AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಂಗ್ರೆಸ್​ ವೆಬ್​ಸೈಟ್​​ ಹ್ಯಾಕ್​ ಮಾಡಿದ್ದ ಆರೋಪಿಗಳ ಬಂಧನ

ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್​​​ನ​ ವೆಬ್​ಸೈಟ್​ ಹ್ಯಾಕ್​ ಮಾಡಿ, ನಕಲಿ ವೆಬ್​ಸೈಟ್​ ಸೃಷ್ಟಿಸಿ ಅನಧಿಕೃತ ಪೋಸ್ಟ್​ ಹಾಕಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಾಲ್ವರು ಆರೋಪಿಗಳು ಹಾಸನ ಮೂಲದ ಕಂಪನಿಯೊಂದರ ಸಂಪರ್ಕದಲ್ಲಿದ್ದಾರೆ ಎಂಬ ಅಂಶ ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್​ ವೆಬ್​ಸೈಟ್​​ ಹ್ಯಾಕ್​ ಮಾಡಿದ್ದ ಆರೋಪಿಗಳ ಬಂಧನ
ಸಮಾಜಸೇವೆ ಕೋಟಾದಡಿ ಸುಧಾಮ್ ದಾಸ್‌ಗೆ ಅವಕಾಶ ನೀಡಿದ್ದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಸೀತಾರಾಂಗೆ ಸ್ಥಾನ ಕಲ್ಪಿಸಲಾಗಿದೆ. ಆದ್ರೆ, ಇವರಿಬ್ಬರ ಆಯ್ಕೆಗೆ ಕಾಂಗ್ರೆಸ್​ನಲ್ಲೆ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಇವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೀಗಾಗಿ ರಾಜ್ಯಪಾಲರಿಗೆ ತೃಪ್ತಿ ತರದಿದ್ದರೇ ಇಬ್ಬರ ಹೆಸರನ್ನ ತಡೆ ಹಿಡಿಯುವ ಸಾಧ್ಯತೆ ಎನ್ನಲಾಗಿದೆ.
ವಿವೇಕ ಬಿರಾದಾರ
|

Updated on:Aug 14, 2023 | 8:36 AM

Share

ಬೆಂಗಳೂರು (ಆ.14): ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್​ನ (KPCC) ವೆಬ್​ಸೈಟ್ (Website)​ ಹ್ಯಾಕ್​ ಮಾಡಿ, ನಕಲಿ ವೆಬ್​ಸೈಟ್​ ಸೃಷ್ಟಿಸಿ ಅನಧಿಕೃತ ಪೋಸ್ಟ್​ ಹಾಕಿದ್ದ ನಾಲ್ವರನ್ನು ಪೊಲೀಸರು (Police) ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರಿಸಿಕೊಂಡಿದ್ದಾನೆ. ಆರೋಪಿಗಳನ್ನು ಧರ್ಮೇಶ್​ ಜೂನ್​, ಅರುಣ್​, ಸಿದ್ದಾರ್ಥ ಮತ್ತು ವೆಂಕಟೇಶ್​ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಹಾಸನ ಮೂಲದ ಕಂಪನಿಯೊಂದರ ಸಂಪರ್ಕದಲ್ಲಿದ್ದಾರೆ ಎಂಬ ಅಂಶ ತಿಳಿದುಬಂದಿದೆ. ಇನ್ನೋರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಈತ ಬಿಜೆಪಿಯೊಂದಿಗೆ ಕೆಲಸ ಮಾಡುವ ರಾಜಕೀಯ ತಂತ್ರ ಸಂಸ್ಥೆಯಾದ ವರಾಹೆ ಅನಾಲಿಟಿಕ್ಸ್​ ಜೊತೆ ಸಂಪರ್ಕ ಹೊಂದಿದ್ದನು ಎಂದು ಹೇಳಲಾಗುತ್ತಿದೆ.

ರಾಜ್ಯ ಕಾಂಗ್ರೆಸ್​​ ನಾಯಕರು ಪ್ರಚಾರ ಭರಾಟೆಯಲ್ಲಿ ಬ್ಯೂಸಿಯಾಗಿದ್ದಾಗ ಈ ವೆಬ್​ಸೈಟ್​ ಹ್ಯಾಕ್​ ಮಾಡಲಾಗಿತ್ತು. ಈ ಸಂಬಂಧ ಕಾಂಗ್ರೆಸ್​ ಸೈಬರ್​​ ಕ್ರೈಂ ಪೊಲೀಸ್​ ಠಾಣೆಗೆ ದೂರು ನೀಡಿತ್ತು. ಈ ಹಿನ್ನೆಲೆ ಪೊಲೀಸರು ಶೋಧಕಾರ್ಯ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ವೆಬ್​ಸೈಟ್​ನ ಹೋಸ್ಟಿಂಗ್​ ವಿವರ, ನೋಂದಣಿ, ಲಾಗ್​​ಇನ್​ ಪಾಸ್ವರ್ಡ್​​ ಪಡೆದು ಪರಿಶೀಲಿಸಿದಾಗ ಬೆಂಗಳೂರಿನ M/S ವೆಟ್​ ಫ್ಯಾಬ್ ಟೆಕ್ನಾಲಜೀಸ್​ ಪ್ರೈವೇಟ್​ ಲಿಮಿಟೆಡ್​​ ನಕಲಿ ವೆಬ್​ಸೈಟ್​ ಸೃಷ್ಟಿ ಮಾಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಬಿಜೆಪಿಯಲ್ಲಿ ರಮೇಶ್ ಜಾರಕಿಹೊಳಿ vs ಇತರರು, ಕಾಂಗ್ರೆಸ್​ನಲ್ಲಿ ಸತೀಶ್ ಜಾರಕಿಹೊಳಿ vs ಇತರ ನಾಯಕರು

ಈ ಸಂಸ್ಥೆ ಹಾಸನ ಮತ್ತು ಬೆಂಗಳೂರಿನಲ್ಲಿ ಕಚೇರಿಗಳನ್ನು ಹೊಂದಿದ್ದು, ಗುರುವಾರ ಪೊಲೀಸರು ಕಚೇರಿ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ವೆಂಕಟೇಶ್ ಹಾಸನದಲ್ಲಿ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದು, ಉಳಿದ ಮೂವರು ಅದರ ನಿರ್ದೇಶಕರಾಗಿದ್ದಾರೆ. ವರಾಹೆ ಅನಾಲಿಟಿಕ್ಸ್‌ನಲ್ಲಿ ಉದ್ಯೋಗಿಯಾಗಿರುವ ಶಶಾಂಕ್ ಭಾರದ್ವಾಜ್ ನಕಲಿ ವೆಬ್‌ಸೈಟ್ ರಚಿಸಲು ಈ ಕಂಪನಿಯನ್ನು ಸಂಪರ್ಕಿಸಿದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಫೆಬ್ರವರಿ ತಿಂಗಳಲ್ಲಿ ವೆಬ್‌ಸೈಟ್‌ ಹ್ಯಾಕ್​ ಮಾಡಿದ್ದರು. ನಂತರ ಕೆಪಿಸಿಸಿ. ಇನ್ ಅನ್ನೋ ನಕಲಿ ವೆಬ್‌ಸೈಟ್‌ನಲ್ಲಿ ಇದು ಭ್ರಷ್ಟರ ಪಕ್ಷ. ಭ್ರಷ್ಟ ರಾಜ್ಯವನ್ನಾಗಿಸಲು ಕಾಂಗ್ರೆಸ್ ಬೆಂಬಲಿಸಿ ಎಂದು ಇಡೀ ಕಾಂಗ್ರೆಸ್ ಮೇಲಿನ ಆರೋಪಗಳ ಪಟ್ಟಿಯನ್ನೇ ಈ ವೆಬ್‌ಸೈಟ್‌ನಲ್ಲಿ ಹಾಕಲಾಗಿದ್ದರು.

ಮುಖಪುಟದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಕೆಜೆ ಜಾರ್ಜ್ ಫೋಟೋ ಬಳಸಲಾಗಿದೆ. ಈ ಫೋಟೋಗಳ ಮೇಲೆ ಕಮ್ಯೂನಲ್ , ಕ್ರಿಮಿನಲ್ ಹಾಗೂ ಕರಪ್ಟ್ ಎಂದು ಉಲ್ಲೇಖಿಸಿದ್ದರು. ಇನ್ನು ಇತರ ಪುಟಗಳಲ್ಲಿ ಕಾಂಗ್ರೆಸ್ ಮೇಲಿನ ಆರೋಪಗಳು, ಕಾಂಗ್ರೆಸ್ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ, ಕೋಮುಗಲಭೆ ಸೇರಿದಂತೆ ಹಲವುವಿವಾದಾತ್ಮಕ ಮಾಹಿತಿಗಳನ್ನು ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Mon, 14 August 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ