AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದು ಸಿಕ್ಕಿಬಿದ್ದ ರೌಡಿಶೀಟರ್

ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್​ ಪೃಥ್ವಿ ಹಾಗೂ ಆತನ ಸಹಚರ ಭೂಷಣ್​ನನ್ನು ಬಸವನಗುಡಿ ಪೊಲೀಸರು​ ಬಂಧಿಸಿದ್ದಾರೆ.

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದು ಸಿಕ್ಕಿಬಿದ್ದ ರೌಡಿಶೀಟರ್
TV9 Web
| Edited By: ಆಯೇಷಾ ಬಾನು|

Updated on:Nov 23, 2022 | 11:45 AM

Share

ಬೆಂಗಳೂರು: ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರೌಡಿಶೀಟರ್​​ ಪೃಥ್ವಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದ ರೌಡಿಶೀಟರ್​ ಪೃಥ್ವಿ ಹಾಗೂ ಆತನ ಸಹಚರ ಭೂಷಣ್​ನನ್ನು ಬಸವನಗುಡಿ ಪೊಲೀಸರು​ ಬಂಧಿಸಿದ್ದಾರೆ.

ಪ್ರತಿವರ್ಷ ಕಡಲೆಕಾಯಿ ಪರಿಷೆಗೆ ಬಂದು ದೇವರ ದರ್ಶನ ಪಡೆಯುತಿದ್ದ ರೌಡಿಶಿಟರ್ ಪೃಥ್ವಿ ಈ ವರ್ಷ ಕೂಡ ದೇವಸ್ಥಾನಕ್ಕೆ ಬರುವುದು ಖಚಿತವಾಗಿತ್ತು. ಇದನ್ನು ತಿಳಿದಿದ್ದ ಪೊಲೀಸರು ಪೃಥ್ವಿ ಬರುತ್ತಾನೆಂದು ಹೊಂಚು ಹಾಕಿ ಕಾದು ‌ಕುಳಿತಿದ್ದರು. ಸದ್ಯ ಕಡಲೆಕಾಯಿ ಪರಿಷೆಯಲ್ಲಿ ರೌಡಿ ಶೀಟರ್ ಪೃಥ್ವಿ, ಸಹಚರ ಭೂಷಣ್​ನನ್ನು ಬಂಧಿಸಿದ್ದಾರೆ. ಬಸವನಗುಡಿ, ವಿಲ್ಸನ್ ಗಾರ್ಡನ್ ಸೇರಿ ಹಲವು ಠಾಣೆಯಲ್ಲಿ ಪೃಥ್ವಿ ವಾಂಟೆಡ್‌ ಆಗಿದ್ದ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ, ರಾಘವೇಂದ್ರನ ಮನೆಯಲ್ಲಿ ಲಾಂಗ್ ಪತ್ತೆ

ಮೀನು ಹಿಡಿಯಲು ಹೋಗಿ ಯುವಕ ಸಾವು

ತುಮಕೂರು: ತಿಪಟೂರು ತಾಲೂಕಿನ ನೋಣವಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಯೋಗೇಶ್(24)ಮೃತ ದುರ್ದೈವಿ. ನೋಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೌಚಾಲಯದಲ್ಲಿ ಬುಸಗುಟ್ಟಿದ್ದ ನಾಗಪ್ಪ

ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯ ಶೌಚಾಲಯದಲ್ಲಿ ಹಾವು ಕಾಣಿಸಿಕೊಂಡಿದ್ದು ಕಂಪನಿ ಸಿಬ್ಬಂದಿ ಭಯಭೀತರಾದ ಘಟನೆ ನಡೆದಿದೆ. ಮೋಡ ಕವಿದ ವಾತಾವರಣ ಇರುವ ಕಾರಣ ಬೆಚ್ಚಿಗೆ ಇರುವ ಸ್ಥಳಗಳಲ್ಲಿ ಹಾವುಗಳು ಅಡಗಿಕೊಳ್ಳುತ್ತಿವೆ. ಸುಮಾರು ಐದು ಅಡಿ ಉದ್ದದ ನಾಗರಹಾವನ್ನು ಉರಗ ಸಂರಕ್ಷಕ ದಿಲೀಪ್ ರಕ್ಷಣೆ ಮಾಡಿದ್ದಾರೆ.

ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯೇಕ್ಷ

ರಾಮನಗರದ ರಾಯರದೊಡ್ಡಿ ನಗರದ ಬಳಿ ಬೋಳಪ್ಪನ ಕೆರೆಯಲ್ಲಿ ಆನೆಯೊಂದು ಪ್ರತ್ಯೇಕ್ಷವಾಗಿದೆ. ಕೆರೆಯಲ್ಲಿ ಕಾಡಾನೆ ಬೀಡುಬಿಟ್ಟಿದ್ದು ನಗರ ನಿವಾಸಿಗಳು ಆತಂಕದಲ್ಲಿದ್ದಾರೆ.

Published On - 10:37 am, Wed, 23 November 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ