AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದಿಟ್ಟಿದ್ದಾರೆ: ಶಂಕಿತ ಉಗ್ರ ಸಹೋದರನ ಆರೋಪ

ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಿನ್ನೆ ಬಂಧನಕ್ಕೊಳಗಾದ ಶಂಕಿತ ಐವರು ಉಗ್ರರರ ಪೈಕಿ ಜಾಹಿದ್ ತಬ್ರೇಜ್​ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದಿಟ್ಟಿದ್ದಾರೆ. ಎಂದು ಶಂಕಿತ ಉಗ್ರ ಜಾಹಿದ್​​ ತಬ್ರೇಜ್ ಸಹೋದರ ಹೇಳಿದ್ದಾರೆ.

ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದಿಟ್ಟಿದ್ದಾರೆ: ಶಂಕಿತ ಉಗ್ರ ಸಹೋದರನ ಆರೋಪ
ಗ್ರೆನೇಡ್​, ಬಂಧಿತ ಶಂಕಿತ ಉಗ್ರ ಜಾಹಿದ್ ತಬ್ರೇಜ್
Jagadisha B
| Edited By: |

Updated on:Jul 20, 2023 | 5:16 PM

Share

ಬೆಂಗಳೂರು, ಜುಲೈ 20: ನಿನ್ನೆ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರರ (Suspected terrorist) ಪೈಕಿ ಜಾಹಿದ್ ತಬ್ರೇಜ್​ ಎಂಬಾತನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದು ಇಟ್ಟಿದ್ದಾರೆ ಎಂದು ಶಂಕಿತ ಉಗ್ರ ಜಾಹಿದ್​​ ತಬ್ರೇಜ್ ಸಹೋದರ ಅವೇಜ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ ಪೊಲೀಸರು ತಮ್ಮನನ್ನು ಕರೆದುಕೊಂಡು ಬಂದಿದ್ದು, ಗ್ರೆನೇಡ್​ ತಂದು ಇಟ್ಟಿದ್ದಾರೆ ಎಂದರು.

ನನ್ನ ಸಹೋದರ ಅಂತಹ ಕೆಲಸ ಮಾಡುವವನಲ್ಲ.​ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡು ತನ್ನಪಾಡಿಗೆ ತಾನಿದ್ದ. ನಾನು ಮತ್ತು ಸಹೋದರ ಇಬ್ಬರೇ ಮನೆಯಲ್ಲಿ ದುಡಿಯವವರು ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

2017ರಲ್ಲಿ ಜುನೈದ್​ ಜೊತೆ ಕೇಸ್​​ವೊಂದರಲ್ಲಿ ಅರೆಸ್ಟ್​ ಆಗಿದ್ದ. ಕ್ಯಾಬ್ ಓಡಿಸುವಾಗ ಜುನೈದ್ ಕರೆದೊಯ್ದು ಹೀಗೆ ಮಾಡಿದ್ದ. ಬಳಿಕ ಜುನೈದ್​​ ಸಹವಾಸವನ್ನೇ ಜಾಹಿದ್ ತಬ್ರೇಜ್ ಬಿಟ್ಟಿದ್ದ. ನಾವು ಸಂಸಾರಸ್ಥರು, ನಾವು ಏಕೆ ಗ್ರೆನೇಡ್ ಇಟ್ಟುಕೊಳ್ಳುತ್ತೇವೆ. ನನ್ನ ತಮ್ಮ ಈ ರೀತಿಯ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಗ್ರೆನೇಡ್​ ಅಷ್ಟೇ ಅಲ್ಲ, 45 ಜೀವಂತ ಗುಂಡುಗಳು, ಏಳು ಪಿಸ್ತೂಲ್​​ಗಳು ಪತ್ತೆ

ಸದ್ಯ ಅರೆಸ್ಟ್ ಆಗಿರುವ ಐವರ ಬಳಿ ಒಟ್ಟು 45 ಜೀವಂತ ಗುಂಡುಗಳು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇದೆಲ್ಲವನ್ನು ಹೊಂದಿಸಬೇಕು ಅಂದರೆ ಅದಕ್ಕೆ ಹಣ ಬೇಕು. ಈ ಹಣದ ವ್ಯವಸ್ಥೆ ಯನ್ನು ಖುದ್ದು ಎ2 ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಮಾಡುತ್ತಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

2017 ರಲ್ಲಿ ಕೊಲೆ ಕೇಸ್,​ 2020 ರಲ್ಲಿ ರಕ್ತ ಚಂದನ ಕೇಸ್, 2021ರಲ್ಲಿ ಎರಡು ಬಾರಿ ದರೋಡೆಗೆ ಸಂಚು ಕೇಸ್​ನಲ್ಲಿ ಜೈಲು ಸೇರಿದ್ದ. ನಂತರ ಜೈಲಿನಿಂದ ಹೊರ ಬಂದ ಜುನೈದ್ ನಾಪತ್ತೆ ಆಗಿದ್ದ, ಜುನೈದ್ ಮಿಡಲ್ ಈಸ್ಟ್​ನ ಒಂದು ದೇಶದಲ್ಲಿ ಕುಳಿತು ಏನು ಏನು ಮಾಡಬೇಕು ಎಂದು ಮಾಹಿತಿ ನೀಡುತ್ತಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:08 pm, Thu, 20 July 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ