AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 19 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ: ರೋಡ್​ ಶೋ ಸಾಧ್ಯತೆ

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನಿಗದಿಯಾಗಿದೆ. ಜನವರಿ 19ರಂದು ಖೇಲೋ ಇಂಡಿಯಾ ಹಾಗೂ ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಸಂದರ್ಭದಲ್ಲಿ ಬೆಂಗಳುರಿಗೆ ಭೇಟಿ ನೀಡಲಿರುವ ಮೋದಿ ರೋಡ್ ಶೋ ಕೂಡ ನಡೆಸುವ ಸಾಧ್ಯತೆ ಇದೆ.

ಜನವರಿ 19 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ: ರೋಡ್​ ಶೋ ಸಾಧ್ಯತೆ
ಜನವರಿ 19 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ: ರೋಡ್​ ಶೋ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on:Jan 16, 2024 | 11:36 AM

Share

ಬೆಂಗಳೂರು, ಜನವರಿ 16: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಜನವರಿ 19 ರಂದು ಶುಕ್ರವಾರ ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರೋಡ್​ ಶೋ ಕೂಡ ನಡೆಸುವ ಸಾಧ್ಯತೆ ಇದೆ. ಖೇಲೋ ಇಂಡಿಯಾ ಹಾಗೂ ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಸಂದರ್ಭದಲ್ಲಿ ಮೋದಿ ಅವರು ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ಜನವರಿ 19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆ ಮಾಡಲಾಗಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್​ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ.

ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಇದ್ದಾರೆ ಎನ್ನಲಾಗಿದೆ.

ಈ ಹಿಂದೆ ಚಂದ್ರಯಾನ ಯೋಜನೆಯ ಯಶಸ್ಸಿನ ಬಳಿಕ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆಂದೇ ಪ್ರಧಾನಿ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭ ಪ್ರಧಾನಿಯವರು ರೋಡ್​ ಶೋ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿಕೆ ನೀಡಿ ನಂತರ ಮುಜುಗರಕ್ಕೀಡಾದ ಸನ್ನಿವೇಶ ಸೃಷ್ಟಿಯಾಗಿತ್ತು. ಯಾಕೆಂದರೆ, ಬಿಜೆಪಿ ನಾಯಕರ ಹೇಳಿಕೆಗಳ ಬೆನ್ನಲ್ಲೇ ರೋಡ್​​ ಶೋ ಉದ್ದೇಶವಿಲ್ಲ ಎಂದು ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ಬಂದಿತ್ತು.

ಇದನ್ನೂ ಓದಿ: ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ: ಪೂಜಿಸಲೆಂದೇ ಹೂಗಳ ತಂದೆ ಹಾಡಿಗೆ ಮೆಚ್ಚುಗೆ

ನಂತರ, ಪ್ರಧಾನಿ ಭೇಟಿ ವೇಳೆ ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರಳದ ವಿಚಾರವೂ ರಾಜ್ಯ ರಾಜಕೀಯದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಸಿಎಂ ಹಾಗೂ ಡಿಸಿಎಂ ಶಿಷ್ಟಾಚಾರ ಪಾಲಿಸಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ, ಪ್ರಧಾನಿ ಕಾರ್ಯಾಲಯದಿಂದಲೇ ಸೂಚನೆ ಬಂದ ಕಾರಣ ತಾವು ಅವರನ್ನು ಸ್ವಾಗತಿಸಲು ತೆರಳಲಿಲ್ಲ ಎಂದು ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದ್ದರು. ಇದು ಸಹ ರಾಜ್ಯ ಬಿಜೆಪಿ ನಾಯಕರನ್ನು ಮುಜುಗರಕ್ಕೀಡುಮಾಡಿತ್ತು. ಹೀಗಾಗಿ ಈ ಬಾರಿ ಹೆಚ್ಚು ಎಚ್ಚರಿಕೆ ಹೆಜ್ಜ ಇಡಲು ಅವರು ಯೋಜಿಸಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:23 am, Tue, 16 January 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ