AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸುವುದು, ಮದುವೆಯಾಗುವುದಾಗಿ 26 ಯುವತಿಯರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್

ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಕೆಲಸ ಕೊಡಿಸುವುದು, ಮದುವೆಯಾಗುವುದಾಗಿ 26 ಯುವತಿಯರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್
ಮಾಜಿ ಲೈನ್ ಮೆನ್ ಭೀಮರಾಜ್
TV9 Web
| Edited By: |

Updated on: Jan 09, 2022 | 1:07 PM

Share

ಬೆಂಗಳೂರು: ಹೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ 26 ಯುವತಿಯರಿಗೆ ವಂಚಿಸಿದ್ದ ಮಾಜಿ ಲೈನ್‌ಮನ್ ಭೀಮರಾಜ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಭೀಮರಾಜ್ ಅನುಕಂಪದ ಆಧಾರದಲ್ಲಿ ಕೆಲಸ ಪಡೆದು ಕೆಲ ತಿಂಗಳು ಹೆಸ್ಕಾಂನಲ್ಲಿ ಲೇನ್ ಮ್ಯಾನ್ ಆಗಿ ಕೆಲಸ ಮಾಡಿದ್ದ. ಲೈನ್‌ಮ್ಯಾನ್ ಆಗಿದ್ದಾಗಲೆ ಸುನೀತಾ ಎಂಬ ಯುವತಿಯನ್ನ ಕೊಲೆ ಮಾಡಿದ್ದ. ಜೈಲಿನಿಂದ ಬಿಡುಗಡೆ ಬಳಿಕ ಹಣಕ್ಕಾಗಿ ಅಡ್ಡದಾರಿ ಹಿಡಿದಿದ್ದು ಮದುವೆ ಆಗಲು ಇಚ್ಚಿಸಿ ಆನ್ ಲೈನ್ ಮೊರೆ ಹೋದ ಯುವತಿಯರನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಆನ್ ಲೈನ್ ಶಾಧಿ.ಕಾಮ್ಗಳಲ್ಲಿ ನಕಲಿ ಪ್ರೋಫೈಲ್ ಸೃಷ್ಟಿ ಮಾಡಿ ವಂಚಿಸುತ್ತಿದ್ದ.

ಈ ವೇಳೆ ಯುವತಿಯರಿಗೆ ಎಕ್ಸಾಂ ಇಲ್ಲದೇ ಹೆಸ್ಕಾಂನಲ್ಲಿ ಕೆಲಸ ಕೊಡಿಸೊದಾಗಿ ನಂಬಿಸಿ ಒಂದಲ್ಲ, ಎರಡಲ್ಲಾ ಬರೊಬ್ಬರಿ 26 ಯುವತಿಯರಿಗೆ ಆರೋಪಿ ಭೀಮರಾಜ್ ಮೋಸ ಮಾಡಿದ್ದಾನೆ. ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಧಾರವಾಡ, ರಾಯಚೂರು, ಬಿಜಾಪುರ ಸೇರಿದಂತೆ ಹಲವು ಕಡೆ ಇದೇ ರೀತಿ ವಂಚಿಸಿದ್ದಾನೆ. ಮೋಸದ ಮಾತುಗಳಿಂದ ನಂಬಿಸಿ ಬರೊಬ್ಬರಿ 21.30 ಲಕ್ಷ ದೂಚಿದ್ದಾನೆ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು ದೂರಿನ ಬಳಿಕ ಸತ್ಯ ಬಯಲಾಗಿದೆ. ದೂರು ಸಂಬಂಧ ಬಿಜಾಪುರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಇದನ್ನೂ ಓದಿ: Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ