AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು

ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು
ನೂರ್ ಅಹ್ಮದ್
TV9 Web
| Updated By: preethi shettigar|

Updated on:Oct 18, 2021 | 12:59 PM

Share

ಬೆಂಗಳೂರು: ನಗರದ ಯಶವಂತಪುರ ಪೊಲೀಸರು ನಕಲಿ ಬಿಎಂಟಿಸಿ ಡಿಸಿ (ಸಹಾಯಕ ಸಂಚಾರಿ ಅಧೀಕ್ಷಕ) ಅಧಿಕಾರಿಯನ್ನು ಬಂಧಿಸಿದ್ದಾರೆ. ಉತ್ತರ ವಲಯ ಬಿಎಂಟಿಸಿ ಡಿಸಿ ಎಂದು ಹೇಳಿಕೊಂಡಿದ್ದ ಆರೋಪಿ ಸುಬೇದಾರ್ ಪಾಳ್ಯದ ನೂರ್ ಅಹ್ಮದ್​ನನ್ನು ಬಂಧಿಸಲಾಗಿದೆ. ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು. ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ನೂರ್ ಅಹ್ಮದ್ ವೇಷಭೂಷಣ ಕಂಡು ಅಸಲಿ ಡಿಸಿಯೇ ಇರಬಹುದು ಎಂದು ಅಧಿಕಾರಿಗಳೂ ಸಹ ಒಮ್ಮೆಲೆ ಸುಮ್ಮನಾಗಿದ್ದಾರೆ. ಬಳಿಕ ಎರಡನೇ ದಿನ, ಕ್ರಾಸ್ ಚೆಕ್ ವೇಳೆ ಅಸಲಿ ಸಂಗತಿ ಬಯಲಾಗಿದೆ. ಈ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ಕೂಡಲೇ ಕಂಟ್ರೋಲ್ ರೂಂನ ಅಧಿಕಾರಿಗಳಿಗೆ ಮಾಹಿತಿ ಕೇಳಿದಾಗ ನೂರ್ ಅಹ್ಮದ್ ಹೆಸರಿನ ವ್ಯಕ್ತಿ ಇಲ್ಲಾ ಎನ್ನುವುದು ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯನ್ನೆಲ್ಲಾ ಯಶವಂತಪುರ ಪೊಲೀಸ್ ಠಾಣೆ ಅಧಿಕಾರಿಗಳ ಗಮನಕ್ಕೆ ತಂದು, ಸಹಾಯಕ ಸಂಚಾರಿ ಅಧೀಕ್ಷಕರು ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ಇದನ್ನೂ ಓದಿ: ಮಾಸ್ಕ್​ ಧರಿಸಿ ಪೊಲೀಸ್​ ಪರೀಕ್ಷೆ ಬರೆಯಲು ಬಂದ ನಕಲಿ ಅಭ್ಯರ್ಥಿ ಈಗ ಖಾಕಿ ಅತಿಥಿ!

ಆರ್ಯನ್​ ಖಾನ್​ ಬಂಧನದ ಹಿಂದಿನ ಅಸಲಿಯತ್ತೇ ಬೇರೆ; ಎನ್​ಸಿಬಿ ಕಡೆಯಿಂದಲೇ ಹೊರಬಿತ್ತು ಸತ್ಯ

Published On - 11:33 am, Mon, 18 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ