AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು

ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು
ನೂರ್ ಅಹ್ಮದ್
TV9 Web
| Edited By: |

Updated on:Oct 18, 2021 | 12:59 PM

Share

ಬೆಂಗಳೂರು: ನಗರದ ಯಶವಂತಪುರ ಪೊಲೀಸರು ನಕಲಿ ಬಿಎಂಟಿಸಿ ಡಿಸಿ (ಸಹಾಯಕ ಸಂಚಾರಿ ಅಧೀಕ್ಷಕ) ಅಧಿಕಾರಿಯನ್ನು ಬಂಧಿಸಿದ್ದಾರೆ. ಉತ್ತರ ವಲಯ ಬಿಎಂಟಿಸಿ ಡಿಸಿ ಎಂದು ಹೇಳಿಕೊಂಡಿದ್ದ ಆರೋಪಿ ಸುಬೇದಾರ್ ಪಾಳ್ಯದ ನೂರ್ ಅಹ್ಮದ್​ನನ್ನು ಬಂಧಿಸಲಾಗಿದೆ. ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು. ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ನೂರ್ ಅಹ್ಮದ್ ವೇಷಭೂಷಣ ಕಂಡು ಅಸಲಿ ಡಿಸಿಯೇ ಇರಬಹುದು ಎಂದು ಅಧಿಕಾರಿಗಳೂ ಸಹ ಒಮ್ಮೆಲೆ ಸುಮ್ಮನಾಗಿದ್ದಾರೆ. ಬಳಿಕ ಎರಡನೇ ದಿನ, ಕ್ರಾಸ್ ಚೆಕ್ ವೇಳೆ ಅಸಲಿ ಸಂಗತಿ ಬಯಲಾಗಿದೆ. ಈ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ಕೂಡಲೇ ಕಂಟ್ರೋಲ್ ರೂಂನ ಅಧಿಕಾರಿಗಳಿಗೆ ಮಾಹಿತಿ ಕೇಳಿದಾಗ ನೂರ್ ಅಹ್ಮದ್ ಹೆಸರಿನ ವ್ಯಕ್ತಿ ಇಲ್ಲಾ ಎನ್ನುವುದು ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯನ್ನೆಲ್ಲಾ ಯಶವಂತಪುರ ಪೊಲೀಸ್ ಠಾಣೆ ಅಧಿಕಾರಿಗಳ ಗಮನಕ್ಕೆ ತಂದು, ಸಹಾಯಕ ಸಂಚಾರಿ ಅಧೀಕ್ಷಕರು ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ಇದನ್ನೂ ಓದಿ: ಮಾಸ್ಕ್​ ಧರಿಸಿ ಪೊಲೀಸ್​ ಪರೀಕ್ಷೆ ಬರೆಯಲು ಬಂದ ನಕಲಿ ಅಭ್ಯರ್ಥಿ ಈಗ ಖಾಕಿ ಅತಿಥಿ!

ಆರ್ಯನ್​ ಖಾನ್​ ಬಂಧನದ ಹಿಂದಿನ ಅಸಲಿಯತ್ತೇ ಬೇರೆ; ಎನ್​ಸಿಬಿ ಕಡೆಯಿಂದಲೇ ಹೊರಬಿತ್ತು ಸತ್ಯ

Published On - 11:33 am, Mon, 18 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ