AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಶನಿವಾರ ಎಚ್​​ಎಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪಿಎಂ

PM Narendra Modi Bengaluru Visit: ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಎಚ್​​ಎಎಲ್​​ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು, ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಶನಿವಾರ ಎಚ್​​ಎಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪಿಎಂ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Nov 24, 2023 | 9:33 PM

Share

ಬೆಂಗಳೂರು, ನವೆಂಬರ್​ 24: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಬೆಳಗ್ಗೆ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಘಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತೇಜಸ್ ಜೆಟ್‌ಗಳ ಘಟಕ ಹಾಗೂ ಉತ್ಪಾದನಾ ಘಟಕಗಳನ್ನು ಪರಿಶೀಲನೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಎಚ್​​ಎಎಲ್​​ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು, ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಭಾರತೀಯ ವಾಯುಪಡೆ ಇತ್ತೀಚೆಗೆ 12 ಸುಧಾರಿತ ಸು 30-ಎಂಕೆಐ (Su-30MKI) ಫೈಟರ್ ಜೆಟ್‌ಗಳ ಖರೀದಿಗಾಗಿ ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ಟೆಂಡರ್ ನೀಡಿದೆ. ಇವುಗಳಮನ್ನು ರಷ್ಯಾದ ಮೂಲ ಉಪಕರಣ ತಯಾರಕರ ಸಹಭಾಗಿತ್ವದಲ್ಲಿ ಎಚ್​ಎಎಲ್ ಭಾರತದಲ್ಲಿ ತಯಾರಿಸಲಿದೆ ಎಂದು ರಕ್ಷಣಾ ಮೂಲಗಳು ಈ ಹಿಂದೆಯೇ ತಿಳಿಸಿದ್ದವು. ಸರ್ಕಾರಿ ಸ್ವಾಮ್ಯದ ಕಂಪನಿಯು ಮುಂದಿನ ತಿಂಗಳೊಳಗೆ ಯೋಜನೆಯ ವಿವರಗಳು ಹಾಗೂ ಇತರ ವಿವರಗಳೊಂದಿಗೆ ಟೆಂಡರ್‌ಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಬೆಂಗಳೂರು ಭೇಟಿ; ನವೆಂಬರ್​ 25 ರಂದು HAL ಕಾರ್ಯಕ್ರಮದಲ್ಲಿ ಭಾಗಿ

ಭಾರತದ ರಕ್ಷಣಾ ವಲಯಕ್ಕೆ ಗಮನಾರ್ಹವಾದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಲಘು ಯುದ್ಧ ವಿಮಾನ (LCA) ‘ಮಾರ್ಕ್-2’ ಗಾಗಿ ಎಂಜಿನ್‌ಗಳು ಮತ್ತು ಸ್ವದೇಶಿ ಅತ್ಯಾಧುನಿಕ ಮಧ್ಯಮ ಗಾತ್ರದ ಯುದ್ಧ ವಿಮಾನದ (AMCA) ಮೊದಲ ಎರಡು ಸ್ಕ್ವಾಡ್ರನ್‌ಗಳನ್ನು ದೇಶೀಯವಾಗಿ ಉತ್ಪಾದಿಸಲಾಗುವುದು ಎಂದು ಡಿಆರ್​ಡಿಒ ಮುಖ್ಯಸ್ಥ ಡಾ. ಸಮೀರ್ ವಿ ಕಾಮತ್ ಇತ್ತೀಚೆಗೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ