AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಸ್ಪೀಟ್ ಅಡ್ಡೆ ಮೇಲೆ‌ ಪೊಲೀಸರ ದಾಳಿ; 100ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಬೆಂಗಳೂರಿನ ಬಸವೇಶ್ವರನಗರ(Basaveshwaranagara)ದಲ್ಲಿ ಇಸ್ಪೀಟ್​ ಅಡ್ಡೆ(gambling)ಮೇಲೆ ಪೊಲೀಸರು ದಾಳಿ ಮಾಡಿದ್ದು, ಕ್ಲಬ್ ಮಾಲೀಕ ಸೇರಿದಂತೆ 100ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಡಿಗ ಎಂಬಾತ ನಡೆಸುತ್ತಿದ್ದ ಇಸ್ಪೀಟ್ ಕ್ಲಬ್ ಮೇಲೆ ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಸ್ಪೀಟ್ ಅಡ್ಡೆ ಮೇಲೆ‌ ಪೊಲೀಸರ ದಾಳಿ; 100ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ
ಆರೋಪಿ ಬಂಧನ
Jagadish PB
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 22, 2023 | 10:34 PM

Share

ಬೆಂಗಳೂರು, ಡಿ.22: ಬೆಂಗಳೂರಿನ ಬಸವೇಶ್ವರನಗರ(Basaveshwaranagara)ದಲ್ಲಿ ಇಸ್ಪೀಟ್​ ಅಡ್ಡೆ(gambling)ಮೇಲೆ ಪೊಲೀಸರು ದಾಳಿ ಮಾಡಿದ್ದು, ಕ್ಲಬ್ ಮಾಲೀಕ ಸೇರಿದಂತೆ 100ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಡಿಗ ಎಂಬಾತ ನಡೆಸುತ್ತಿದ್ದ ಇಸ್ಪೀಟ್ ಕ್ಲಬ್ ಮೇಲೆ ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇನ್ನು ಈಗಾಗಲೇ ಹಲವು ಬಾರಿ ದಾಳಿ ನಡೆಸಿ, ಎಷ್ಟು ಸಾರಿ ಹೇಳಿದರೂ ಪದೇ ಪದೇ ಓಪನ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿದ್ದ ಹಿನ್ನಲೆ ಇಂದು ಮತ್ತೆ ರೇಡ್​ ಮಾಡಲಾಗಿದೆ. ಈ ಕುರಿತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಸ್ತೆಯಲ್ಲೆ‌ ಬೆಂಕಿ ಹತ್ತಿ ಹೊತ್ತಿ ಉರಿದ ಓಮಿನಿ

ಉತ್ತರ ಕನ್ನಡ: ಶಿರಸಿ ತಾಲೂಕಿನ ಬನವಾಸಿ ಬಳಿ ರಸ್ತೆಯಲ್ಲಿಯೇ ಓಮಿನಿ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಚಿದಾನಂದ ಗಣಪತಿ ನಾಯ್ಕ್​ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು(ಡಿ.22) ಶಿರಸಿ ತಾಲೂಕಿನ ಬನವಾಸಿ-ಹರೀಶಿ ಮಾರ್ಗದ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ರಾಮನಗರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಲಾರಿ ಹರಿದು ಬೈಕ್ ಸವಾರ ಸಾವು

ಚಿಕ್ಕಬಳ್ಳಾಪುರ : ಬೈಕ್ ಮೇಲೆ ಲಾರಿ ಹರಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಸವಾರ ಮೋಹನ್ (21) ಎಂಬುವವರು ಮೃತಪಟ್ಟಿದ್ದು, ಶವವನ್ನ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇನ್ನು ಲಾರಿ ಚಾಲಕನ ವಿರುದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್