AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಾಳೆ ಮೋದಿ ರೋಡ್​ ಶೋ; 23 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ, ಇಲ್ಲಿದೆ ವಿವರ

ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ರೋಡ್​ ಶೋ ನಾಳೆ (ಮೇ 7) ಬೆಂಗಳೂರಿನಲ್ಲಿ ನಡೆಯಲಿದೆ. ನಗರದ 23 ರಸ್ತೆಗಳಲ್ಲಿ ಮೋದಿ ಸಂಚರಿಸಲಿದ್ದು, ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬೆಂಗಳೂರಲ್ಲಿ ನಾಳೆ ಮೋದಿ ರೋಡ್​ ಶೋ; 23 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ, ಇಲ್ಲಿದೆ ವಿವರ
ಬೆಂಗಳೂರಿನಲ್ಲಿ ಮೋದಿ ರೋಡ್​ ಶೋ
Ganapathi Sharma
|

Updated on: May 06, 2023 | 6:55 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಎರಡನೇ ರೋಡ್​ ಶೋ ನಾಳೆ (ಮೇ 7) ಬೆಂಗಳೂರಿನಲ್ಲಿ ನಡೆಯಲಿದೆ. ನಗರದ 23 ರಸ್ತೆಗಳಲ್ಲಿ ಮೋದಿ ಸಂಚರಿಸಲಿದ್ದು, ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ 11.30ರ ಅವಧಿಯಲ್ಲಿ ರೋಡ್ ಶೋ ನಡೆಯಲಿದೆ. ಬೆಳಗ್ಗೆ 8ರಿಂದ 12 ಗಂಟೆಯ ವರೆಗೆ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೋದಿ ಅವರ ಮೊದಲ ರೋಡ್ ಶೋ ಇಂದು (ಶನಿವಾರ) ಭರ್ಜರಿಯಾಗಿ ನಡೆದಿತ್ತು. ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವಿಚಾರವಾಗಿ ಮೋದಿ ಹರ್ಷ ವ್ಯಕ್ತಪಡಿಸಿದ್ದರು.

ಭಾನುವಾರ ಸಂಚಾರಕ್ಕೆ ನಿರ್ಬಂಧ ಹೇರಿರುವ ರಸ್ತೆಗಳ ವಿವರ ಇಲ್ಲಿದೆ.

  • ರಾಜಭವನ ರಸ್ತೆ
  • ಮೇಖ್ರಿ ಸರ್ಕಲ್
  • ರೇಸ್​​ಕೋರ್ಸ್ ರಸ್ತೆ
  • ಟಿ ಚೌಡಯ್ಯ ರಸ್ತೆ
  • ರಮಣಮಹರ್ಷಿ ರಸ್ತೆ
  • ಹಳೆ ವಿಮಾನನಿಲ್ದಾಣ ರಸ್ತೆ
  • ಸುರಂಜನ್​ದಾಸ್ ರಸ್ತೆ
  • ಎಂಜಿ ರಸ್ತೆ
  • ಬ್ರಿಗೇಡ್ ರಸ್ತೆ
  • ರೇಸ್​​ಕೋರ್ಸ್ ರಸ್ತೆ
  • ಟಿ ಚೌಡಯ್ಯ ರಸ್ತೆ
  • ರಮಣಮಹರ್ಷಿ ರಸ್ತೆ
  • ಜಗದೀಶ ನಗರ ಕ್ರಾಸ್ ರಸ್ತೆ
  • ಜೆಬಿ ನಗರ ಮುಖ್ಯ ರಸ್ತೆ
  • ಬಿಇಎಂಎಲ್ ಜಂಕ್ಷನ್
  • ನ್ಯೂ ತಿಪ್ಪಸಂದ್ರ ಮಾರ್ಕೆಟ್ ರಸ್ತೆ
  • 80 ಅಡಿ ರಸ್ತೆ ಇಂದಿರಾನಗರ
  • ನ್ಯೂ ತಿಪ್ಪಸಂದ್ರ ರಸ್ತೆ
  • 12ನೇ ಮುಖ್ಯ ರಸ್ತೆ 100 ಅಡಿ ರಸ್ತೆ, ಇಂದಿರಾ ನಗರ, ಕಾವೇರಿ ಸ್ಕೂಲ್
  • ಸಿಎಂಎಚ್ ರಸ್ತೆ
  • 17ನೇ ಕ್ರಾಸ್, ಆದರ್ಶ ಜಂಕ್ಷನ್
  • ಹಲಸೂರು ಮೆಟ್ರೋ ಸ್ಟೇಷನ್
  • ಟ್ರಿನಿಟಿ ಜಂಕ್ಷನ್

ಯಾವೆಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ?

ಮೋದಿ ಅವರ ರೋಡ್​ ಶೋ ಭಾನುವಾರ ಮಹದೇವಪುರ, ಕೆಆರ್​ ಪುರಂ, ಸಿವಿ ರಾಮನ್ ನಗರ, ಶಿವಾಜಿನಗರ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಹಾದುಹೋಗಲಿದೆ.

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತಗಳನ್ನು ಕ್ರೋಢೀಕರಿಸಲು ಬಿಜೆಪಿಯ ಕೊನೆಯ ಪ್ರಯತ್ನದ ಭಾಗವಾಗಿ ಎರಡು ರೋಡ್‌ಶೋಗಳು ನಡೆಯುತ್ತಿವೆ. ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ 26 ಕಿಲೋಮೀಟರ್ ವ್ಯಾಪ್ತಿಯ ರೋಡ್ ಶೋ ನಡೆಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ