AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಾಳೆ ಮೋದಿ ರೋಡ್​ ಶೋ; 23 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ, ಇಲ್ಲಿದೆ ವಿವರ

ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ರೋಡ್​ ಶೋ ನಾಳೆ (ಮೇ 7) ಬೆಂಗಳೂರಿನಲ್ಲಿ ನಡೆಯಲಿದೆ. ನಗರದ 23 ರಸ್ತೆಗಳಲ್ಲಿ ಮೋದಿ ಸಂಚರಿಸಲಿದ್ದು, ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬೆಂಗಳೂರಲ್ಲಿ ನಾಳೆ ಮೋದಿ ರೋಡ್​ ಶೋ; 23 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ, ಇಲ್ಲಿದೆ ವಿವರ
ಬೆಂಗಳೂರಿನಲ್ಲಿ ಮೋದಿ ರೋಡ್​ ಶೋ
ಗಣಪತಿ ಶರ್ಮಾ
|

Updated on: May 06, 2023 | 6:55 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಎರಡನೇ ರೋಡ್​ ಶೋ ನಾಳೆ (ಮೇ 7) ಬೆಂಗಳೂರಿನಲ್ಲಿ ನಡೆಯಲಿದೆ. ನಗರದ 23 ರಸ್ತೆಗಳಲ್ಲಿ ಮೋದಿ ಸಂಚರಿಸಲಿದ್ದು, ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ 11.30ರ ಅವಧಿಯಲ್ಲಿ ರೋಡ್ ಶೋ ನಡೆಯಲಿದೆ. ಬೆಳಗ್ಗೆ 8ರಿಂದ 12 ಗಂಟೆಯ ವರೆಗೆ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೋದಿ ಅವರ ಮೊದಲ ರೋಡ್ ಶೋ ಇಂದು (ಶನಿವಾರ) ಭರ್ಜರಿಯಾಗಿ ನಡೆದಿತ್ತು. ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವಿಚಾರವಾಗಿ ಮೋದಿ ಹರ್ಷ ವ್ಯಕ್ತಪಡಿಸಿದ್ದರು.

ಭಾನುವಾರ ಸಂಚಾರಕ್ಕೆ ನಿರ್ಬಂಧ ಹೇರಿರುವ ರಸ್ತೆಗಳ ವಿವರ ಇಲ್ಲಿದೆ.

  • ರಾಜಭವನ ರಸ್ತೆ
  • ಮೇಖ್ರಿ ಸರ್ಕಲ್
  • ರೇಸ್​​ಕೋರ್ಸ್ ರಸ್ತೆ
  • ಟಿ ಚೌಡಯ್ಯ ರಸ್ತೆ
  • ರಮಣಮಹರ್ಷಿ ರಸ್ತೆ
  • ಹಳೆ ವಿಮಾನನಿಲ್ದಾಣ ರಸ್ತೆ
  • ಸುರಂಜನ್​ದಾಸ್ ರಸ್ತೆ
  • ಎಂಜಿ ರಸ್ತೆ
  • ಬ್ರಿಗೇಡ್ ರಸ್ತೆ
  • ರೇಸ್​​ಕೋರ್ಸ್ ರಸ್ತೆ
  • ಟಿ ಚೌಡಯ್ಯ ರಸ್ತೆ
  • ರಮಣಮಹರ್ಷಿ ರಸ್ತೆ
  • ಜಗದೀಶ ನಗರ ಕ್ರಾಸ್ ರಸ್ತೆ
  • ಜೆಬಿ ನಗರ ಮುಖ್ಯ ರಸ್ತೆ
  • ಬಿಇಎಂಎಲ್ ಜಂಕ್ಷನ್
  • ನ್ಯೂ ತಿಪ್ಪಸಂದ್ರ ಮಾರ್ಕೆಟ್ ರಸ್ತೆ
  • 80 ಅಡಿ ರಸ್ತೆ ಇಂದಿರಾನಗರ
  • ನ್ಯೂ ತಿಪ್ಪಸಂದ್ರ ರಸ್ತೆ
  • 12ನೇ ಮುಖ್ಯ ರಸ್ತೆ 100 ಅಡಿ ರಸ್ತೆ, ಇಂದಿರಾ ನಗರ, ಕಾವೇರಿ ಸ್ಕೂಲ್
  • ಸಿಎಂಎಚ್ ರಸ್ತೆ
  • 17ನೇ ಕ್ರಾಸ್, ಆದರ್ಶ ಜಂಕ್ಷನ್
  • ಹಲಸೂರು ಮೆಟ್ರೋ ಸ್ಟೇಷನ್
  • ಟ್ರಿನಿಟಿ ಜಂಕ್ಷನ್

ಯಾವೆಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ?

ಮೋದಿ ಅವರ ರೋಡ್​ ಶೋ ಭಾನುವಾರ ಮಹದೇವಪುರ, ಕೆಆರ್​ ಪುರಂ, ಸಿವಿ ರಾಮನ್ ನಗರ, ಶಿವಾಜಿನಗರ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಹಾದುಹೋಗಲಿದೆ.

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತಗಳನ್ನು ಕ್ರೋಢೀಕರಿಸಲು ಬಿಜೆಪಿಯ ಕೊನೆಯ ಪ್ರಯತ್ನದ ಭಾಗವಾಗಿ ಎರಡು ರೋಡ್‌ಶೋಗಳು ನಡೆಯುತ್ತಿವೆ. ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ 26 ಕಿಲೋಮೀಟರ್ ವ್ಯಾಪ್ತಿಯ ರೋಡ್ ಶೋ ನಡೆಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ