ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕ್ ಬಳಸಿ ಪೆಟ್ರೋಲ್ ಕಳ್ಳತನ; ಸುಮಾರು 50 ಲೀಟರ್ ಪೆಟ್ರೋಲ್ ಕಳವು

ಪೆಟ್ರೋಲ್ ಕಳ್ಳತನವಾಗುತ್ತಿರುವ ಅನುಮಾನ ಹಿನ್ನೆಲೆ ಕೇಸ್ ದಾಖಲಿಸಲಾಗಿತ್ತು. ಪೆಟ್ರೋಲ್ ಬಂಕ್ ಮಾಲೀಕರ ದೂರಿನ ಮೇರೆಗೆ ಕಾನೂನು ಮಾಪನ ಶಾಸ್ತ್ರ ಅಧಿಕಾರಿಗಳಯ ಪರಿಶೀಲನೆ ನಡೆಸಿದ್ದು, ಈ ವೇಳೆ ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕರ್ ಪತ್ತೆಯಾಗಿದೆ.

ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕ್ ಬಳಸಿ ಪೆಟ್ರೋಲ್ ಕಳ್ಳತನ; ಸುಮಾರು 50 ಲೀಟರ್ ಪೆಟ್ರೋಲ್ ಕಳವು
ಟ್ಯಾಂಕರ್‌
Follow us
| Updated By: preethi shettigar

Updated on:Jan 17, 2022 | 4:33 PM

ಬೆಂಗಳೂರು: ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕ್ ಬಳಸಿ ಪೆಟ್ರೋಲ್ ಕಳ್ಳತನ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವನಗುಂದಿಯಲ್ಲಿ ನಡೆದಿದೆ. 1 ಟ್ಯಾಂಕ್​ನಲ್ಲಿ ಸುಮಾರು 50 ಲೀಟರ್ ಪೆಟ್ರೋಲ್ ಕಳ್ಳತನ (Theft) ಮಾಡಿದ್ದಾರೆ. ಪೆಟ್ರೋಲ್ (Petrol) ಟ್ಯಾಂಕರ್‌ಗಳ ಸಿಬ್ಬಂದಿಯಿಂದಲೇ ಕಳ್ಳತನ ನಡೆದಿದೆ. ದೇವನಗುಂದಿಯಿಂದ ಪೆಟ್ರೋಲ್ ಪೂರೈಕೆ ಮಾಡಲಾಗುತ್ತಿತ್ತು. ಪೆಟ್ರೋಲ್ ಕಳ್ಳತನವಾಗುತ್ತಿರುವ ಅನುಮಾನ ಹಿನ್ನೆಲೆ ಕೇಸ್ ದಾಖಲಿಸಲಾಗಿತ್ತು. ಪೆಟ್ರೋಲ್ ಬಂಕ್ ಮಾಲೀಕರ ದೂರಿನ ಮೇರೆಗೆ ಕಾನೂನು ಮಾಪನ ಶಾಸ್ತ್ರ ಅಧಿಕಾರಿಗಳಯ ಪರಿಶೀಲನೆ ನಡೆಸಿದ್ದು, ಈ ವೇಳೆ ಟ್ಯಾಂಕರ್‌ಗಳಲ್ಲಿ ಬೇಬಿ ಟ್ಯಾಂಕರ್ (Tanker) ಪತ್ತೆಯಾಗಿದೆ.

ಪ್ರತಿನಿತ್ಯ 1,200 ಟ್ಯಾಂಕರ್‌ಗಳಿಂದ ಪೆಟ್ರೋಲ್ ಪೂರೈಕೆ ಮಾಡಲಾಗುತ್ತಿತ್ತು. ದೇವನಗುಂದಿಯಿಂದ ಬಂಕ್‌ಗಳಿಗೆ ಪೆಟ್ರೋಲ್ ಪೂರೈಸುತ್ತಿದ್ದರು. ಶೇ.40ರಷ್ಟು ಟ್ಯಾಂಕರ್‌ಗಳಲ್ಲಿ ದಂಧೆ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಸದ್ಯ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಳ್ಳತನ ದಂದೆ ಮಾಡುತ್ತಿದ್ದ ಐದು ಜನರ ವಿರುದ್ಧ ಎಫ್​ಐಆರ್

ಲಾರಿ‌ ಚಾಲಕ, ಕ್ಲೀನರ್ ಮತ್ತು ಮಾಲೀಕರ ವಿರುದ್ಧ ದೂರು ದಾಖಲಿಸಲಾಗಿದೆ. ಲಾರಿ ಚಾಲಕ ಪ್ರವೀಣ್ ಕುಮಾರ್, ಲಾರಿ ಕ್ಲೀನರ್ ಶಿವು,  ಟ್ಯಾಂಕರ್ ಮಾಲೀಕರು ಶೃತಿ, ಟ್ರಾನ್ಸಪೋರ್ಟ್ ಶಿವರಾಜು, ವೆಲ್ಡರ್ಸ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಸ್ವಂತ ಟ್ಯಾಂಕರ್​ಗಳಿಲ್ಲದ ಬಂಕ್​ಗಳಿಗೆ ಇಂಧನ ಪೂರೈಸುವ ವೇಳೆ ಈ ರೀತಿ ಕಳ್ಳತನ ಮಾಡಲಾಗುತ್ತಿತ್ತು. ಇದೀಗ ದಂದೆಯ ಇಂದಿನ ಕಿಂಗ್ ಪಿನ್​ಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.

ಯಾದಗಿರಿ: ಸ್ನೇಹಿತನೇ ಮೋಸ‌ ಮಾಡಿದ್ದಾನೆ ಎಂದು ಆರೋಪಿ ಆತ್ಮಹತ್ಯೆ

ಸ್ನೇಹಿತನೇ ಮೋಸ‌ ಮಾಡಿದ್ದಾನೆ ಎಂದು ಡೆತ್ ನೋಟ್ ಬರೆದಿಟ್ಟು ಆಂಧ್ರ ಮೂಲದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮಮೋಹನ್(55) ತಾಣಾಗುಂದಿ ಬಳಿ ನೇಣಿಗೆ ಶರಣಾಗಿದ್ದು, ತನ್ನ ಸ್ನೇಹಿತ‌ ಜಿ.ರಮೇಶ್ ಕೊಡಬೇಕಿದ್ದ 4.5 ಲಕ್ಷ ರೂಪಾಯಿ ಹಣ ಕೊಡದೆ ಸತಾಯಿಸುತ್ತಿದ್ದ ಎಂದು ಆರೋಪಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:

ಎರಡು ಕೋಟಿ ಮೌಲ್ಯದ ವಾಚ್ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ ಮಾಡಿದ ಇಂದಿರಾನಗರ ಪೊಲೀಸರು

Crime News: ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ, ಕಳ್ಳತನ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು

Published On - 3:45 pm, Mon, 17 January 22

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​