AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಕೊಂಡುಕೊಂಡ ಇ ಸಿಗರೇಟ್​​ಗಳನ್ನು ನಗರದಲ್ಲಿ ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಜೆಜೆ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ
ಇ ಸಿಗರೇಟ್
ವಿವೇಕ ಬಿರಾದಾರ
|

Updated on: Sep 03, 2024 | 8:15 AM

Share

ಬೆಂಗಳೂರು, ಸೆಪ್ಟೆಂಬರ್​ 03: ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಇ ಸಿಗರೇಟ್ (E Cigarette) ಖರೀದಿಸಿ ನಗರದಲ್ಲಿ ​ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಬಳಿ ಇರುವ ಇ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ಅಧಿಕಾರಿಗಳು ಸೀಜ್​ ಮಾಡುತ್ತಾರೆ. ಸೀಜ್​ ಮಾಡಿದ ಇ ಸಿಗರೇಟ್​ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ.

ಹರಾಜಿನಲ್ಲಿ ಇ ಸಿಗರೇಟ್​ಗಳನ್ನು ಖರೀದಿಸುವ ಖತರ್ನಾಕ್ ಗ್ಯಾಂಗ್ ಜೆಜೆನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಗೋಡೌನ್​ನಲ್ಲಿ ಶೇಖರಿಸಿದ್ದರು. ಬಳಿಕ ಇ ಸಿಗರೇಟ್​ಗಳನ್ನು ವಿಂಗಡಿಸುತ್ತಿದ್ದರು. ಬಳಸದ ಇ ಸಿಗರೇಟ್​ಗಳನ್ನು 300-400 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದು ದಾಳಿ ನಡೆಸಿದ ಜೆಜೆನಗರ ಪೊಲೀಸರು ಇಬ್ಬರು ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?