AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದಿಟ್ಟಿದ್ದಾರೆ: ಶಂಕಿತ ಉಗ್ರ ಸಹೋದರನ ಆರೋಪ

ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಿನ್ನೆ ಬಂಧನಕ್ಕೊಳಗಾದ ಶಂಕಿತ ಐವರು ಉಗ್ರರರ ಪೈಕಿ ಜಾಹಿದ್ ತಬ್ರೇಜ್​ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದಿಟ್ಟಿದ್ದಾರೆ. ಎಂದು ಶಂಕಿತ ಉಗ್ರ ಜಾಹಿದ್​​ ತಬ್ರೇಜ್ ಸಹೋದರ ಹೇಳಿದ್ದಾರೆ.

ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದಿಟ್ಟಿದ್ದಾರೆ: ಶಂಕಿತ ಉಗ್ರ ಸಹೋದರನ ಆರೋಪ
ಗ್ರೆನೇಡ್​, ಬಂಧಿತ ಶಂಕಿತ ಉಗ್ರ ಜಾಹಿದ್ ತಬ್ರೇಜ್
Jagadisha B
| Edited By: |

Updated on:Jul 20, 2023 | 5:16 PM

Share

ಬೆಂಗಳೂರು, ಜುಲೈ 20: ನಿನ್ನೆ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರರ (Suspected terrorist) ಪೈಕಿ ಜಾಹಿದ್ ತಬ್ರೇಜ್​ ಎಂಬಾತನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರೇ ನಮ್ಮ ಮನೆಗೆ ಗ್ರೆನೇಡ್​ ತಂದು ಇಟ್ಟಿದ್ದಾರೆ ಎಂದು ಶಂಕಿತ ಉಗ್ರ ಜಾಹಿದ್​​ ತಬ್ರೇಜ್ ಸಹೋದರ ಅವೇಜ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ ಪೊಲೀಸರು ತಮ್ಮನನ್ನು ಕರೆದುಕೊಂಡು ಬಂದಿದ್ದು, ಗ್ರೆನೇಡ್​ ತಂದು ಇಟ್ಟಿದ್ದಾರೆ ಎಂದರು.

ನನ್ನ ಸಹೋದರ ಅಂತಹ ಕೆಲಸ ಮಾಡುವವನಲ್ಲ.​ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡು ತನ್ನಪಾಡಿಗೆ ತಾನಿದ್ದ. ನಾನು ಮತ್ತು ಸಹೋದರ ಇಬ್ಬರೇ ಮನೆಯಲ್ಲಿ ದುಡಿಯವವರು ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

2017ರಲ್ಲಿ ಜುನೈದ್​ ಜೊತೆ ಕೇಸ್​​ವೊಂದರಲ್ಲಿ ಅರೆಸ್ಟ್​ ಆಗಿದ್ದ. ಕ್ಯಾಬ್ ಓಡಿಸುವಾಗ ಜುನೈದ್ ಕರೆದೊಯ್ದು ಹೀಗೆ ಮಾಡಿದ್ದ. ಬಳಿಕ ಜುನೈದ್​​ ಸಹವಾಸವನ್ನೇ ಜಾಹಿದ್ ತಬ್ರೇಜ್ ಬಿಟ್ಟಿದ್ದ. ನಾವು ಸಂಸಾರಸ್ಥರು, ನಾವು ಏಕೆ ಗ್ರೆನೇಡ್ ಇಟ್ಟುಕೊಳ್ಳುತ್ತೇವೆ. ನನ್ನ ತಮ್ಮ ಈ ರೀತಿಯ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಗ್ರೆನೇಡ್​ ಅಷ್ಟೇ ಅಲ್ಲ, 45 ಜೀವಂತ ಗುಂಡುಗಳು, ಏಳು ಪಿಸ್ತೂಲ್​​ಗಳು ಪತ್ತೆ

ಸದ್ಯ ಅರೆಸ್ಟ್ ಆಗಿರುವ ಐವರ ಬಳಿ ಒಟ್ಟು 45 ಜೀವಂತ ಗುಂಡುಗಳು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇದೆಲ್ಲವನ್ನು ಹೊಂದಿಸಬೇಕು ಅಂದರೆ ಅದಕ್ಕೆ ಹಣ ಬೇಕು. ಈ ಹಣದ ವ್ಯವಸ್ಥೆ ಯನ್ನು ಖುದ್ದು ಎ2 ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಮಾಡುತ್ತಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

2017 ರಲ್ಲಿ ಕೊಲೆ ಕೇಸ್,​ 2020 ರಲ್ಲಿ ರಕ್ತ ಚಂದನ ಕೇಸ್, 2021ರಲ್ಲಿ ಎರಡು ಬಾರಿ ದರೋಡೆಗೆ ಸಂಚು ಕೇಸ್​ನಲ್ಲಿ ಜೈಲು ಸೇರಿದ್ದ. ನಂತರ ಜೈಲಿನಿಂದ ಹೊರ ಬಂದ ಜುನೈದ್ ನಾಪತ್ತೆ ಆಗಿದ್ದ, ಜುನೈದ್ ಮಿಡಲ್ ಈಸ್ಟ್​ನ ಒಂದು ದೇಶದಲ್ಲಿ ಕುಳಿತು ಏನು ಏನು ಮಾಡಬೇಕು ಎಂದು ಮಾಹಿತಿ ನೀಡುತ್ತಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:08 pm, Thu, 20 July 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ