AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸುವುದು, ಮದುವೆಯಾಗುವುದಾಗಿ 26 ಯುವತಿಯರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್

ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಕೆಲಸ ಕೊಡಿಸುವುದು, ಮದುವೆಯಾಗುವುದಾಗಿ 26 ಯುವತಿಯರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್
ಮಾಜಿ ಲೈನ್ ಮೆನ್ ಭೀಮರಾಜ್
TV9 Web
| Edited By: |

Updated on: Jan 09, 2022 | 1:07 PM

Share

ಬೆಂಗಳೂರು: ಹೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ 26 ಯುವತಿಯರಿಗೆ ವಂಚಿಸಿದ್ದ ಮಾಜಿ ಲೈನ್‌ಮನ್ ಭೀಮರಾಜ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಭೀಮರಾಜ್ ಅನುಕಂಪದ ಆಧಾರದಲ್ಲಿ ಕೆಲಸ ಪಡೆದು ಕೆಲ ತಿಂಗಳು ಹೆಸ್ಕಾಂನಲ್ಲಿ ಲೇನ್ ಮ್ಯಾನ್ ಆಗಿ ಕೆಲಸ ಮಾಡಿದ್ದ. ಲೈನ್‌ಮ್ಯಾನ್ ಆಗಿದ್ದಾಗಲೆ ಸುನೀತಾ ಎಂಬ ಯುವತಿಯನ್ನ ಕೊಲೆ ಮಾಡಿದ್ದ. ಜೈಲಿನಿಂದ ಬಿಡುಗಡೆ ಬಳಿಕ ಹಣಕ್ಕಾಗಿ ಅಡ್ಡದಾರಿ ಹಿಡಿದಿದ್ದು ಮದುವೆ ಆಗಲು ಇಚ್ಚಿಸಿ ಆನ್ ಲೈನ್ ಮೊರೆ ಹೋದ ಯುವತಿಯರನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಆನ್ ಲೈನ್ ಶಾಧಿ.ಕಾಮ್ಗಳಲ್ಲಿ ನಕಲಿ ಪ್ರೋಫೈಲ್ ಸೃಷ್ಟಿ ಮಾಡಿ ವಂಚಿಸುತ್ತಿದ್ದ.

ಈ ವೇಳೆ ಯುವತಿಯರಿಗೆ ಎಕ್ಸಾಂ ಇಲ್ಲದೇ ಹೆಸ್ಕಾಂನಲ್ಲಿ ಕೆಲಸ ಕೊಡಿಸೊದಾಗಿ ನಂಬಿಸಿ ಒಂದಲ್ಲ, ಎರಡಲ್ಲಾ ಬರೊಬ್ಬರಿ 26 ಯುವತಿಯರಿಗೆ ಆರೋಪಿ ಭೀಮರಾಜ್ ಮೋಸ ಮಾಡಿದ್ದಾನೆ. ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಧಾರವಾಡ, ರಾಯಚೂರು, ಬಿಜಾಪುರ ಸೇರಿದಂತೆ ಹಲವು ಕಡೆ ಇದೇ ರೀತಿ ವಂಚಿಸಿದ್ದಾನೆ. ಮೋಸದ ಮಾತುಗಳಿಂದ ನಂಬಿಸಿ ಬರೊಬ್ಬರಿ 21.30 ಲಕ್ಷ ದೂಚಿದ್ದಾನೆ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು ದೂರಿನ ಬಳಿಕ ಸತ್ಯ ಬಯಲಾಗಿದೆ. ದೂರು ಸಂಬಂಧ ಬಿಜಾಪುರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಇದನ್ನೂ ಓದಿ: Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್