AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸುವುದು, ಮದುವೆಯಾಗುವುದಾಗಿ 26 ಯುವತಿಯರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್

ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಕೆಲಸ ಕೊಡಿಸುವುದು, ಮದುವೆಯಾಗುವುದಾಗಿ 26 ಯುವತಿಯರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್
ಮಾಜಿ ಲೈನ್ ಮೆನ್ ಭೀಮರಾಜ್
TV9 Web
| Edited By: |

Updated on: Jan 09, 2022 | 1:07 PM

Share

ಬೆಂಗಳೂರು: ಹೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ 26 ಯುವತಿಯರಿಗೆ ವಂಚಿಸಿದ್ದ ಮಾಜಿ ಲೈನ್‌ಮನ್ ಭೀಮರಾಜ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಭೀಮರಾಜ್ ಅನುಕಂಪದ ಆಧಾರದಲ್ಲಿ ಕೆಲಸ ಪಡೆದು ಕೆಲ ತಿಂಗಳು ಹೆಸ್ಕಾಂನಲ್ಲಿ ಲೇನ್ ಮ್ಯಾನ್ ಆಗಿ ಕೆಲಸ ಮಾಡಿದ್ದ. ಲೈನ್‌ಮ್ಯಾನ್ ಆಗಿದ್ದಾಗಲೆ ಸುನೀತಾ ಎಂಬ ಯುವತಿಯನ್ನ ಕೊಲೆ ಮಾಡಿದ್ದ. ಜೈಲಿನಿಂದ ಬಿಡುಗಡೆ ಬಳಿಕ ಹಣಕ್ಕಾಗಿ ಅಡ್ಡದಾರಿ ಹಿಡಿದಿದ್ದು ಮದುವೆ ಆಗಲು ಇಚ್ಚಿಸಿ ಆನ್ ಲೈನ್ ಮೊರೆ ಹೋದ ಯುವತಿಯರನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಆನ್ ಲೈನ್ ಶಾಧಿ.ಕಾಮ್ಗಳಲ್ಲಿ ನಕಲಿ ಪ್ರೋಫೈಲ್ ಸೃಷ್ಟಿ ಮಾಡಿ ವಂಚಿಸುತ್ತಿದ್ದ.

ಈ ವೇಳೆ ಯುವತಿಯರಿಗೆ ಎಕ್ಸಾಂ ಇಲ್ಲದೇ ಹೆಸ್ಕಾಂನಲ್ಲಿ ಕೆಲಸ ಕೊಡಿಸೊದಾಗಿ ನಂಬಿಸಿ ಒಂದಲ್ಲ, ಎರಡಲ್ಲಾ ಬರೊಬ್ಬರಿ 26 ಯುವತಿಯರಿಗೆ ಆರೋಪಿ ಭೀಮರಾಜ್ ಮೋಸ ಮಾಡಿದ್ದಾನೆ. ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಧಾರವಾಡ, ರಾಯಚೂರು, ಬಿಜಾಪುರ ಸೇರಿದಂತೆ ಹಲವು ಕಡೆ ಇದೇ ರೀತಿ ವಂಚಿಸಿದ್ದಾನೆ. ಮೋಸದ ಮಾತುಗಳಿಂದ ನಂಬಿಸಿ ಬರೊಬ್ಬರಿ 21.30 ಲಕ್ಷ ದೂಚಿದ್ದಾನೆ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು ದೂರಿನ ಬಳಿಕ ಸತ್ಯ ಬಯಲಾಗಿದೆ. ದೂರು ಸಂಬಂಧ ಬಿಜಾಪುರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಇದನ್ನೂ ಓದಿ: Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​