಂಡು ನೇರವಾಗಿ ಬೆಂಗಳೂರಿಗೆ ಆಗಮಿಸದ್ದರು.
ಇಲ್ಲಿಯ ಪಿಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. ಅಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಚಂದ್ರಯಾನ-3 ಯೋಜನೆ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದರು. ನಂತರ ಪ್ರಧಾನಿ ಮೋದಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಇವರ ಭಾಷಣದ ಕೆಲವು ಹೈಲೆಟ್ ಅಂಶಗಳು ಇಲ್ಲಿವೆ.