AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು

ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು
ನೂರ್ ಅಹ್ಮದ್
TV9 Web
| Edited By: |

Updated on:Oct 18, 2021 | 12:59 PM

Share

ಬೆಂಗಳೂರು: ನಗರದ ಯಶವಂತಪುರ ಪೊಲೀಸರು ನಕಲಿ ಬಿಎಂಟಿಸಿ ಡಿಸಿ (ಸಹಾಯಕ ಸಂಚಾರಿ ಅಧೀಕ್ಷಕ) ಅಧಿಕಾರಿಯನ್ನು ಬಂಧಿಸಿದ್ದಾರೆ. ಉತ್ತರ ವಲಯ ಬಿಎಂಟಿಸಿ ಡಿಸಿ ಎಂದು ಹೇಳಿಕೊಂಡಿದ್ದ ಆರೋಪಿ ಸುಬೇದಾರ್ ಪಾಳ್ಯದ ನೂರ್ ಅಹ್ಮದ್​ನನ್ನು ಬಂಧಿಸಲಾಗಿದೆ. ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು. ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ನೂರ್ ಅಹ್ಮದ್ ವೇಷಭೂಷಣ ಕಂಡು ಅಸಲಿ ಡಿಸಿಯೇ ಇರಬಹುದು ಎಂದು ಅಧಿಕಾರಿಗಳೂ ಸಹ ಒಮ್ಮೆಲೆ ಸುಮ್ಮನಾಗಿದ್ದಾರೆ. ಬಳಿಕ ಎರಡನೇ ದಿನ, ಕ್ರಾಸ್ ಚೆಕ್ ವೇಳೆ ಅಸಲಿ ಸಂಗತಿ ಬಯಲಾಗಿದೆ. ಈ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ಕೂಡಲೇ ಕಂಟ್ರೋಲ್ ರೂಂನ ಅಧಿಕಾರಿಗಳಿಗೆ ಮಾಹಿತಿ ಕೇಳಿದಾಗ ನೂರ್ ಅಹ್ಮದ್ ಹೆಸರಿನ ವ್ಯಕ್ತಿ ಇಲ್ಲಾ ಎನ್ನುವುದು ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯನ್ನೆಲ್ಲಾ ಯಶವಂತಪುರ ಪೊಲೀಸ್ ಠಾಣೆ ಅಧಿಕಾರಿಗಳ ಗಮನಕ್ಕೆ ತಂದು, ಸಹಾಯಕ ಸಂಚಾರಿ ಅಧೀಕ್ಷಕರು ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ಇದನ್ನೂ ಓದಿ: ಮಾಸ್ಕ್​ ಧರಿಸಿ ಪೊಲೀಸ್​ ಪರೀಕ್ಷೆ ಬರೆಯಲು ಬಂದ ನಕಲಿ ಅಭ್ಯರ್ಥಿ ಈಗ ಖಾಕಿ ಅತಿಥಿ!

ಆರ್ಯನ್​ ಖಾನ್​ ಬಂಧನದ ಹಿಂದಿನ ಅಸಲಿಯತ್ತೇ ಬೇರೆ; ಎನ್​ಸಿಬಿ ಕಡೆಯಿಂದಲೇ ಹೊರಬಿತ್ತು ಸತ್ಯ

Published On - 11:33 am, Mon, 18 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ