AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖದೀಮರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರ ಪೈಕ್ ಒಬ್ಬ ಆರೋಪಿ ಸೆರೆ ಸಿಕ್ಕಿದ್ದಾನೆ.

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 29, 2021 | 12:56 PM

Share

ಬೆಂಗಳೂರು: ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಆರೋಪಿ ಸಂತೋಷ್​ನನ್ನು ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಬ್​ ಇನ್ಸ್​ಪೆಕ್ಟರ್​ ವೆಂಕಟೇಶ್ ಹೊಡೆದಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ದರೋಡೆ ಮಾಡುತ್ತಿದ್ದ ವೇಳೆ ಸಂತೋಷ್​ನನ್ನು ಸೆರೆ ಹಿಡಿಯಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಸದ್ಯ ಆರೋಪಿ ಸಂತೋಷ್ ವಿಚಾರಣೆಯ ವಿಡಿಯೋ ವೈರಲ್ ಆಗಿದೆ.

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖದೀಮರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರ ಪೈಕ್ ಒಬ್ಬ ಆರೋಪಿ ಸೆರೆ ಸಿಕ್ಕಿದ್ದಾನೆ. ಹೆಬ್ಬಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಳತನ, ಡಕಾಯಿತಿ, ಸಾರ್ವಜನಿಕರಿಗೆ ಬೆದರಿಕೆ‌ ಹಾಕುತ್ತಿದ್ದ ಹಿನ್ನೆಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂರು ಜನರ ತಂಡದಿಂದ ರಾಬರಿಗೆ ಯತ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಅಮಾನ್ ಎಂಬುವನನ್ನು ಅಡ್ಡಹಾಕಿ ಆರೋಪಿಗಳು ರಾಬರಿ ಮಾಡಿದ್ದಾರೆ. ಅಮಾನ್ ದ್ವಿಚಕ್ರ ವಾಹನದಲ್ಲಿ ಅತ್ತಿಬೆಲೆ ಮೂಲಕ ತಮಿಳುನಾಡಿಗೆ ಹೊರಟಿದ್ದರು, ಚೆಕ್ ಪೋಸ್ಟ್​ನಲ್ಲಿ ಪೋಲಿಸರು ಅಡ್ಡ ಹಾಕಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಆಗ ಸಂತೋಷ್ ಎಂಬಾತ ಸಿಕ್ಕಿ ಹಾಕಿಕೊಂಡಿದ್ದಾನೆ. 21 ವರ್ಷದ ಆಸುಪಾಸು ವಯಸ್ಸಿನ ಯುವಕರ ತಂಡ ಈ ಕೃತ್ಯ ಎಸಗಿದೆ ಎನ್ನುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಕಳೆದ ಸಾಕಷ್ಟು ದಿನಗಳಿಂದ ಕಾರ್ಮಿಕರ ಬಳಿ ರಾಬರಿ ಮಾಡುತ್ತಿದ್ದ ಈ ತಂಡ, ಕಾರ್ಮಿಕರ ಬಳಿ ಇದ್ದ ಮೊಬೈಲ್, ಹಣ ಕಸಿದು ಪರಾರಿಯಾಗುತ್ತಿತ್ತು. ಪ್ರತಿರೋಧ ತೋರಿದಾಗ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದರು. ನೊಂದ ಜನ ಈ ಕುರಿತು ಪೊಲೀಸರಿಗೆ ದೂರು ನೀಡಿತ್ತು, ಸದ್ಯ ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೋಲಿಸರ ಯಶಸ್ಸಿ ಕಾರ್ಯಾಚರಣೆಯಿಂದ ಆರೋಪಿ ಬಂಧನವಾಗಿದೆ. ತಪ್ಪಿಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

ಬೆಂಗಳೂರು: ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಕೆ; ಯುವತಿ ಮೇಲೆ ದೌರ್ಜನ್ಯವೆಸಗಿದ ಐವರ ಬಂಧನ

Published On - 12:46 pm, Wed, 29 September 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ