AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮಾಲೀಕನ ಮನೆಯಲ್ಲಿ ಚಿನ್ನಾಭರಣ ಕಳವು: ದಂಪತಿ ಬಂಧನ

ಎರಡನೇ ಮಹಡಿಗೆ ಇತ್ತೀಚೆಗೆ ನಾಜಿಮಾ ತಾಜ್ ಬಾಡಿಗೆಗೆ ಬಂದಿದ್ದರು. ಇದೇ‌ ಮನೆ ಮುಂಭಾಗ ಇರುವ ಮತ್ತೊಂದು ಮನೆಯಲ್ಲಿ ಸುಮಯ್ಯಾ ತಾಜ್ ಬಾಡಿಗೆಗೆ ಇದ್ದರು.

ಮನೆ ಮಾಲೀಕನ ಮನೆಯಲ್ಲಿ ಚಿನ್ನಾಭರಣ ಕಳವು: ದಂಪತಿ ಬಂಧನ
ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಳವು ಆರೋಪಿಗಳು
TV9 Web
| Edited By: |

Updated on: Mar 06, 2022 | 10:10 AM

Share

ಬೆಂಗಳೂರು: ಬಾಡಿಗೆ ಮನೆ ನೀಡಿದ್ದ ಮಾಲೀಕನ ಮನೆಯಲ್ಲೇ ಚಿನ್ನಾಭರಣ, ನಗದು ಎಗರಿಸಿದ್ದ ಚಾಲಾಕಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಯ್ಯ ತಾಜ್, ನಾಜೀಮಾ ತಾಜ್ ಹಾಗೂ ನಾಜೀಮಾ ಪತಿ ಅಕ್ಬರ್ ಬಂಧಿತರು. ಬಂಧಿತರಿಂದ ₹ 4 ಲಕ್ಷ ನಗದು, ₹ 2.79 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಸಿದ್ದಾಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಬಿ‌ ಹಾಗೂ ಹಾಜಿರಾ ದಂಪತಿಗೆ 13 ವರ್ಷದ ಮಗ ಹಾಗೂ ಮಗಳೊಬ್ಬಳಿದ್ದಾಳೆ. ಮೊದಲ ಮಹಡಿಯಲ್ಲಿರುವ ಮನೆಯಲ್ಲಿ ಮಾಲೀಕ‌ರು ವಾಸವಿದ್ದಾರೆ. ಎರಡನೇ ಮಹಡಿಗೆ ಇತ್ತೀಚೆಗೆ ನಾಜಿಮಾ ತಾಜ್ ಬಾಡಿಗೆಗೆ ಬಂದಿದ್ದರು. ಇದೇ‌ ಮನೆ ಮುಂಭಾಗ ಇರುವ ಮತ್ತೊಂದು ಮನೆಯಲ್ಲಿ ಸುಮಯ್ಯಾ ತಾಜ್ ಬಾಡಿಗೆಗೆ ಇದ್ದರು. ಮಗ ಟೆರೆಸ್​ಗೆ ಬಂದು ಆಟ ಆಡುವಾಗಲೆಲ್ಲಾ ಮನೆಯಲ್ಲಿ ಹಣ ಇರುವ ವಿಚಾರ ಹೇಳಿಕೊಳ್ಳುತ್ತಿದ್ದರು. ಲಾರಿ ಮಾರಿ ಮಗಳ ಮದುವೆಗೆ‌ ದಂಪತಿ ಹಣ ಮತ್ತು ಒಡವೆ ತಂದಿಟ್ಟಿದ್ದರು.

ಈ ವಿಷಯ ತಿಳಿದ ದಂಪತಿ ಹಣ ಲಪಟಾಯಿಸಲು ಸ್ಕೆಚ್ ಹಾಕಿದ್ದರು. 19ನೇ ತಾರೀಖು ಬೆಳಿಗ್ಗೆ ಎದ್ದು ಕೆಲಸಕ್ಕೆ ಹೋಗಿದ್ದ ಜಬಿ ಮಗಳು ಕಾಲೇಜಿಗೆ ಹೋಗಿದ್ದಳು. 13ನೇ ವರ್ಷದ ಮಗ ಟೆರೆಸ್ ಮೇಲೆ ಆಟವಾಡುತ್ತಿದ್ದ. 1 ಗಂಟೆ ಸುಮಾರಿಗೆ ಸಂಬಂಧಿ‌ಯೊಬ್ಬರನ್ನು ನೋಡಲು ಹಾಜಿರಾ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಮುಖ್ಯರಸ್ತೆವರೆಗೂ ಮಾತಾಡಿಸಿಕೊಂಡು ಬಂದಿದ್ದ ನಾಜೀಮಾ ವಾಪಸ್ ಬರಲು ಎಷ್ಟು ಹೊತ್ತಾಗುತ್ತೆ ಎಂತೆಲ್ಲ ಮಾಹಿತಿ ಪಡೆದುಕೊಂಡಿದ್ದರು.

ನಾನು ಹೊರಗೆ ಹೋಗ್ತಿದ್ದಿನಿ ಎಂದು ಮುಖ್ಯರಸ್ತೆಯವರೆಗೂ ನಾಜೀಮಾ ಬಂದಿದ್ದರು. ಹಾಜಿರಾ ಆಟೋ ಹತ್ತುತ್ತಿದ್ದಂತೆ ನಾಜಿಮಾ ಮನೆಗೆ ವಾಪಸ್ ಬಂದಿದ್ದರು. ಬಂದವಳೇ ಕೆಳ ಮಹಡಿಯ ಮೆಟ್ಟಿಲಿಗೆ ಅಡ್ಡಲಾಗಿ ಕುಳಿತಿದ್ದಳು. ಮೇಲೆ ಯಾರಿಗೂ ಹೋಗಲು ಬಿಡದೇ ಮಾತನಾಡಿಸುತ್ತಿದ್ದಳು. ಅಷ್ಟೊತ್ತಿಗಾಗಲೇ ನಕಲಿ ಕೀ ಬಳಸಿ ಮನೆ ಒಳಗೆ ಎಂಟ್ರಿ ಕೊಟ್ಟಿದ್ದ ತಂಗಿ‌ ಸುಮಯ್ಯಾ ತಾಜ್ ಹಾಗೂ ಅಕ್ಬರ್ ರಾಡ್​ನಿಂದ ಬೀರು ಮೀಟಿ ಹಣ, ಒಡವೆ ಕಳ್ಳತನ ಮಾಡಿದ್ದರು. ನಂತರ ತಂದೆಯ ಮನೆ ತುಮಕೂರಿಗೆ ಎಸ್ಕೇಪ್ ಆಗಿದ್ದರು.

ಸಂಜೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಟವರ್ ಡಂಪ್ ಹಾಗೂ ಸಿಸಿಟಿವಿ ದೃಶ್ಯ ಆಧಾರದ ಮೇಲೆ ಇಬ್ಬರ ಮೇಲೆ ಅನುಮಾನ ಮೂಡಿತ್ತು. ಕದ್ದ ದುಡ್ಡಲ್ಲಿ‌ ಶೋಕಿ‌ ಮಾಡಲು ಇವರಿಬ್ಬರೂ ಮುಂದಾಗಿದ್ದರು. 14 ಚೂಡಿದಾರ್ ಸೇರಿದಂತೆ ಹಲವು ಬಟ್ಟೆ ಖರೀದಿಸಿದ್ದರು. ಸದ್ಯ ಬಂಧಿತರಿಂದ‌ ₹ 4 ಲಕ್ಷ ನಗದು, ₹ 2.79 ಲಕ್ಷ ಮೌಲ್ಯದ ಆಭರಣ ವಶಕ್ಕೆ ಪಡೆಯಲಾಗಿದೆ. ಉಳಿದ ಹಣ ಮೋಜು ಮಸ್ತಿಗೆಂದು ಖರ್ಚು ಮಾಡಿದ್ದರು.

ಇದನ್ನೂ ಓದಿ: Crime News: ಕಾರಿನ ಗಾಜು ಒಡೆದು ಹಣ, ದುಬಾರಿ ವಾಚ್ ಕಳವು; 6 ತಿಂಗಳ ಬಳಿಕ ಚಂದ್ರಾ ಲೇಔಟ್ ಪೊಲೀಸರಿಂದ ಆರೋಪಿ ಅರೆಸ್ಟ್

ಇದನ್ನೂ ಓದಿ: Crime News: ಅಳಂದದಲ್ಲಿ ನಿಷೇಧಾಜ್ಞೆ ವಿಸ್ತರಣೆ, ಬೆಂಗಳೂರಿನಲ್ಲಿ ಕಳ್ಳರ ಬಂಧನ, ಹೊಸನಗರದ ಬಟ್ಟೆಮಲ್ಲಪ್ಪ ಬಳಿ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ