AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMUY Ujjwala Yojana 2021: ಉಜ್ವಲ 2.0 ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು  ಉಜ್ವಲ ಯೋಜನೆ 2.0 (Ujjwala scheme 2.0)ಗೆ ವಿಡಿಯೋ ಕಾನ್ಫರೆನ್ಸ್​ (Video Conferencing)ಮೂಲಕ ಚಾಲನೆ ನೀಡಿದರು. ಇಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆ (Uttar Pradesh Mehoba District) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ.  ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನೂ ನಡೆಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ […]

PMUY Ujjwala Yojana 2021: ಉಜ್ವಲ 2.0 ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಉಜ್ವಲ 2.0ಯೋಜನೆಗೆ ಚಾಲನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Aug 10, 2021 | 12:42 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು  ಉಜ್ವಲ ಯೋಜನೆ 2.0 (Ujjwala scheme 2.0)ಗೆ ವಿಡಿಯೋ ಕಾನ್ಫರೆನ್ಸ್​ (Video Conferencing)ಮೂಲಕ ಚಾಲನೆ ನೀಡಿದರು. ಇಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆ (Uttar Pradesh Mehoba District) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ.  ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನೂ ನಡೆಸಲಿದ್ದಾರೆ. ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ ಪುರಿ ಕೂಡ ಇದ್ದಾರೆ. ಕಾರ್ಯಕ್ರಮದಲ್ಲಿ ಮೊದಲು ಸಚಿವ ಹರ್ದೀಪ್​ ಸಿಂಗ್​ ಪುರಿ ಮಾತನಾಡಿ, ಉಜ್ವಲ ಯೋಜನೆಯ ಬಗ್ಗೆ ವಿವರಿಸಿದರು. 

ಏನಿದು ಉಜ್ವಲ ಯೋಜನೆ?  ಮೊಟ್ಟ ಮೊದಲಿಗೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಪ್ರಾರಂಭವಾಗಿದ್ದು, 2016ರ ಮೇ 1ರಂದು. ಅಂದು ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಹಳ್ಳಿಗಳಲ್ಲಿ ಇನ್ನೂ ಮಹಿಳೆಯರು ಉರುವಲನ್ನೇ ಉಪಯೋಗಿಸಿ ಅಡುಗೆ ಮಾಡುತ್ತಿದ್ದಾರೆ. ಆ ಕಷ್ಟವನ್ನು ತಪ್ಪಿಸಿ, ಗ್ರಾಮೀಣ ಪ್ರದೇಶಗಳಿಗೂ ಎಲ್​ಪಿಜಿ ಗ್ಯಾಸ್​ ಕನೆಕ್ಷನ್​ ಕೊಡುವ ಉದ್ದೇಶದೊಂದಿಗೆ, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಈ ಉಜ್ವಲ ಯೋಜನೆಯನ್ನು ಪರಿಚಯಿಸಿತು.

ಮೊದಲ ಬಾರಿ ಉದ್ಘಾಟನೆಯಾದ ಉಜ್ವಲ 1.0ರಡಿ, ಬಡತನ ರೇಖೆಗಿಂತ ಕಡಿಮೆ ಇರುವ ಮಹಿಳೆಯರಿಗೆ ಎಲ್​ಪಿಜಿ ಗ್ಯಾಸ್ ಸೌಲಭ್ಯ ಒದಗಿಸುವ ಗುರಿ ಇತ್ತು. 2020ರ ಮಾರ್ಚ್​​ ಹೊತ್ತಿಗೆ ಬಿಪಿಎಲ್​ ವ್ಯಾಪ್ತಿಗೆ ಬರುವ, 50 ಮಿಲಿಯನ್​ ಮಹಿಳೆಯರ ಕುಟುಂಬಕ್ಕೆ ಎಲ್​ಪಿಜಿ ಗ್ಯಾಸ್​ ಸಂಪರ್ಕ ಕೊಡುವುದು ಇದರ ಉದ್ದೇಶವಾಗಿತ್ತು. ಆದರೆ 2018ರಲ್ಲಿ ಈ ಉಜ್ವಲ 1.0ರಡಿ ಇನ್ನೂ ಏಳುವರ್ಗದ ಅಂದರೆ, ಎಸ್​ಸಿ/ಎಸ್​ಟಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿರುವವರು, ಅಂತ್ಯೋದಯ ಅನ್ನ ಯೋಜನೆಯ (AAY) ಫಲಾನುಭವಿಗಳು, ಅರಣ್ಯ ನಿವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳನ್ನೂ ಉಜ್ವಲ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಯಿತು.

ಉಜ್ವಲ ಯೋಜನೆ ವ್ಯಾಪ್ತಿಗೆ ಇಷ್ಟು ವರ್ಗಗಳನ್ನು ಸೇರ್ಪಡೆಗೊಳಿಸಿದ ಬಳಿಕ ಮಾರ್ಚ್​ 2020ರ ಹೊತ್ತಿಗೆ, 80 ದಶಲಕ್ಷ ಕುಟುಂಬದ ಮಹಿಳೆಯರಿಗೆ ಎಲ್​ಪಿಜಿ ಸಂಪರ್ಕ ಕೊಡಬೇಕು ಎಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿತ್ತು. ಆದರೆ ಈ ಗುರಿಯನ್ನು ಕೇಂದ್ರ ಆಗಸ್ಟ್​ 2019ರಲ್ಲೇ ತಲುಪುವ ಮೂಲಕ ಸಾಧನೆ ಮಾಡಿತು.  2021ರ ಜುಲೈ 30ರ ಲೆಕ್ಕಾಚಾರದಂತೆ, ಇಲ್ಲಿಯವರೆಗೆ 79,995,022 ಫಲಾನುಭವಿಗಳಿಗೆ ಉಜ್ವಲ ಯೋಜನೆಯಡಿ ಗ್ಯಾಸ್​ ಸಂಪರ್ಕ ಸಿಕ್ಕಿದೆ.

ಈಗೆಷ್ಟು ಗುರಿ? ಪ್ರಧಾನಿ ನರೇಂದ್ರ ಮೋದಿಯವರು ಇಂದು ಉಜ್ವಲ 2.0ಗೆ ಚಾಲನೆ ನೀಡುತ್ತಿದ್ದಾರೆ. ಅದರಡಿಯಲ್ಲಿ ಫಲಾನುಭವಿಗಳಿಗೆ 10 ದಶಲಕ್ಷ ಎಲ್​ಪಿಜಿ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.  ಈ ಹೆಚ್ಚುವರಿ ಸಂಪರ್ಕಕ್ಕೆ ಸಂಬಂಧಪಟ್ಟ ನಿಬಂಧನೆಗಳನ್ನು 2021-22ರ ಬಜೆಟ್​​ನಲ್ಲಿ ಘೋಷಿಸಲಾಗಿತ್ತು.

Published On - 12:37 pm, Tue, 10 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?