AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMUY Ujjwala Yojana 2021: ಉಜ್ವಲ 2.0 ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು  ಉಜ್ವಲ ಯೋಜನೆ 2.0 (Ujjwala scheme 2.0)ಗೆ ವಿಡಿಯೋ ಕಾನ್ಫರೆನ್ಸ್​ (Video Conferencing)ಮೂಲಕ ಚಾಲನೆ ನೀಡಿದರು. ಇಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆ (Uttar Pradesh Mehoba District) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ.  ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನೂ ನಡೆಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ […]

PMUY Ujjwala Yojana 2021: ಉಜ್ವಲ 2.0 ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಉಜ್ವಲ 2.0ಯೋಜನೆಗೆ ಚಾಲನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Aug 10, 2021 | 12:42 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು  ಉಜ್ವಲ ಯೋಜನೆ 2.0 (Ujjwala scheme 2.0)ಗೆ ವಿಡಿಯೋ ಕಾನ್ಫರೆನ್ಸ್​ (Video Conferencing)ಮೂಲಕ ಚಾಲನೆ ನೀಡಿದರು. ಇಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆ (Uttar Pradesh Mehoba District) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ.  ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನೂ ನಡೆಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ ಪುರಿ ಕೂಡ ಇದ್ದಾರೆ. ಕಾರ್ಯಕ್ರಮದಲ್ಲಿ ಮೊದಲು ಸಚಿವ ಹರ್ದೀಪ್​ ಸಿಂಗ್​ ಪುರಿ ಮಾತನಾಡಿ, ಉಜ್ವಲ ಯೋಜನೆಯ ಬಗ್ಗೆ ವಿವರಿಸಿದರು. 

ಏನಿದು ಉಜ್ವಲ ಯೋಜನೆ?  ಮೊಟ್ಟ ಮೊದಲಿಗೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಪ್ರಾರಂಭವಾಗಿದ್ದು, 2016ರ ಮೇ 1ರಂದು. ಅಂದು ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಹಳ್ಳಿಗಳಲ್ಲಿ ಇನ್ನೂ ಮಹಿಳೆಯರು ಉರುವಲನ್ನೇ ಉಪಯೋಗಿಸಿ ಅಡುಗೆ ಮಾಡುತ್ತಿದ್ದಾರೆ. ಆ ಕಷ್ಟವನ್ನು ತಪ್ಪಿಸಿ, ಗ್ರಾಮೀಣ ಪ್ರದೇಶಗಳಿಗೂ ಎಲ್​ಪಿಜಿ ಗ್ಯಾಸ್​ ಕನೆಕ್ಷನ್​ ಕೊಡುವ ಉದ್ದೇಶದೊಂದಿಗೆ, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಈ ಉಜ್ವಲ ಯೋಜನೆಯನ್ನು ಪರಿಚಯಿಸಿತು.

ಮೊದಲ ಬಾರಿ ಉದ್ಘಾಟನೆಯಾದ ಉಜ್ವಲ 1.0ರಡಿ, ಬಡತನ ರೇಖೆಗಿಂತ ಕಡಿಮೆ ಇರುವ ಮಹಿಳೆಯರಿಗೆ ಎಲ್​ಪಿಜಿ ಗ್ಯಾಸ್ ಸೌಲಭ್ಯ ಒದಗಿಸುವ ಗುರಿ ಇತ್ತು. 2020ರ ಮಾರ್ಚ್​​ ಹೊತ್ತಿಗೆ ಬಿಪಿಎಲ್​ ವ್ಯಾಪ್ತಿಗೆ ಬರುವ, 50 ಮಿಲಿಯನ್​ ಮಹಿಳೆಯರ ಕುಟುಂಬಕ್ಕೆ ಎಲ್​ಪಿಜಿ ಗ್ಯಾಸ್​ ಸಂಪರ್ಕ ಕೊಡುವುದು ಇದರ ಉದ್ದೇಶವಾಗಿತ್ತು. ಆದರೆ 2018ರಲ್ಲಿ ಈ ಉಜ್ವಲ 1.0ರಡಿ ಇನ್ನೂ ಏಳುವರ್ಗದ ಅಂದರೆ, ಎಸ್​ಸಿ/ಎಸ್​ಟಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿರುವವರು, ಅಂತ್ಯೋದಯ ಅನ್ನ ಯೋಜನೆಯ (AAY) ಫಲಾನುಭವಿಗಳು, ಅರಣ್ಯ ನಿವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳನ್ನೂ ಉಜ್ವಲ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಯಿತು.

ಉಜ್ವಲ ಯೋಜನೆ ವ್ಯಾಪ್ತಿಗೆ ಇಷ್ಟು ವರ್ಗಗಳನ್ನು ಸೇರ್ಪಡೆಗೊಳಿಸಿದ ಬಳಿಕ ಮಾರ್ಚ್​ 2020ರ ಹೊತ್ತಿಗೆ, 80 ದಶಲಕ್ಷ ಕುಟುಂಬದ ಮಹಿಳೆಯರಿಗೆ ಎಲ್​ಪಿಜಿ ಸಂಪರ್ಕ ಕೊಡಬೇಕು ಎಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿತ್ತು. ಆದರೆ ಈ ಗುರಿಯನ್ನು ಕೇಂದ್ರ ಆಗಸ್ಟ್​ 2019ರಲ್ಲೇ ತಲುಪುವ ಮೂಲಕ ಸಾಧನೆ ಮಾಡಿತು.  2021ರ ಜುಲೈ 30ರ ಲೆಕ್ಕಾಚಾರದಂತೆ, ಇಲ್ಲಿಯವರೆಗೆ 79,995,022 ಫಲಾನುಭವಿಗಳಿಗೆ ಉಜ್ವಲ ಯೋಜನೆಯಡಿ ಗ್ಯಾಸ್​ ಸಂಪರ್ಕ ಸಿಕ್ಕಿದೆ.

ಈಗೆಷ್ಟು ಗುರಿ? ಪ್ರಧಾನಿ ನರೇಂದ್ರ ಮೋದಿಯವರು ಇಂದು ಉಜ್ವಲ 2.0ಗೆ ಚಾಲನೆ ನೀಡುತ್ತಿದ್ದಾರೆ. ಅದರಡಿಯಲ್ಲಿ ಫಲಾನುಭವಿಗಳಿಗೆ 10 ದಶಲಕ್ಷ ಎಲ್​ಪಿಜಿ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.  ಈ ಹೆಚ್ಚುವರಿ ಸಂಪರ್ಕಕ್ಕೆ ಸಂಬಂಧಪಟ್ಟ ನಿಬಂಧನೆಗಳನ್ನು 2021-22ರ ಬಜೆಟ್​​ನಲ್ಲಿ ಘೋಷಿಸಲಾಗಿತ್ತು.

Published On - 12:37 pm, Tue, 10 August 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ