AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್

ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 14, 2021 | 11:50 AM

Share

ಬೆಂಗಳೂರು: ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಜುನಾಥ್‌ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ್ ಬೆಂಗಳೂರಿನ ನಂದಿ ರಸ್ತೆಯ ವಿಲ್ಲಾದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಅದೇ ವಿಲ್ಲಾದಲ್ಲಿ ಆಸ್ಟ್ರೇಲಿಯಾ ದೇಶದ ವೋಹ್ನ್ ಟ್ರೋಲ್ಫೆ ದಂಪತಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆ ಫುಟ್ ಬಾಲ್ ಆಡಲು ಹೋಗಿದ್ದಾಗ ಅಂದ್ರೆ ಆಗಸ್ಟ್ 28ರಂದು ಮಂಜುನಾಥ್ ವಿದೇಶಿ ಪ್ರಜೆಗಳ ಮನೆಗೆ ನುಗ್ಗಿ 25 ಲಕ್ಷ ರೂ ಬೆಲೆ ಬಾಳುವ‌ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ.

ಬಳಿಕ ಪ್ಯಾರಿಸ್ನ ಎಫಿಲ್ ಟವರ್ ಮುಂದೆ ಪ್ರಪೋಸ್ ಮಾಡಿ ನೀಡಿದ್ದ ಡೈಮಂಡ್ ರಿಂಗ್ ಕಳ್ಳತನವಾಗಿದೆ ಎಂದು ವಿದೇಶಿ ದಂಪತಿ ಕಣ್ಣೀರಿಟ್ಟಿದ್ದರು. ಈ ಬಗ್ಗೆ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಮೊಬೈಲ್ ಕದ್ದ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ಉಂಗುರ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ವಾಹನ ಕಳ್ಳರನ್ನು ಬಂಧಿಸಿದ ಬಿಡದಿ ಠಾಣೆಯ ಪೊಲೀಸರು ಇನ್ನು ಮತ್ತೊಂದೆಡೆ ವಾಹನ ಕಳ್ಳರನ್ನು ರಾಮನಗರ ತಾಲೂಕಿನ ಬಿಡದಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಡ್ಯದ ರವಿಕುಮಾರ್, ಅನಿಲ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 6 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ

Published On - 11:45 am, Sun, 14 November 21

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?