AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದು ಸಿಕ್ಕಿಬಿದ್ದ ರೌಡಿಶೀಟರ್

ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್​ ಪೃಥ್ವಿ ಹಾಗೂ ಆತನ ಸಹಚರ ಭೂಷಣ್​ನನ್ನು ಬಸವನಗುಡಿ ಪೊಲೀಸರು​ ಬಂಧಿಸಿದ್ದಾರೆ.

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದು ಸಿಕ್ಕಿಬಿದ್ದ ರೌಡಿಶೀಟರ್
Follow us
TV9 Web
| Updated By: ಆಯೇಷಾ ಬಾನು

Updated on:Nov 23, 2022 | 11:45 AM

ಬೆಂಗಳೂರು: ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರೌಡಿಶೀಟರ್​​ ಪೃಥ್ವಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್​ ಪೃಥ್ವಿ ಹಾಗೂ ಆತನ ಸಹಚರ ಭೂಷಣ್​ನನ್ನು ಬಸವನಗುಡಿ ಪೊಲೀಸರು​ ಬಂಧಿಸಿದ್ದಾರೆ.

ಪ್ರತಿವರ್ಷ ಕಡಲೆಕಾಯಿ ಪರಿಷೆಗೆ ಬಂದು ದೇವರ ದರ್ಶನ ಪಡೆಯುತಿದ್ದ ರೌಡಿಶಿಟರ್ ಪೃಥ್ವಿ ಈ ವರ್ಷ ಕೂಡ ದೇವಸ್ಥಾನಕ್ಕೆ ಬರುವುದು ಖಚಿತವಾಗಿತ್ತು. ಇದನ್ನು ತಿಳಿದಿದ್ದ ಪೊಲೀಸರು ಪೃಥ್ವಿ ಬರುತ್ತಾನೆಂದು ಹೊಂಚು ಹಾಕಿ ಕಾದು ‌ಕುಳಿತಿದ್ದರು. ಸದ್ಯ ಕಡಲೆಕಾಯಿ ಪರಿಷೆಯಲ್ಲಿ ರೌಡಿ ಶೀಟರ್ ಪೃಥ್ವಿ, ಸಹಚರ ಭೂಷಣ್​ನನ್ನು ಬಂಧಿಸಿದ್ದಾರೆ. ಬಸವನಗುಡಿ, ವಿಲ್ಸನ್ ಗಾರ್ಡನ್ ಸೇರಿ ಹಲವು ಠಾಣೆಯಲ್ಲಿ ಪೃಥ್ವಿ ವಾಂಟೆಡ್‌ ಆಗಿದ್ದ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ರಾಘವೇಂದ್ರನ ಮನೆಯಲ್ಲಿ ಲಾಂಗ್ ಪತ್ತೆ

ಮೀನು ಹಿಡಿಯಲು ಹೋಗಿ ಯುವಕ ಸಾವು

ತುಮಕೂರು: ತಿಪಟೂರು ತಾಲೂಕಿನ ನೋಣವಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಯೋಗೇಶ್(24)ಮೃತ ದುರ್ದೈವಿ. ನೋಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೌಚಾಲಯದಲ್ಲಿ ಬುಸಗುಟ್ಟಿದ್ದ ನಾಗಪ್ಪ

ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯ ಶೌಚಾಲಯದಲ್ಲಿ ಹಾವು ಕಾಣಿಸಿಕೊಂಡಿದ್ದು ಕಂಪನಿ ಸಿಬ್ಬಂದಿ ಭಯಭೀತರಾದ ಘಟನೆ ನಡೆದಿದೆ. ಮೋಡ ಕವಿದ ವಾತಾವರಣ ಇರುವ ಕಾರಣ ಬೆಚ್ಚಿಗೆ ಇರುವ ಸ್ಥಳಗಳಲ್ಲಿ ಹಾವುಗಳು ಅಡಗಿಕೊಳ್ಳುತ್ತಿವೆ. ಸುಮಾರು ಐದು ಅಡಿ ಉದ್ದದ ನಾಗರಹಾವನ್ನು ಉರಗ ಸಂರಕ್ಷಕ ದಿಲೀಪ್ ರಕ್ಷಣೆ ಮಾಡಿದ್ದಾರೆ.

ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯೇಕ್ಷ

ರಾಮನಗರದ ರಾಯರದೊಡ್ಡಿ ನಗರದ ಬಳಿ ಬೋಳಪ್ಪನ ಕೆರೆಯಲ್ಲಿ ಆನೆಯೊಂದು ಪ್ರತ್ಯೇಕ್ಷವಾಗಿದೆ. ಕೆರೆಯಲ್ಲಿ ಕಾಡಾನೆ ಬೀಡುಬಿಟ್ಟಿದ್ದು ನಗರ ನಿವಾಸಿಗಳು ಆತಂಕದಲ್ಲಿದ್ದಾರೆ.

Published On - 10:37 am, Wed, 23 November 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ