AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖದೀಮರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರ ಪೈಕ್ ಒಬ್ಬ ಆರೋಪಿ ಸೆರೆ ಸಿಕ್ಕಿದ್ದಾನೆ.

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 29, 2021 | 12:56 PM

Share

ಬೆಂಗಳೂರು: ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಆರೋಪಿ ಸಂತೋಷ್​ನನ್ನು ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಬ್​ ಇನ್ಸ್​ಪೆಕ್ಟರ್​ ವೆಂಕಟೇಶ್ ಹೊಡೆದಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ದರೋಡೆ ಮಾಡುತ್ತಿದ್ದ ವೇಳೆ ಸಂತೋಷ್​ನನ್ನು ಸೆರೆ ಹಿಡಿಯಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಸದ್ಯ ಆರೋಪಿ ಸಂತೋಷ್ ವಿಚಾರಣೆಯ ವಿಡಿಯೋ ವೈರಲ್ ಆಗಿದೆ.

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖದೀಮರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರ ಪೈಕ್ ಒಬ್ಬ ಆರೋಪಿ ಸೆರೆ ಸಿಕ್ಕಿದ್ದಾನೆ. ಹೆಬ್ಬಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಳತನ, ಡಕಾಯಿತಿ, ಸಾರ್ವಜನಿಕರಿಗೆ ಬೆದರಿಕೆ‌ ಹಾಕುತ್ತಿದ್ದ ಹಿನ್ನೆಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂರು ಜನರ ತಂಡದಿಂದ ರಾಬರಿಗೆ ಯತ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಅಮಾನ್ ಎಂಬುವನನ್ನು ಅಡ್ಡಹಾಕಿ ಆರೋಪಿಗಳು ರಾಬರಿ ಮಾಡಿದ್ದಾರೆ. ಅಮಾನ್ ದ್ವಿಚಕ್ರ ವಾಹನದಲ್ಲಿ ಅತ್ತಿಬೆಲೆ ಮೂಲಕ ತಮಿಳುನಾಡಿಗೆ ಹೊರಟಿದ್ದರು, ಚೆಕ್ ಪೋಸ್ಟ್​ನಲ್ಲಿ ಪೋಲಿಸರು ಅಡ್ಡ ಹಾಕಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಆಗ ಸಂತೋಷ್ ಎಂಬಾತ ಸಿಕ್ಕಿ ಹಾಕಿಕೊಂಡಿದ್ದಾನೆ. 21 ವರ್ಷದ ಆಸುಪಾಸು ವಯಸ್ಸಿನ ಯುವಕರ ತಂಡ ಈ ಕೃತ್ಯ ಎಸಗಿದೆ ಎನ್ನುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಕಳೆದ ಸಾಕಷ್ಟು ದಿನಗಳಿಂದ ಕಾರ್ಮಿಕರ ಬಳಿ ರಾಬರಿ ಮಾಡುತ್ತಿದ್ದ ಈ ತಂಡ, ಕಾರ್ಮಿಕರ ಬಳಿ ಇದ್ದ ಮೊಬೈಲ್, ಹಣ ಕಸಿದು ಪರಾರಿಯಾಗುತ್ತಿತ್ತು. ಪ್ರತಿರೋಧ ತೋರಿದಾಗ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದರು. ನೊಂದ ಜನ ಈ ಕುರಿತು ಪೊಲೀಸರಿಗೆ ದೂರು ನೀಡಿತ್ತು, ಸದ್ಯ ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೋಲಿಸರ ಯಶಸ್ಸಿ ಕಾರ್ಯಾಚರಣೆಯಿಂದ ಆರೋಪಿ ಬಂಧನವಾಗಿದೆ. ತಪ್ಪಿಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

ಬೆಂಗಳೂರು: ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಕೆ; ಯುವತಿ ಮೇಲೆ ದೌರ್ಜನ್ಯವೆಸಗಿದ ಐವರ ಬಂಧನ

Published On - 12:46 pm, Wed, 29 September 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ