AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿನ ಇಸ್ರೋ ಸೆಂಟರ್‌ಗೆ ಪ್ರಧಾನಿ ಮೋದಿ: ರೂಟ್ ಮ್ಯಾಪ್ ಹೀಗಿದೆ

ದಕ್ಷಿಣ ಆಫ್ರಿಕಾ, ಗ್ರೀಕ್ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧನೆ ಮಾಡಿದ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ನೇರವಾಗಿ ಬೆಳಗ್ಗೆ ಬೆಂಗಳೂರಿಗೆ ಹೆಚ್‌ಎಎಲ್‌ ಏರ್‌ಪೋರ್ಟ್‌ ಆಗಮಿಸಲಿದ್ದು, ಅಲ್ಲಿಂದ ಇಸ್ರೋ ಸೆಂಟರ್‌ಗೆ ತೆರಳಲಿದ್ದಾರೆ. ಇಂದು ಪ್ರಧಾನಿ ಮೋದಿ ಸಂಚರಿಸಲಿರುವ ರೂಟ್ ಮ್ಯಾಪ್​ ಹೀಗಿದೆ.

ಇಂದು ಬೆಂಗಳೂರಿನ ಇಸ್ರೋ ಸೆಂಟರ್‌ಗೆ ಪ್ರಧಾನಿ ಮೋದಿ: ರೂಟ್ ಮ್ಯಾಪ್ ಹೀಗಿದೆ
ಪ್ರಧಾನಿ ನರೇಂದ್ರ ಮೋದಿ
ಗಂಗಾಧರ​ ಬ. ಸಾಬೋಜಿ
| Edited By: |

Updated on:Aug 26, 2023 | 5:43 AM

Share

ಬೆಂಗಳೂರು, ಆಗಸ್ಟ್​ 26: ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ. ಹೀಗಾಗಿ ಸಾಧನೆ ಮಾಡಿದ ವಿಜ್ಞಾನಿಗಳ ಅಭಿನಂದಿಸಲು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆ.26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪೀಣ್ಯದಲ್ಲಿರುವ ಇಸ್ರೋ (ISRO) ಸೆಂಟರ್‌ಗೆ ಭೇಟಿ ನೀಡಿ, ವಿಜ್ಞಾನಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಮೋದಿ ಬರುವ ಮಾರ್ಗದಲ್ಲಿ ಸಂಚಾರ ಬಂದ್ ಆಗಿರಲಿದೆ. ದಕ್ಷಿಣ ಆಫ್ರಿಕಾ, ಗ್ರೀಕ್ ಪ್ರವಾಸ ಮುಗಿಸಿರುವ ಪ್ರಧಾನಿ ಮೋದಿ, ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿಗೆ ಹೆಚ್‌ಎಎಲ್‌ ಏರ್‌ಪೋರ್ಟ್‌ ಆಗಮಿಸಲಿರುವ ಮೋದಿ, ಅಲ್ಲಿಂದ ನೇರವಾಗಿ ಇಸ್ರೋ ಸೆಂಟರ್‌ಗೆ ಆಗಮಿಸಲಿದ್ದಾರೆ.

ರೂಟ್ ಮ್ಯಾಪ್

ನಾಳೆ ಬೆಳಗ್ಗೆ 6 ಗಂಟೆಗೆ HAL ಏರ್‌ಪೋರ್ಟ್‌ಗೆ ಮೋದಿ ಆಗಮಿಸಲಿದ್ದು, 6.30ಕ್ಕೆ ಏರ್‌ಪೋರ್ಟ್‌ನಿಂದ ನಿರ್ಗಮಿಸಲಿದ್ದಾರೆ. HAL ಏರ್‌ಪೋರ್ಟ್‌ನಿಂದ ಓಲ್ಡ್‌ ಮದ್ರಾಸ್‌ ರೋಡ್ ಮಾರ್ಗವಾಗಿ ಟ್ರಿನಿಟಿ ಸರ್ಕಲ್‌ ತಲುಪಲಿದ್ದಾರೆ. ಅಲ್ಲಿಂದ ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್, ಬಳ್ಳಾರಿ ರಸ್ತೆ, ಕಾವೇರಿ ಜಂಕ್ಷನ್, ಸ್ಯಾಂಕಿ ಟ್ಯಾಂಕ್ ರಸ್ತೆಯ ಮಾರ್ಗವಾಗಿ ಯಶವಂತಪುರ ತಲುಪಲಿದ್ದಾರೆ. ಅಲ್ಲಿಂದ ತುಮಕೂರು ರಸ್ತೆಯ ಮಾರ್ಗವಾಗಿ ಗೊರಗೊಂಟೆ ಪಾಳ್ಯ, ಜಾಲಹಳ್ಳಿ ಕ್ರಾಸ್ ಮಾರ್ಗವಾಗಿ ಪೀಣ್ಯ ಇಸ್ರೋಗೆ ತಲುಪಲಿದ್ದಾರೆ.

ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ಆ.26ರಂದು ಬೆಂಗಳೂರಿಗೆ ನರೇಂದ್ರ ಮೋದಿ, ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ, ಎಲ್ಲೆಲ್ಲಿ ನೋಡಿ..

8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಮೋದಿ ಸಭೆ ನಡೆಸಲಿದ್ದಾರೆ. ಇದೇ ವೇಳೆ ಇಸ್ರೋ ವಿಜ್ಞಾನಿಗಳನ್ನ ಅಭಿನಂದಿಸಲಿದ್ದಾರೆ. ಬಳಿಕ ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ಮೋದಿ ನಿರ್ಗಮಿಸಲಿದ್ದಾರೆ. ರಸ್ತೆ ಮಾರ್ಗದಲ್ಲಿ ಪ್ರಧಾನಿ ಮೋದಿ ತೆರಳಲಿದ್ದಾರೆ. ಹೀಗಾಗಿ ಮೋದಿ ಸಾಗುವ ಮಾರ್ಗದಲ್ಲಿ ಸಂಚಾರ ನಿರ್ಬಂಧ ಇರಲಿದ್ದು, ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಯಾವುದೇ ರೋಡ್‌ ಶೋ ಪ್ಲ್ಯಾನ್ ಇಲ್ಲ: ಸಚಿವ ಶೋಭಾ ಕರಂದ್ಲಾಜೆ

ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದಾಕ್ಷಣ ರಾಜ್ಯ ಬಿಜೆಪಿ ನಾಯಕರೆಲ್ಲ ಅಲರ್ಟ್ ಆಗಿದ್ದು, ನಿನ್ನೆಯೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅದ್ದೂರಿ ಸ್ವಾಗತ ಕೋರುವ ಪ್ಲ್ಯಾನ್ ಮಾಡಿದ್ದರು. 1 ಕಿಲೋ ಮೀಟರ್ ರೋಡ್‌ ಶೋ ನಡೆಸಲಾಗುತ್ತೆ ಅಂತ ಹೇಳಲಾಗಿತ್ತು. ಆದರೆ ಅಧಿಕೃತವಾಗಿ ಯಾವುದೇ ರೋಡ್‌ ಶೋ ಪ್ಲ್ಯಾನ್ ಇಲ್ಲ ಅಂತಾ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಹೆಚ್‌ಎಎಲ್‌ನಿಂದ ಪೀಣ್ಯದ ಇಸ್ರೋ ಕೇಂದ್ರದವರೆಗೂ ಸೂಕ್ತ ಭದ್ರತೆ

ಕೆಲ ಸ್ಥಳಗಳಲ್ಲಿ ಜನರು ಜಮಾಯಿಸುವ ಸಾಧ್ಯತೆ ಬಗ್ಗೆ ಮಾಹಿತಿ ಇದೆ. ಆದರೆ ಇಂದು ಅಧಿಕೃತವಾಗಿ ಪ್ರಧಾನಮಂತ್ರಿ ಮೋದಿ ರೋಡ್‌ ಶೋ ಇರಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ಸ್ಪಷ್ಟನೆ ನೀಡಿದ್ದಾರೆ. ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಾರೆ. ಹೆಚ್‌ಎಎಲ್‌ನಿಂದ ಪೀಣ್ಯದ ಇಸ್ರೋ ಕೇಂದ್ರದವರೆಗೂ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:07 pm, Fri, 25 August 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ