AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ: ಇಲ್ಲಿದೆ ಫೆ.13ರ ಮೋದಿ ಟೈಂ ಟೇಬಲ್​

Aero India Air Show: ನಾಳೆ ಫೆ. 13 ರಿಂದ 17ರವರಗೆ 5 ದಿನಗಳಕಾಲ ನಡೆಯುವ 14ನೇ ಆವೃತಿಯ ಏರೋ ಇಂಡಿಯಾ ಏರ್​ ಶೋವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಇಂದು (ಫೆ.12) ಬೆಂಗಳೂರಿಗೆ ಬಂದಿಳಿದಿದ್ದಾರೆ.

Narendra Modi: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ: ಇಲ್ಲಿದೆ ಫೆ.13ರ ಮೋದಿ ಟೈಂ ಟೇಬಲ್​
ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: ವಿವೇಕ ಬಿರಾದಾರ|

Updated on: Feb 12, 2023 | 9:03 PM

Share

ಬೆಂಗಳೂರು: ನಾಳೆ ಫೆ. 13 ರಿಂದ 17ರವರಗೆ 5 ದಿನಗಳಕಾಲ ನಡೆಯುವ 14ನೇ ಆವೃತಿಯ ಏರೋ ಇಂಡಿಯಾ ಏರ್​ ಶೋವನ್ನು (Aero India Air Show) ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಇಂದು (ಫೆ.12) ಬೆಂಗಳೂರಿಗೆ ಬಂದಿಳಿದಿದ್ದಾರೆ. ಭಾರತೀಯ ವಾಯುಸೇನೆ (Indian Air Force) ವಿಮಾನದಲ್ಲಿ ಹೆಚ್‌ಎಎಲ್‌ಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಹೆಚ್​ಎಎಲ್​ನಿಂದ ರಸ್ತೆ ಮಾರ್ಗವಾಗಿ ರಾಜಭವನಕ್ಕೆ ಪ್ರಧಾನಿ ಮೋದಿ ತೆರಳಿದ್ದಾರೆ. ಇಂದು ರಾತ್ರಿ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ.

ಫೆ.13ರ ಮೋದಿ ಟೈಂ ಟೇಬಲ್​

ಸೋಮವಾರ ಬೆಳಗ್ಗೆ 8:50ಕ್ಕೆ ರಾಜಭವನದಿಂದ ಹೊರಟು ರಸ್ತೆ ಮುಖಾಂತರ ಮೆಕ್ರಿ ಸರ್ಕಲ್ ಬಳಿ ಇರುವ HQTCಗೆ ತೆರಳುತ್ತಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಲಹಂಕ ವಾಯುನೆಲೆಗೆ ತಲಪುತ್ತಾರೆ. ಬೆಳಗ್ಗೆ 9:30 ಕ್ಕೆ ಏರ್​ ಶೋ ಉದ್ಘಾಟಿಸಲಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಮಂತ್ರಿ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗುತ್ತಾರೆ. 9:30 ರಿಂದ 11:30 ರವರೆಗೆ ಏರೋ ವೀಕ್ಷಣೆ ಮಾಡಲಿದ್ದಾರೆ. 11:45ಕ್ಕೆ ಯಲಹಂಕ ವಿಮಾನ ನಿಲ್ದಾಣದಿಂದ ತ್ರಿಪುರಾದ ಅಗರ್ತಾಲ್​ಗೆ ತಲುಪಲಿದ್ದಾರೆ.

ರಾಜಭವನದ ಸುತ್ತಮುತ್ತ ಬಿಗಿ ಭದ್ರತೆ

ಪ್ರಧಾನಿ‌ ನರೇಂದ್ರ ಮೋದಿ ರಾಜಾಭವನದಲ್ಲಿ ವಾಸ್ತವ್ಯ ಹೂಡಲಿರುವ ಹಿನ್ನೆಲೆ ರಾಜಾಭವನದ ಸುತ್ತ – ಮುತ್ತ ಬಿಗಿ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್