AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ

51 ವರ್ಷಗಳ ನಂತರ ಮತ್ತೊಮ್ಮೆ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕಕ್ಕೆ ತಮ್ಮ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿದ್ದ ಬೆಂಗಳೂರಿನ ಬಿಜೆಪಿ ಶಾಸಕ ಸುರೇಶ್ ಕುಮಾರ್ 702 ಕಿ.ಮೀ ಸೈಕಲ್​ನಲ್ಲೇ ಪ್ರಯಾಣಿಸಿದ್ದರು. ಅಷ್ಟೇ ಅಲ್ಲದೆ, 2025ರಲ್ಲಿ ಅವರು ಒಟ್ಟು 8,000 ಕಿ.ಮೀ. ಸೈಕಲ್ ಸವಾರಿ ಮಾಡಿದ್ದರು. ಅವರ ಈ ಸಾಧನೆಗೆ ಮತ್ತು ಸೈಕ್ಲಿಂಗ್ ಕುರಿತಾದ ಪ್ರೀತಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ
Suresh Kumar Cycling
ಸುಷ್ಮಾ ಚಕ್ರೆ
|

Updated on:Jan 01, 2026 | 10:49 PM

Share

ಬೆಂಗಳೂರು, ಜನವರಿ 1: ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ 702 ಕಿ.ಮೀ ಸೈಕಲ್ ಸವಾರಿ ಮಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರನ್ನು ಪ್ರಧಾನಿ ಮೋದಿ (PM Modi) ಶ್ಲಾಘಿಸಿದ್ದಾರೆ. “ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಸಮಸ್ಯೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ. ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

70 ವರ್ಷದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಇತ್ತೀಚೆಗೆ ತಿಂಗಳುಗಟ್ಟಲೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಪರೂಪದ ನರವೈಜ್ಞಾನಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಆದರೂ 5 ದಿನಗಳ ಕಾಲ ಈ ಸವಾಲಿನ 702 ಕಿ.ಮೀ ಪ್ರಯಾಣವನ್ನು ಸೈಕಲ್​ನಲ್ಲೇ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: New Year 2026: ಹೊಸ ವರ್ಷದ ಶುಭಾಶಯ ತಿಳಿಸಿ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ

ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಪ್ರಧಾನಿ ಮೋದಿಯವರೇ ಕರೆ ಮಾಡಿ ಅಭಿನಂದಿಸಿದ್ದಕ್ಕೆ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ. “ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ನಾನು 51 ವರ್ಷಗಳ ನಂತರ ನನ್ನ ಸೈಕ್ಲಿಂಗ್ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಪ್ರಯಾಣ ಮಾಡಿದ್ದೇನೆ. ಕನ್ಯಾಕುಮಾರಿಗೆ ಇದು ನನ್ನ ಎರಡನೇ ಸೈಕ್ಲಿಂಗ್ ಎಂದು ತಿಳಿದು ಪ್ರಧಾನಿ ಮೋದಿ ಸಂತೋಷಪಟ್ಟರು. 2025ರಲ್ಲಿ ನಮ್ಮ ತಂಡ 8,000 ಕಿ.ಮೀ ದೂರದಷ್ಟು ಸೈಕ್ಲಿಂಗ್ ಮಾಡಿರುವ ಮಾಹಿತಿ ಪಡೆದು ತಮ್ಮ ಅಚ್ಚರಿ ಮತ್ತು ಸಂತಸ ಎರಡನ್ನೂ ವ್ಯಕ್ತಪಡಿಸಿದರು. ಅದರಲ್ಲೂ ತೀವ್ರ ಅನಾರೋಗ್ಯದ ನಂತರ ನಾನು ಈ ಕಾರ್ಯ ಕೈಗೊಂಡ ಬಗ್ಗೆ ಪ್ರಧಾನ ಮಂತ್ರಿಗಳು ನನ್ನ ಬೆನ್ನು ತಟ್ಟಿದ್ದು ನನ್ನ ಸುಕೃತ” ಎಂದು ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವರೂ ಆಗಿರುವ ಸುರೇಶ್ ಕುಮಾರ್ ಅವರು “ರಾಜಾಜಿನಗರ ಪೆಡಲ್ ಪವರ್’ ಬ್ಯಾನರ್ ಅಡಿಯಲ್ಲಿ ಯುವಕರೊಂದಿಗೆ 5 ದಿನಗಳ, 702 ಕಿಮೀ ಸೈಕಲ್ ಸವಾರಿಯನ್ನು ಮಾಡಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Thu, 1 January 26

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ