AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ಅದ್ಧೂರಿ ಸ್ವಾಗತ ಕೋರಲಾಗಿದೆ. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ. ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Aug 26, 2023 | 6:41 AM

Share

ಬೆಂಗಳೂರು, ಆ.26: ಚಂದ್ರಯಾನ-3(Chandrayaan-3) ಯಶಸ್ಸಿ ಆಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳಿಗೆ(ISRO Scientist) ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 6.07ಕ್ಕೆ HAL ಏರ್​ಪೋರ್ಟ್​ಗೆ ಬಂದಿಳಿದಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ.‌ ದಯಾನಂದ್ ಪ್ರಧಾನಿಗೆ ಸ್ವಾಗತಿಸಿದರು. ಜಾಲಹಳ್ಳಿ ಕ್ರಾಸ್​​ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ.

ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಜಿ 20 ಸಮ್ಮೇಳನ ಮುಗಿಸಿ ಜೋಹಾನ್ಸ್ ಬರ್ಗ್ ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜಾಲಹಳ್ಳಿ ಕ್ರಾಸ್ ನಿಂದ ಸುಮಾರು 350 ಮೀಟರ್ ಗಳ ದೂರ ರಸ್ತೆಯ ಎರಡೂ ಬದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ನಿಂತು ಮೋದಿಯವರಿಗೆ ಭವ್ಯ ಸ್ವಾಗತ ಕೋರಲು ಕಾಯುತ್ತಿದ್ದಾರೆ. ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಯಲಹಂಕ ಕ್ಷೇತ್ರಗಳ ಕಾರ್ಯಕರ್ತರು ರಸ್ತೆಯ ಎರಡೂ ಬದಿ ನಿಂತು ಸ್ವಾಗತಿಸಲಿದ್ದಾರೆ.

ಇನ್ನು ಸಿಸ್ಟಮ್ ಸರ್ಕಲ್ ಬಳಿ ಸಾರ್ವಜನಿಕರು ಆಗಮಿಸುತ್ತಿದ್ದು ಭಾರತ್ ಮಾತಾಕಿ ಜೈ, ವಂದೇ ಮಾತರಂ ಅಂತ ಘೋಷಣೆ ಹೋಗಿ ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಹಾಕುತ್ತಿದ್ದಾರೆ. ರಾಷ್ಟ್ರ ಧ್ವಜ ಹಿಡಿದು ಘೋಷಣೆ ಕೂಗುತ್ತಿದ್ದಾರೆ.

ಇದನ್ನೂ ಓದಿ: PM Modi ISRO Visit Live: ಕೆಲವೇ ಕ್ಷಣಗಳಲ್ಲಿ ಇಸ್ರೋ ಕೇಂದ್ರಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಕಾತುರನಾಗಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಸಾಗುವ ಮಾರ್ಗ

    • ಹಳೆ ವಿಮಾನ ನಿಲ್ದಾಣ ರಸ್ತೆ
    • ಹಳೆ ಮದ್ರಾಸ್ ರಸ್ತೆ
    • ಎಂ.ಜಿ. ರಸ್ತೆ
    • ಕಬ್ಬನ್ ರಸ್ತೆ
    • ರಾಜಭವನ ರಸ್ತೆ
    • ಬಳ್ಳಾರಿ ರಸ್ತೆ
    • ಮೇಖ್ರಿ ಸರ್ಕಲ್
    • ಸಿ.ವಿ. ರಾಮನ್ ರಸ್ತೆ
    • ಯಶವಂತಪುರ ಫ್ಲೈ ಓವರ್
    • ತುಮಕೂರು ರಸ್ತೆ
    • ಗೊರಗುಂಟೆಪಾಳ್ಯ
    • ಜಾಲಹಳ್ಳಿ ಕ್ರಾಸ್

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:09 am, Sat, 26 August 23

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ