Sign In

By signing in or creating an account, you agree with Associated Broadcasting Company's Terms & Conditions and Privacy Policy.

PMUY Ujjwala Yojana 2021: ಉಜ್ವಲ 2.0 ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು  ಉಜ್ವಲ ಯೋಜನೆ 2.0 (Ujjwala scheme 2.0)ಗೆ ವಿಡಿಯೋ ಕಾನ್ಫರೆನ್ಸ್​ (Video Conferencing)ಮೂಲಕ ಚಾಲನೆ ನೀಡಿದರು. ಇಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆ (Uttar Pradesh Mehoba District) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ.  ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನೂ ನಡೆಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ […]

PMUY Ujjwala Yojana 2021: ಉಜ್ವಲ 2.0 ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಉಜ್ವಲ 2.0ಯೋಜನೆಗೆ ಚಾಲನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Aug 10, 2021 | 12:42 PM

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು  ಉಜ್ವಲ ಯೋಜನೆ 2.0 (Ujjwala scheme 2.0)ಗೆ ವಿಡಿಯೋ ಕಾನ್ಫರೆನ್ಸ್​ (Video Conferencing)ಮೂಲಕ ಚಾಲನೆ ನೀಡಿದರು. ಇಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆ (Uttar Pradesh Mehoba District) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ.  ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನೂ ನಡೆಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ ಪುರಿ ಕೂಡ ಇದ್ದಾರೆ. ಕಾರ್ಯಕ್ರಮದಲ್ಲಿ ಮೊದಲು ಸಚಿವ ಹರ್ದೀಪ್​ ಸಿಂಗ್​ ಪುರಿ ಮಾತನಾಡಿ, ಉಜ್ವಲ ಯೋಜನೆಯ ಬಗ್ಗೆ ವಿವರಿಸಿದರು. 

ಏನಿದು ಉಜ್ವಲ ಯೋಜನೆ?  ಮೊಟ್ಟ ಮೊದಲಿಗೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಪ್ರಾರಂಭವಾಗಿದ್ದು, 2016ರ ಮೇ 1ರಂದು. ಅಂದು ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಹಳ್ಳಿಗಳಲ್ಲಿ ಇನ್ನೂ ಮಹಿಳೆಯರು ಉರುವಲನ್ನೇ ಉಪಯೋಗಿಸಿ ಅಡುಗೆ ಮಾಡುತ್ತಿದ್ದಾರೆ. ಆ ಕಷ್ಟವನ್ನು ತಪ್ಪಿಸಿ, ಗ್ರಾಮೀಣ ಪ್ರದೇಶಗಳಿಗೂ ಎಲ್​ಪಿಜಿ ಗ್ಯಾಸ್​ ಕನೆಕ್ಷನ್​ ಕೊಡುವ ಉದ್ದೇಶದೊಂದಿಗೆ, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಈ ಉಜ್ವಲ ಯೋಜನೆಯನ್ನು ಪರಿಚಯಿಸಿತು.

ಮೊದಲ ಬಾರಿ ಉದ್ಘಾಟನೆಯಾದ ಉಜ್ವಲ 1.0ರಡಿ, ಬಡತನ ರೇಖೆಗಿಂತ ಕಡಿಮೆ ಇರುವ ಮಹಿಳೆಯರಿಗೆ ಎಲ್​ಪಿಜಿ ಗ್ಯಾಸ್ ಸೌಲಭ್ಯ ಒದಗಿಸುವ ಗುರಿ ಇತ್ತು. 2020ರ ಮಾರ್ಚ್​​ ಹೊತ್ತಿಗೆ ಬಿಪಿಎಲ್​ ವ್ಯಾಪ್ತಿಗೆ ಬರುವ, 50 ಮಿಲಿಯನ್​ ಮಹಿಳೆಯರ ಕುಟುಂಬಕ್ಕೆ ಎಲ್​ಪಿಜಿ ಗ್ಯಾಸ್​ ಸಂಪರ್ಕ ಕೊಡುವುದು ಇದರ ಉದ್ದೇಶವಾಗಿತ್ತು. ಆದರೆ 2018ರಲ್ಲಿ ಈ ಉಜ್ವಲ 1.0ರಡಿ ಇನ್ನೂ ಏಳುವರ್ಗದ ಅಂದರೆ, ಎಸ್​ಸಿ/ಎಸ್​ಟಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿರುವವರು, ಅಂತ್ಯೋದಯ ಅನ್ನ ಯೋಜನೆಯ (AAY) ಫಲಾನುಭವಿಗಳು, ಅರಣ್ಯ ನಿವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳನ್ನೂ ಉಜ್ವಲ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಯಿತು.

ಉಜ್ವಲ ಯೋಜನೆ ವ್ಯಾಪ್ತಿಗೆ ಇಷ್ಟು ವರ್ಗಗಳನ್ನು ಸೇರ್ಪಡೆಗೊಳಿಸಿದ ಬಳಿಕ ಮಾರ್ಚ್​ 2020ರ ಹೊತ್ತಿಗೆ, 80 ದಶಲಕ್ಷ ಕುಟುಂಬದ ಮಹಿಳೆಯರಿಗೆ ಎಲ್​ಪಿಜಿ ಸಂಪರ್ಕ ಕೊಡಬೇಕು ಎಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿತ್ತು. ಆದರೆ ಈ ಗುರಿಯನ್ನು ಕೇಂದ್ರ ಆಗಸ್ಟ್​ 2019ರಲ್ಲೇ ತಲುಪುವ ಮೂಲಕ ಸಾಧನೆ ಮಾಡಿತು.  2021ರ ಜುಲೈ 30ರ ಲೆಕ್ಕಾಚಾರದಂತೆ, ಇಲ್ಲಿಯವರೆಗೆ 79,995,022 ಫಲಾನುಭವಿಗಳಿಗೆ ಉಜ್ವಲ ಯೋಜನೆಯಡಿ ಗ್ಯಾಸ್​ ಸಂಪರ್ಕ ಸಿಕ್ಕಿದೆ.

ಈಗೆಷ್ಟು ಗುರಿ? ಪ್ರಧಾನಿ ನರೇಂದ್ರ ಮೋದಿಯವರು ಇಂದು ಉಜ್ವಲ 2.0ಗೆ ಚಾಲನೆ ನೀಡುತ್ತಿದ್ದಾರೆ. ಅದರಡಿಯಲ್ಲಿ ಫಲಾನುಭವಿಗಳಿಗೆ 10 ದಶಲಕ್ಷ ಎಲ್​ಪಿಜಿ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.  ಈ ಹೆಚ್ಚುವರಿ ಸಂಪರ್ಕಕ್ಕೆ ಸಂಬಂಧಪಟ್ಟ ನಿಬಂಧನೆಗಳನ್ನು 2021-22ರ ಬಜೆಟ್​​ನಲ್ಲಿ ಘೋಷಿಸಲಾಗಿತ್ತು.

Published On - 12:37 pm, Tue, 10 August 21

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ