ಟಿಂಡರ್ ಡೇಟಿಂಗ್ ಆಪ್ ಬಳಸಿ ಯುವತಿಯರ ಜತೆ ಗೆಳೆತನ; ಖಾಸಗಿ ವಿಡಿಯೋ ಸೆರೆ ಹಿಡಿದು ಹಣಕ್ಕೆ ಬೇಡಿಕೆ ಇಡುತಿದ್ದ ಆರೋಪಿ ಬಂಧನ

ಫೆಬ್ರವರಿ ಒಂದರಂದು ಕೊಡಿಹಳ್ಳಿಯಲ್ಲಿ ಇದೇ ಮಾದರಿ ಕೃತ್ಯ ಎಸಗಿದ್ದ ಬಗ್ಗೆ ಯುವತಿಯೊರ್ವಳು ಕೊಡೊಗೆಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಯುವತಿ ದೂರಿನ ಅನ್ವಯ ಕಾರ್ಯಚರಣೆ ನಡೆಸಿ ಹೆಚ್. ಎಸ್. ಆರ್. ಲೇಔಟ್​ನ್ಲಲಿ ಆರೋಪಿ ಅಭಿಷೇಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಟಿಂಡರ್ ಡೇಟಿಂಗ್ ಆಪ್ ಬಳಸಿ ಯುವತಿಯರ ಜತೆ ಗೆಳೆತನ; ಖಾಸಗಿ ವಿಡಿಯೋ ಸೆರೆ ಹಿಡಿದು ಹಣಕ್ಕೆ ಬೇಡಿಕೆ ಇಡುತಿದ್ದ ಆರೋಪಿ ಬಂಧನ
ಅಭಿಷೇಕ್ ಅಲಿಯಾಸ್ ಸುಶಾಂತ್ ಜೈನ್ ಬಂಧಿತ ಅರೋಪಿ
Follow us
| Updated By: preethi shettigar

Updated on:Feb 04, 2022 | 9:47 AM

ಬೆಂಗಳೂರು: ಟಿಂಡರ್ ಡೇಟಿಂಗ್ ಆಪ್​ನಲ್ಲಿ(Tinder Dating app) ಗೆಳೆತನ ಮಾಡಿಕೊಂಡು ಯುವತಿಯರ ಜೊತೆ ವಿಕೃತ ಮೆರೆದಿದ್ದ ಆರೋಪಿಯನ್ನು ಪೊಲೀಸರು(Karnataka police) ಬಂಧಿಸಿದ ಘಟನೆ ಬೆಂಗಳೂರಿನ ಹೆಚ್​. ಎಸ್. ಆರ್. ಲೇಔಟ್​ನಲ್ಲಿ ನಡೆದಿದೆ. ಅಭಿಷೇಕ್ ಅಲಿಯಾಸ್ ಸುಶಾಂತ್ ಜೈನ್ ಬಂಧಿತ ಅರೋಪಿ. ಟಿಂಡರ್ ಡೇಟಿಂಗ್ ಆಪ್​ನಲ್ಲಿ ಯುವತಿಯರ ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ, ಬಳಿಕ ಭೇಟಿ ಮಾಡಿ ಸ್ನೇಹ(Friendship) ಬೆಳೆಸುತಿದ್ದ. ಹಲವು ಬಾರಿ ಯುವತಿಯರ ಮನೆಗೆ ಯಾರು ಇಲ್ಲದ ವೇಳೆ ಭೇಟಿ ನೀಡಿ ಮತ್ತಷ್ಟು ಹತ್ತಿರವಾಗಲು ಪ್ರಯತ್ನಿಸುತ್ತಿದ್ದ.

ಬಳಿಕ ಯುವತಿಯರ ಜೊತೆ ರೊಮ್ಯಾಂಟಿಕ್ ಆಗಿ ವರ್ತನೆ ಮಾಡುತ್ತಿದ್ದು, ಖಾಸಗಿ ಸಮಯ ಕಳೆಯುವಂತೆ ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿಸುತಿದ್ದ. ಬಳಿಕ ಯುವತಿಯರ ಅನುಮತಿ ಇಲ್ಲದೆ ಅವರ ಖಾಸಗಿ ಫೋಟೋ ವಿಡಿಯೋ ತೆಗೆದುಕೊಳ್ಳುತಿದ್ದ. ನಂತರ ವಾಪಸ್ಸು ಬಂದ ಬಳಿಕ ಪೋನ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಫೆಬ್ರವರಿ ಒಂದರಂದು ಕೊಡಿಹಳ್ಳಿಯಲ್ಲಿ ಇದೇ ಮಾದರಿ ಕೃತ್ಯ ಎಸಗಿದ್ದ ಬಗ್ಗೆ ಯುವತಿಯೊರ್ವಳು ಕೊಡೊಗೆಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಯುವತಿ ದೂರಿನ ಅನ್ವಯ ಕಾರ್ಯಚರಣೆ ನಡೆಸಿ ಹೆಚ್. ಎಸ್. ಆರ್. ಲೇಔಟ್​ನ್ಲಲಿ ಆರೋಪಿ ಅಭಿಷೇಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು: ದಾರಿಹೋಕರನ್ನು ದೋಚಲು ಹೊಂಚು; ಮಾರಕಾಸ್ತ್ರಗಳ ಸಮೇತ ನಾಲ್ವರು ದರೋಡೆಕೊರರ ಬಂಧನ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾದೇನಹಳ್ಳಿ ತಾಂಡಾ ಬಳಿಯ ಅರಣ್ಯ ಪ್ರದೇಶದಲ್ಲಿ ಮಾರಕಾಸ್ತ್ರಗಳ ಸಮೇತ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಐವರು ಆರೋಪಿಗಳು ಪರಾರಿಯಾಗಿದ್ದಾರೆ. ದಾರಿಹೋಕರನ್ನು ದೋಚಲು ಕಾರದ ಪುಡಿ, ಮಚ್ಚು ಹಿಡಿದು ಹೊಂಚು ಹಾಕಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತುಮಕೂರು: ದಾನ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕಳ್ಳತನ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇಗೌಡನಪಾಳ್ಯದಲ್ಲಿ ದಾನ ಕೇಳುವ ನೆಪದಲ್ಲಿ ಪಾರ್ವತಿ ಎಂಬುವವರ ಬಳಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದಾನೆ. ಈ ವೇಳೆ 4 ಸಾವಿರ ರೂಪಾಯಿ ಕೂಡ ದೋಚಿ ಕಳ್ಳ ಪರಾರಿಯಾಗಿದ್ದಾನೆ. ಗ್ರಾಮದ ಪಾರ್ವತಿ ಮನೆಯಲ್ಲಿ ಒಬ್ಬರೇ ಇದ್ದಾಗ ವೃದ್ದಾಶ್ರಮಕ್ಕಾಗಿ ದಾನ ಕೇಳುವ ನೆಪದಲ್ಲಿ ಕಳ್ಳ ಆಗಮಿಸಿದ್ದಾನೆ. ಈ ವೇಳೆ ಹಣ ಇಲ್ಲ ರಾಗಿ ಇದೆ ಕೊಡುವುದಾಗಿ ತಿಳಿಸಿದಾಗ ಕಳ್ಳ ನಿರಾಕರಿಸಿದ್ದಾನೆ. ನಂತರ ಗ್ರಾಮದ ಹಲವರು ಹಣ ನೀಡಿದ್ದಾರೆಂದು ಪುಸ್ತಕ ತೋರಿಸುವ ನೆಪದಲ್ಲಿ ದುಷ್ಕರ್ಮಿ ಕತ್ತಿನಲ್ಲಿದ್ದ ಚಿನ್ನದ ಸರ ಮತ್ತು 4 ಸಾವಿರ ಹಣ ದೋಚಿ ಪರಾರಿಯಾಗಿದ್ದಾನೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ನೆಲಮಂಗಲದ ಮಾರುತಿನಗರದಲ್ಲಿ ಮನೆ ಬೀಗ ಒಡೆದು 3 ಲಕ್ಷ ನಗದು, ಚಿನ್ನಾಭರಣ ಕಳ್ಳತನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾರುತಿನಗರದಲ್ಲಿ ಗೀತಮ್ಮ ಎಂಬುವವರ ಮನೆ ಬೀಗ ಒಡೆದು 3 ಲಕ್ಷ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆ ಕಳವಿಗೂ ಮುಂಚೆ ಕಳ್ಳರ ಚಲನವಲನ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕಳವು ವೇಳೆ ಮನೆ ವಸ್ತುಗಳಿಗೆ ಹಾನಿ ಮಾಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಬೆಂಗಳೂರು: ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಕೆ; ಯುವತಿ ಮೇಲೆ ದೌರ್ಜನ್ಯವೆಸಗಿದ ಐವರ ಬಂಧನ

Crime Update: ವ್ಯಕ್ತಿ ಗಮನ ಬೇರೆಡೆ ಸೆಳೆದು ಕಳ್ಳತನ, ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ಹನಿಟ್ರ್ಯಾಪ್ ಆರೋಪಿಗಳ ಬಂಧನ

Published On - 9:32 am, Fri, 4 February 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ