AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು

ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು.

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು
ನೂರ್ ಅಹ್ಮದ್
TV9 Web
| Edited By: |

Updated on:Oct 18, 2021 | 12:59 PM

Share

ಬೆಂಗಳೂರು: ನಗರದ ಯಶವಂತಪುರ ಪೊಲೀಸರು ನಕಲಿ ಬಿಎಂಟಿಸಿ ಡಿಸಿ (ಸಹಾಯಕ ಸಂಚಾರಿ ಅಧೀಕ್ಷಕ) ಅಧಿಕಾರಿಯನ್ನು ಬಂಧಿಸಿದ್ದಾರೆ. ಉತ್ತರ ವಲಯ ಬಿಎಂಟಿಸಿ ಡಿಸಿ ಎಂದು ಹೇಳಿಕೊಂಡಿದ್ದ ಆರೋಪಿ ಸುಬೇದಾರ್ ಪಾಳ್ಯದ ನೂರ್ ಅಹ್ಮದ್​ನನ್ನು ಬಂಧಿಸಲಾಗಿದೆ. ಹಳೆಯ ಡಿಸಿ ವರ್ಗಾವಣೆಯಾಗಿದೆ. ನಾನೇ ಹೊಸ ಡಿಸಿ ಎಂದು ನೂರ್ ಅಹ್ಮದ್ ಹೇಳಿಕೊಂಡಿದ್ದ. ಯಶವಂತಪುರದ ಟಿಟಿಎಂಸಿಗೆ ಭೇಟಿ ನೀಡಿದ ವೇಳೆ ಆರೋಪಿ ಹೀಗೆ ಹೇಳಿಕೊಂಡಿದ್ದ. ಅಲ್ಲದೆ ಮರು ದಿನ ಬಸ್ ಸ್ಟ್ಯಾಂಡ್‌ನಲ್ಲಿ ಆರೋಪಿ ನೂರ್ ಅಹ್ಮದ್ ಪರಿಶೀಲನೆಗೂ ಕೂಡ ಇಳಿದ್ದನು. ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ನೂರ್ ಅಹ್ಮದ್ ವೇಷಭೂಷಣ ಕಂಡು ಅಸಲಿ ಡಿಸಿಯೇ ಇರಬಹುದು ಎಂದು ಅಧಿಕಾರಿಗಳೂ ಸಹ ಒಮ್ಮೆಲೆ ಸುಮ್ಮನಾಗಿದ್ದಾರೆ. ಬಳಿಕ ಎರಡನೇ ದಿನ, ಕ್ರಾಸ್ ಚೆಕ್ ವೇಳೆ ಅಸಲಿ ಸಂಗತಿ ಬಯಲಾಗಿದೆ. ಈ ವೇಳೆ ಅನುಮಾನ ಬಂದು ಪರಿಶೀಲಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ಕೂಡಲೇ ಕಂಟ್ರೋಲ್ ರೂಂನ ಅಧಿಕಾರಿಗಳಿಗೆ ಮಾಹಿತಿ ಕೇಳಿದಾಗ ನೂರ್ ಅಹ್ಮದ್ ಹೆಸರಿನ ವ್ಯಕ್ತಿ ಇಲ್ಲಾ ಎನ್ನುವುದು ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯನ್ನೆಲ್ಲಾ ಯಶವಂತಪುರ ಪೊಲೀಸ್ ಠಾಣೆ ಅಧಿಕಾರಿಗಳ ಗಮನಕ್ಕೆ ತಂದು, ಸಹಾಯಕ ಸಂಚಾರಿ ಅಧೀಕ್ಷಕರು ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ಇದನ್ನೂ ಓದಿ: ಮಾಸ್ಕ್​ ಧರಿಸಿ ಪೊಲೀಸ್​ ಪರೀಕ್ಷೆ ಬರೆಯಲು ಬಂದ ನಕಲಿ ಅಭ್ಯರ್ಥಿ ಈಗ ಖಾಕಿ ಅತಿಥಿ!

ಆರ್ಯನ್​ ಖಾನ್​ ಬಂಧನದ ಹಿಂದಿನ ಅಸಲಿಯತ್ತೇ ಬೇರೆ; ಎನ್​ಸಿಬಿ ಕಡೆಯಿಂದಲೇ ಹೊರಬಿತ್ತು ಸತ್ಯ

Published On - 11:33 am, Mon, 18 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ