AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್

ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 14, 2021 | 11:50 AM

Share

ಬೆಂಗಳೂರು: ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಜುನಾಥ್‌ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ್ ಬೆಂಗಳೂರಿನ ನಂದಿ ರಸ್ತೆಯ ವಿಲ್ಲಾದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಅದೇ ವಿಲ್ಲಾದಲ್ಲಿ ಆಸ್ಟ್ರೇಲಿಯಾ ದೇಶದ ವೋಹ್ನ್ ಟ್ರೋಲ್ಫೆ ದಂಪತಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆ ಫುಟ್ ಬಾಲ್ ಆಡಲು ಹೋಗಿದ್ದಾಗ ಅಂದ್ರೆ ಆಗಸ್ಟ್ 28ರಂದು ಮಂಜುನಾಥ್ ವಿದೇಶಿ ಪ್ರಜೆಗಳ ಮನೆಗೆ ನುಗ್ಗಿ 25 ಲಕ್ಷ ರೂ ಬೆಲೆ ಬಾಳುವ‌ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ.

ಬಳಿಕ ಪ್ಯಾರಿಸ್ನ ಎಫಿಲ್ ಟವರ್ ಮುಂದೆ ಪ್ರಪೋಸ್ ಮಾಡಿ ನೀಡಿದ್ದ ಡೈಮಂಡ್ ರಿಂಗ್ ಕಳ್ಳತನವಾಗಿದೆ ಎಂದು ವಿದೇಶಿ ದಂಪತಿ ಕಣ್ಣೀರಿಟ್ಟಿದ್ದರು. ಈ ಬಗ್ಗೆ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಮೊಬೈಲ್ ಕದ್ದ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ಉಂಗುರ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ವಾಹನ ಕಳ್ಳರನ್ನು ಬಂಧಿಸಿದ ಬಿಡದಿ ಠಾಣೆಯ ಪೊಲೀಸರು ಇನ್ನು ಮತ್ತೊಂದೆಡೆ ವಾಹನ ಕಳ್ಳರನ್ನು ರಾಮನಗರ ತಾಲೂಕಿನ ಬಿಡದಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಡ್ಯದ ರವಿಕುಮಾರ್, ಅನಿಲ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 6 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ

Published On - 11:45 am, Sun, 14 November 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ