AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮನೆ ಸುತ್ತಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; ಬಂಧಿತನಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ

ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿ ಸೈಯದ್​ನಿಂದ 20 ಲಕ್ಷ ಮೌಲ್ಯದ 407 ಗ್ರಾಂ ಚಿನ್ನಾಭರಣ, 2500 ಗ್ರಾಂ ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮನೆ ಮನೆ ಸುತ್ತಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; ಬಂಧಿತನಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ
ಸೈಯದ್ ಅಹಮದ್(38) ಬಂಧಿತ ಆರೋಪಿ
TV9 Web
| Edited By: |

Updated on:Nov 23, 2021 | 8:38 AM

Share

ಬೆಂಗಳೂರು: ಹಗಲು ವೇಳೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಯದ್ ಅಹಮದ್(38) ಬಂಧಿತ ಆರೋಪಿ. ಬೆಂಗಳೂರಿನ ಜ್ಞಾನಭಾರತಿ ಠಾಣೆಯ ಪೊಲೀಸರು ಸೈಯದ್​ನನ್ನು ಬಂಧಿಸಿದ್ದು (Arrest), ಬಂಧಿತನಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಬಂಧನದಿಂದ ಒಟ್ಟು ಏಳು ಪ್ರಕರಣಗಳು ಬೆಳಕಿಗೆ ಬಂದಿದೆ. ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಆ ನಂತರ ಮನೆ ಬಳಿ ಬಂದು ಹತ್ತಾರು ಬಾರಿ ಕಾಲಿಂಗ್ ಬೆಲ್ ಮಾಡುತ್ತಿದ್ದ. ಬಾಗಿಲು ತೆರೆದರೆ ವಿಳಾಸ ಕೇಳಿ ವಾಪಸ್ ಬರುತ್ತಿದ್ದ. ಇನ್ನು ಯಾರೂ ಇಲ್ಲದಿದ್ದರೆ ಮನೆ ಬಾಗಿಲು ಒಡೆದು ಒಳಹೋಗುತ್ತಿದ್ದ ಎಂದು ತನಿಖೆ ವೇಳೆ ಆರೋಪಿ ಸೈಯದ್ ಮಾಹಿತಿ ನೀಡಿದ್ದಾನೆ.

ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿ ಸೈಯದ್​ನಿಂದ 20 ಲಕ್ಷ ಮೌಲ್ಯದ 407 ಗ್ರಾಂ ಚಿನ್ನಾಭರಣ, 2500 ಗ್ರಾಂ ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ನೆಲಮಂಗಲ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಕನಸವಾಡಿ ನಿವಾಸಿ ಲೋಕೇಶ್ ಚಾರ್‌ಗೆ ಸೇರಿದ ಬೈಕ್ ಕಳ್ಳತನವಾಗಿದೆ. ನೆಲಮಂಗಲ ಬಸ್ ನಿಲ್ದಾಣದ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿ ವಾಪಸ್ ಬರುವಷ್ಟರಲ್ಲಿ ಬೈಕ್​ ಕಳ್ಳತನವಾಗಿದೆ. ಈ ಸಂಬಂಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ; 6 ಆರೋಪಿಗಳ ಬಂಧನ

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶಕ್ಕೆ

Published On - 8:32 am, Tue, 23 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ