AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PayCM: ಬೊಮ್ಮಾಯಿಗೆ ಅವಹೇಳನ ಮಾಡಿದ್ದ ಪೇಸಿಎಂ ಪೋಸ್ಟರ್: ಪೊಲೀಸ್ ವಶಕ್ಕೆ ಇಬ್ಬರು, ಠಾಣೆಗೆ ಬಂದ ಡಿಕೆ ಶಿವಕುಮಾರ್

ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸರಿಂದ ಮಾಹಿತಿ ಪಡೆಯುತ್ತಿದ್ದಾರೆ.

PayCM: ಬೊಮ್ಮಾಯಿಗೆ ಅವಹೇಳನ ಮಾಡಿದ್ದ ಪೇಸಿಎಂ ಪೋಸ್ಟರ್: ಪೊಲೀಸ್ ವಶಕ್ಕೆ ಇಬ್ಬರು, ಠಾಣೆಗೆ ಬಂದ ಡಿಕೆ ಶಿವಕುಮಾರ್
ಬೆಂಗಳೂರಿನ ವಿವಿಧೆಡೆ ರಾರಾಜಿಸಿದ್ದ ಪೇಸಿಎಂ ಪೋಸ್ಟರ್​
TV9 Web
| Edited By: |

Updated on:Sep 22, 2022 | 11:49 AM

Share

ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರದೊಂದಿಗೆ ರೂಪಿಸಿದ್ದ ಕ್ಯುಆರ್​ ಕೋಡ್ ಒಳಗೊಂಡಿದ್ದ ‘ಪೇಸಿಎಂ’ ಪೋಸ್ಟರ್ ಅಂಟಿಸಿದ್ದ ಐವರನ್ನು ಬುಧವಾರ ರಾತ್ರಿರಾತ್ರಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ​ ಸೋಷಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥ ಬಿ.ಆರ್.ನಾಯ್ಡು, ಸೋಷಿಯಲ್ ಮೀಡಿಯಾ ಸಂಯೋಜಕ ಗಗನ್, ಪವನ್, ಸೋಷಿಯಲ್ ಮೀಡಿಯಾ ಭಾಗದ ಸಂಜಯ್ ಮತ್ತು ವಿಶ್ವನಾಥ್ ಪ್ರಸ್ತುತ ಪೊಲೀಸರ ವಶದಲ್ಲಿದ್ದಾರೆ. ಪೇಸಿಎಂ ಪೋಸ್ಟರ್​ಗೆ ಸಂಬಂಧಿಸಿದಂತೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಅವಹೇಳನ ಮಾಡಲೆಂದು ‘ಪೇ ಸಿಎಂ’ (PayCM) ಪೋಸ್ಟರ್​​ ಅಭಿಯಾನ ಮಾಡಿದ್ದ ಆರೋಪದ ಮೇಲೆ ಹೈಗ್ರೌಂಡ್ಸ್​ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಇದೀಗ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್​ ಬುಧವಾರ ದೊಡ್ಡ ಅಭಿಯಾನ ನಡೆಸಿತ್ತು. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದರು. ‘ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು’ ಎಂದು ಬೇಸರ ವ್ಯಕ್ತಪಡಿಸಿದ್ದರು. ಕಾಂಗ್ರೆಸ್​ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಕ್ಯುಆರ್​ ಕೋಡ್​ ಮಾದರಿಯನ್ನು ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್​ ಬಿಡುಗಡೆ ಮಾಡಿತ್ತು.

ಅಭಿಯಾನವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ, ‘ಪೇಸಿಎಂ ಅಭಿಯಾನ ವೈಯಕ್ತಿಕವಾಗಿ ಮಾಡಿರುವುದಲ್ಲ. ಸಾರ್ವಜನಿಕವಾಗಿ ಚರ್ಚೆ ಆಗಿರುವುದನ್ನು ಪೋಸ್ಟರ್ ಮೂಲಕ ಎಲ್ಲರ ಗಮನಕ್ಕೆ ತಂದಿದ್ದೇವೆ. ಈ ಆರೋಪಗಳಿಗೆ ಉತ್ತರ ಕೊಡಬೇಕಾದವರು ಬಿಜೆಪಿಯವರು. ಆದರೆ ಚರ್ಚೆ ಮಾಡಲು ಬಿಜೆಪಿಯವರು ಹೆದರುತ್ತಿದ್ದಾರೆ’ ಎಂದಿದ್ದರು.

ಪೋಸ್ಟರ್​ ವಿಚಾರವಾಗಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದ ಬಿಜೆಪಿ ನಾಯಕ ಸಿ.ಟಿ.ರವಿ, ‘ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಟೂಲ್‌ ಕಿಟ್ ತಯಾರು ಮಾಡಿದೆ. 40 ಪರ್ಸೆಂಟ್ ಸರ್ಕಾರ ಎಂದು ಮೂರ್ನಾಲ್ಕು ತಿಂಗಳಿನಿಂದ ಹೇಳುತ್ತಿರುವ ಕಾಂಗ್ರೆಸ್​ ಸಾಕ್ಷಿ ಸಮೇತ ಒಂದಾದರೂ ದೂರು ಕೊಟ್ಟಿಲ್ಲ. ಈಗ ಲೋಕಾಯುಕ್ತ ಸನ್ನದ್ಧವಾಗಿದೆ. ಸುಳ್ಳನ್ನು ಸಾವಿರ ಸಲ ಹೇಳಿ ಸತ್ಯ ಮಾಡಲು ಅವರು ಪ್ರಯತ್ನಿಸುತ್ತಿದ್ದಾರೆ’ ಎಂದು ರವಿ ವಾಗ್ದಾಳಿ ನಡೆಸಿದ್ದರು.

ಬೆಂಗಳೂರಿನ ಕ್ವೀನ್ಸ್​ ರೋಡ್, ಜಯಮಹಲ್, ಕಂಟೋನ್​ಮೆಂಟ್ ಸುತ್ತಮುತ್ತ ಗೋಡೆಗಳಿಗೆ ಅಂಟಿಸಿದ್ದ ‘ಪೇಸಿಎಂ’ ಪೋಸ್ಟರ್​ಗಳನ್ನು ಬಿಜೆಪಿ ಕಾರ್ಯಕರ್ತರು ತೆರವುಗೊಳಿಸಿದ್ದರು. ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅಭಿಯಾನದ ಕುರಿತು ಪ್ರತಿಕ್ರಿಯಿಸಿ, ‘ಹೈಗ್ರೌಂಡ್ಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದಿದ್ದರು.

Published On - 10:17 am, Thu, 22 September 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ